ಬೆಂಗಳೂರು ದಕ್ಷಿಣ | ಪಟ್ಟಾರೆಡ್ಡಿಪಾಳ್ಯ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಒತ್ತಾಯ: ರೈತ ಸಂಘದಿಂದ ಪ್ರತಿಭಟನೆ

Date:

Advertisements

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬೆಂಗಳೂರು ದಕ್ಷಿಣ ತಾಲ್ಲೂಕಿನ ಪಟ್ಟಾರೆಡ್ಡಿಪಾಳ್ಯ ಗ್ರಾಮದಲ್ಲಿ ರಸ್ತೆಯು ತುಂಬಾ ಕಿರಿದಾಗಿದ್ದು, ಈ ರಸ್ತೆಯಲ್ಲಿ ಪ್ರತಿದಿನವೂ ಹಲವಾರು ಹಳ್ಳಿಗಳ ರೈತರು, ಪ್ರತಿಷ್ಠಿತ ರೆಸಾರ್ಟ್‌ಗಳ ಪ್ರವಾಸಿಗಳು, ಪ್ರತಿಷ್ಠಿತ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಕಿರಿದಾದ ತಿರುವುಗಳನ್ನುಳ್ಳ ಈ ರಸ್ತೆಯಲ್ಲಿ ಪ್ರತಿದಿನವೂ ವಾಹನ ಕಿರಿಕಿರಿ ಉಂಟಾಗುತ್ತಿದೆ ಎಂದು ರೈತ ಸಂಘದ ಕಗ್ಗಲೀಪುರ ತಾಲೂಕು ಘಟಕ ಅಧ್ಯಕ್ಷರಾದ ನದೀಮ್ ಪಾಷ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಾರೆಡ್ಡಿಪಾಳ್ಯ ರಸ್ತೆಗೆ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ವಿನೂತನ ರೀತಿ ಕನಕಪುರ ರಸ್ತೆಯಲ್ಲಿ ದೊಡ್ಡ ಮಟ್ಟದ ಕಟೌಟನ್ನು ಹಾಕಿ ನ.19ರ ಮಂಗಳವಾರ ರೈತ ಸಂಘದಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕಗ್ಗಲೀಪುರ ಕೆರೆಯ ಅಂಚಿನಲ್ಲಿ ಕೆರೆಯ ಸ್ವರೂಪಕ್ಕೆ ಯಾವುದೇ ರೀತಿ ಧಕ್ಕೆ ಆಗದ ರೀತಿಯಲ್ಲಿ 300 ಮೀಟರ್ ಮೇಲ್ ಸೇತುವೆ ನಿರ್ಮಿಸಬೇಕೆಂದು ರೈತ ಸಂಘವು ಸಂಬಂಧಪಟ್ಟ ಜಿಲ್ಲಾ ಪಂಚಾಯತ್ ಇಲಾಖೆಗೆ ಮನವಿಯನ್ನು ಸಲ್ಲಿಸಿ ನಂತರ ಎಲ್ಲಾ ಪ್ರಕ್ರಿಯೆಗಳು ಪ್ರಾರಂಭವಾಗಿ ಅನುದಾನ ಬಿಡುಗಡೆಗೊಳಿಸುವ ಹಂತಕ್ಕೆ ಬಂದು ನಿಂತಿವೆ. ಕರ್ನಾಟಕ ಕೆರೆ ಸಂರಕ್ಷಣೆ ಹಾಗೂ ಅಭಿವೃದ್ಧಿ ಪ್ರಾಧಿಕಾರದಿಂದ ಕೂಡ ಅನುಮತಿಯನ್ನು ಪಡೆದಿದ್ದು ಸ್ಥಳಕ್ಕೆ ನಿರ್ದೇಶಕರು ಆಗಮಿಸಿ ಅನುಮತಿಯನ್ನು ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

Advertisements

ಪ್ರಶಾಂತ್ ಹೊಸದುರ್ಗ ಮಾತನಾಡಿ, 4 ಕೋಟಿ ಅನುದಾನ ಬಿಡುಗಡೆಯಾದರೆ ಕೂಡಲೇ ಕಾಮಗಾರಿ ಪ್ರಾರಂಭಿಸಬಹುದು ಈ ಸಮಸ್ಯೆಯ ಬಗ್ಗೆ ರೈತ ಸಂಘವು ಕಳೆದ ಜೂನ್ ತಿಂಗಳಿನಲ್ಲಿ ದೊಡ್ಡಮಟ್ಟದ ಪ್ರತಿಭಟನೆ ಕೂಡ ನಡೆಸಿ ಈ ಸಮಸ್ಯೆಯ ಬಗ್ಗೆ ಸ್ಥಳೀಯ ಶಾಸಕರಾದ ಎಸ್.ಟಿ ಸೋಮಶೇಖರ್ ಬಳಿ ಕೂಡ ಹೋಗಿ 3 ಬಾರಿ ಚರ್ಚಿಸಿ ಅವರ ಗಮನಕ್ಕೆ ತಂದಿದೆ ಎಂದರು.

IMG 20241119 WA0051

ಶಾಸಕರು ಕೇವಲ ಆಶ್ವಾಸನೆಯನ್ನು ಕೊಡುವುದರಲ್ಲಿ ಮುಂದಾಗಿದ್ದಾರೆಯೇ ಹೊರತು ಈವರೆಗೆ ಅನುದಾನದ ಬಗ್ಗೆ ಎಲ್ಲೂ ಕೂಡ ಚರ್ಚಿಸಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರ ಹಾಕಿದರು. 15 ದಿನಗಳ ಒಳಗಾಗಿ ಕಾಮಗಾರಿ ಪ್ರಾರಂಭವಾಗದೆ ಹೋದಲ್ಲಿ ರಸ್ತೆ ತಡೆ ನಡೆಸುವುದಾಗಿ ಕೂಡ ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಮಂಡ್ಯ | ಸೀಟ್ ಬೆಲ್ಟ್ ಧರಿಸದ ಚಾಲಕನಿಗೆ ₹18 ಸಾವಿರ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು!

ಪ್ರತಿಭಟನೆಯಲ್ಲಿ ಕಗ್ಗಲೀಪುರ ತಾಲೂಕು ಘಟಕ ಮಂಜುನಾಥ್, ವೆಂಕಟೇಶ್, ಶ್ರೀನಿವಾಸ್, ಜಯಕುಮಾರ್, ಪ್ರದೀಪ್, ರಘು ರೆಡ್ಡಿ, ರಾಮಕೃಷ್ಣ ರೆಡ್ಡಿ, ಕೆಂಪಯ್ಯ, ಜಯರಾಮ್, ಪಟ್ಟರೆಡ್ಡಿಪಾಳ್ಯ, ನೌಕಲಪಾಳ್ಯ ಹಾಗೂ ಕಗ್ಗಲೀಪುರ ಗ್ರಾಮಸ್ಥರು ಮತ್ತು ಇನ್ನಿತರರು ಪಾಲ್ಗೊಂಡಿದ್ದರು.

IMG 20241119 WA0049
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X