ವಿಜಯನಗರ | ಕಾಡುಪ್ರಾಣಿಗಳ ದಾಳಿಯಿಂದ ಜೋಳದ ಬೆಳೆ ನಾಶ; ರೈತ ಕಂಗಾಲು

Date:

Advertisements
  • ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ಕಳೆದಕೊಂಡ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
  • ಮನವಿಗೆ ಕ್ಯಾರೇ ಎನ್ನದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಕಾಳು ಕಟ್ಟುವ ಹಂತದಲ್ಲಿದ್ದ ಜೋಳದ ಬೆಳೆಗೆ ನುಗ್ಗಿದ ಕರಡಿ ಹಾಗೂ ಹಂದಿಗಳ ಹಿಂಡು ಸಂಪೂರ್ಣ ಬೆಳೆ ನೆಲಕ್ಕುರಳಿಸಿವೆ.

ಗ್ರಾಮದ ಮಲಿಯಪ್ಪ ಎಂಬವರಿಗೆ ಸೇರಿದ ಒಂದು ಎಕರೆಯಲ್ಲಿ ಬೆಳೆದ ಜೋಳ ಕಾಡುಪ್ರಾಣಿಗಳು ನಾಶಪಡಿಸಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ರೈತ ಕಂಗಲಾಗಿದ್ದಾನೆ.

ರೈತ ಮಲಿಯಪ್ಪ ಈದಿನ.ಕಾಮ್ ದೊಂದಿಗೆ ಮಾತನಾಡಿ, “ಕಳೆದ 15 ದಿನಗಳಿಂದ ಗ್ರಾಮದ ಹಲವು ರೈತರ ಜಮೀನುಗಳಿಗೆ ಕರಡಿ ಮತ್ತು ಕಾಡು ಹಂದಿಗಳ ಗುಂಪು ದಾಳಿ ಮಾಡಿ ಬೆಳೆ ನಾಶಪಡಿಸುತ್ತಿವೆ. ಬೆಳೆ ಕಳೆದಕೊಂಡ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಜೆಯಾದರೆ ಸಾಕು ಕಾಡುಪ್ರಾಣಿಗಳು ಜಮೀನುಗಳಿಗೆ ದಾಳಿಯಿಡುತ್ತಿವೆ, ಕೂಡಲೇ ಅರಣ್ಯ ಇಲಾಖೆ ಎಚ್ಚೆತುಕೊಂಡು ಬೆಳೆ ನಾಶಪಡಿಸುವುದನ್ನು ತಪ್ಪಿಸಿ ರೈತರ ಬೆಳೆ ರಕ್ಷಣೆಗೆ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಏರ್‌ಲೈನ್ಸ್ ಹಗಲುಗನಸಿನಿಂದ ರಾಜ್ಯ ಸರ್ಕಾರ ಹಿಂದೆ ಸರಿಯಲಿ

ಮಳೆಯಿಲ್ಲದೆ ಕಂಗಾಲಾದ ರೈತನಿಗೆ ಕಾಡು ಪ್ರಾಣಿಗಳ ಹಾವಳಿಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

ರಸ್ತೆ ತುಂಬಾ ತಗ್ಗು ಗುಂಡಿಗಳದ್ದೇ ಕಾರುಬಾರು; ಸವಾರರ ಜೀವಕ್ಕೆ ‘ಗ್ಯಾರಂಟಿ’ಯೇ ಇಲ್ಲ!

ರಾಯಚೂರಿನ ಅನ್ವರಿ - ಹಟ್ಟಿ ಚಿನ್ನದ ಗಣಿ ಪಟ್ಟಣಕ್ಕೆ ಹೋಗುವ ಮುಖ್ಯ...

Download Eedina App Android / iOS

X