ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಜನ್ಮದಿನದ ಅಂಗವಾಗಿ ರೈತರ ರಥಯಾತ್ರೆ; 170ಕ್ಕೂ ಹೆಚ್ಚು ಸಾಧಕರಿಗೆ ರಾಜ್ಯ ಪ್ರಶಸ್ತಿ

Date:

Advertisements

ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಜನ್ಮದಿನದ ಅಂಗವಾಗಿ ಬೆಂಗಳೂರಿನ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದಿಂದ ಅದ್ದೂರಿಯಾಗಿ ರೈತರ ರಥಯಾತ್ರೆಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯಾ. ಸಂತೋಷ್ ಹೆಗಡೆ ನೆರವೇರಿಸಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 170ಕ್ಕೂ ಹೆಚ್ಚು ರೈತರು, ಹಾಲು ಉತ್ಪಾದಕರು, ರೈತ ಮಹಿಳೆಯರು ಹಾಗೂ ಕಲಾವಿದರಿಗೆ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪ್ರದಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಶಿವಮೊಗ್ಗದ ಶ್ರೀ ಪಲ್ಲಕ್ಕಿ ನಾರಾಯಣ ಸ್ವಾಮೀಜಿ ಹಾಗೂ ತಳ್ಳಿಹಾಳ ಸಂಸ್ಥಾನ, ಕೋಡಿಮಠ ಕಾಲಜ್ಞಾನ ಬ್ರಹ್ಮ ಸದ್ಗುರು ಶ್ರೀ ಶರಣಬಸವ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

Advertisements

ಕಾರ್ಯಕ್ರಮದಲ್ಲಿ ಬೆಂಗಳೂರಿನ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಮಂಜುನಾಥ ಬಾಬು, ಸಮಾಜ ಸೇವಕಿ ಅನು ಅಮ್ಮ, ಉಷಾ ಜಮದಗ್ಮಿ, ಶಾಸಕರಾದ ಕೆಂಚನೂರ್‌ ಶಂಕರ್‌, ರಾಜಣ್ಣ, ಬಾಗಲಕೋಟೆ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಮಹಾಂತೇಶ ಹಟ್ಟಿ, ಜೇನು ಕೃಷಿಕ ಶಿರಸಿಯ ಮಧುಕೇಶ್ವರ ಹೆಗ್ಡೆ, ಕುಂದಾಪುರ ದಿನಕರ ಶೆಟ್ಟಿ, ಸಮಾಜ ಸೇವಕಿ ಡಾ. ಪುಷ್ಪ ಹಿರೇಮಠ್‌, ಶೈಲೇಂದ್ರ ನಾಜರೆ, ಅಶೋಕ್‌, ಮಹೇಂದ್ರ ಜೈನ್‌, ಸಂಘದ ಅಧ್ಯಕ್ಷ ಎಂ ಪ್ರಕಾಶ್‌ ತಿಮ್ಲಾಪುರ, ರಾಜ್ಯ, ಜಿಲ್ಲೆ, ಹೋಬಳಿ ಮಟ್ಟದ ಪದಾಧಿಕಾರಿಗಳು, ಮಹಿಳಾ ಘಟಕದ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಂಗಳೂರು | ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿ : ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ರಾಜ್ಯ ಕಾರ್ಯಾಧ್ಯಕ್ಷ ಎಂ. ಬಸವರಾಜ್ ಪ್ರಾಸ್ತಾವಿಕ ಭಾಷಣ ಮಾಡಿದರು. ಚಲನಚಿತ್ರ ನಿರ್ದೇಶಕ ಸುನಿಲ್ ಕುಂಬಾರ್ ಮತ್ತು ರೂಪ ಅವರ ಪೂರ್ವ ಯೋಜನೆಯಂತೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಅನು ಅಮ್ಮ ತಮ್ಮ ಭಾಷಣದಲ್ಲಿ “ರೈತ ಬೆಳೆದರೆ ಮಾತ್ರ ದೇಶ ಬೆಳೆಯುತ್ತದೆ. ರೈತನನ್ನು ಕಡೆಗಣಿಸಿದರೆ ಬಡತನ ನಿಶ್ಚಿತ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

Download Eedina App Android / iOS

X