ಚಿತ್ರದುರ್ಗ | 7 ಗಂಟೆ ನಿರಂತರ ವಿದ್ಯುತ್‌ ಪೂರೈಕೆಗೆ ರೈತರ ಆಗ್ರಹ

Date:

Advertisements
  • ಕೆಇಬಿ ಕಚೇರಿಗೆ ಮುತ್ತಿಗೆ; ಅಧಿಕಾರಿಗಳಿಗೆ ತರಾಟೆ
  • ಮೇ 17ರ ವೇಳೆಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ

ಬೇಸಿಗೆ ಕಾಲ ಆರಂಭವಾಗಿದ್ದು, ಹತ್ತಿ, ರಾಗಿ ಬೆಳೆಗಳಿಗೆ ನೀರು ಹಾಯಿಸಲು ಸೂಕ್ತ ಪ್ರಮಾಣದಲ್ಲಿ ಕನಿಷ್ಟ 7 ಗಂಟೆಗಳ ಕಾಲ ವಿದ್ಯುತ್‌ ಪೂರೈಸುವಂತೆ ಆಗ್ರಹಿಸಿ ರೈತರು ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಹಿಂಡಸ್ಕಟ್ಟೆ ಕೆಇಬಿಯಿಂದ ಯಲ್ಲದಕೆರೆ ಗ್ರಾಮದ ಕರೇಕೆಂಚಯ್ಯನಹಟ್ಟಿ ಸುತ್ತಮುತ್ತಲಿನ ಪ್ರದೇಶಗಳ ರೈತರಿಗೆ ಕಳೆದ 15 ದಿನಗಳಿಂದ ಸರಿಯಾಗಿ ವಿದ್ಯುತ್‌ ಪೂರೈಸುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ಈ ಕುರಿತು ರೈತ ಪ್ರಸನ್ನ ಕುಮಾರ್‌ ಅವರು ಈದಿನ.ಕಾಮ್‌ ಜೊತೆಗೆ ಮಾತನಾಡಿ, “ಪ್ರಸ್ತುತ ರಾಗಿ ಮತ್ತು ಹತ್ತಿ ಬೆಳೆ ಹರತೆ ಹೊಡೆದಿದ್ದು, ಈ ಸಂದರ್ಭದಲ್ಲಿ ಬೆಳೆಗೆ ನೀರು ಹಾಯಿಸುವುದು ಅನಿವಾರ್ಯವಾಗಿದೆ. ಆದರೆ, ಅಧಿಕಾರಿಗಳು ಇನ್ನು ಹದಿನೈದು ದಿನ ಕಳೆದ ನಂತರ ಸಮಸ್ಯೆ ಪರಿಹರಿಸುವುದಾಗಿ ಹೇಳುತ್ತಿದ್ದಾರೆ. ಹದಿನೈದು ದಿನದಲ್ಲಿ ಮಳೆಯ ಬರಲಿದೆ. ಆಗ ವಿದ್ಯುತ್‌ ಅವಶ್ಯಕತೆಯೇ ಇರುವುದಿಲ್ಲ” ಎಂದರು.

Advertisements

“ಇನ್ನ ಒಂದು ತಿಂಗಳು ಕಳೆದರೆ ಈರುಳ್ಳಿ ಹಾಕುತ್ತೇವೆ. ಆದರೆ ಕೆಇಬಿ ಅಧಿಕಾರಿಗಳು ನಮಗೆ ಸಾಕಷ್ಟು ವಿದ್ಯುತ್‌ ನೀಡುತ್ತಿಲ್ಲ. ಒಂದೇ ಲೈನ್‌ನಲ್ಲಿ ನಮಗೆ ಮೂರು ಗಂಟೆ ಮಾತ್ರವೇ ವಿದ್ಯುತ್‌ ನೀಡಿ, ಉಳಿದ ಅವದಿಯಲ್ಲಿ ಬೇರೆ ಗ್ರಾಮಕ್ಕೆ ನೀಡುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಸಚಿವ ಸುಧಾಕರ್‌ ಉಡುಗೊರೆ ನೀಡಿದ್ದ ಗ್ಯಾಸ್‌-ಸ್ಟೌ ಸ್ಫೋಟ

“ಇಂದು ರೈತರು ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿದ್ದ ವೇಳೆ, ಮುಂದಿನ ತಿಂಗಳು 15ರ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ವಿಭಾಗಿಯ ಅಧಿಕಾರಿ ಮುಸ್ತಾಕ್‌ ಭರವಸೆ ನೀಡಿದ್ದಾರೆ. ಅಷ್ಟರೊಳಗೆ ತುಂಬಾ ತಡ ಆಗಲಿದೆ. ರೈತರು ಇದರಿಂದ ಬೆಳೆ ನಷ್ಟ ಅನುಭವಿಸಬೇಕಾಗುತ್ತದೆ” ಎಂದರು.

ಈ ವೇಳೆ ಗ್ರಾಮಸ್ಥರಾದ ಅವಿನಾಶ್, ಸುಧಾಕರ್,  ಮಂಜುನಾಥ್, ಸಂತೋಷ್, ಕೃಷ್ಣ, ಕೃಷ್ಣಮೂರ್ತಿ ಹಾಗೂ ಶಿವಣ್ಣ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X