ಮಂಡ್ಯ | ಅಮುಲ್‌ ಹೇರಿಕೆ ವಿರೋಧಿಸಿ ರೈತಸಂಘ ಪ್ರತಿಭಟನೆ

Date:

  • ರಾಜ್ಯಪಾಲರಿಗೆ ಪತ್ರ ಬರೆದು ಆಕ್ರೋಶ
  • ಕೂಡಲೇ ಮಧ್ಯ ಪ್ರವೇಶಿಸುವಂತೆ ಮನವಿ

ಕರ್ನಾಟಕ ರಾಜ್ಯದ ಕೆಎಂಎಫ್‌ ನಂದಿನಿ ಹಾಲಿನ ಉತ್ಪನ್ನಗಳನ್ನು ದೂರ ಮಾಡಲು ಗುಜರಾತ್ ಮೂಲದ ಅಮುಲ್ ಉತ್ಪನಗಳನ್ನು ಮುಕ್ತ ಮಾರುಕಟ್ಟೆಗೆ ರಾಜ್ಯದಲ್ಲಿ ಅವಕಾಶ ನೀಡಿರುವ ಬಿಜೆಪಿ ಸರ್ಕಾರದ ಹುನ್ನಾರವನ್ನು ಖಂಡಿಸಿ ‘ನಂದಿನಿ ಉಳಿಸಿ’ ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಪತ್ರ ರವಾನಿಸಿದರು.

“ಸಹಕಾರಿ ಕ್ಷೇತ್ರದಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದು, ನಂದಿನಿ ಬ್ರಾಂಡ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ವಾಸಿಯಾಗಿದೆ. ರಾಜ್ಯದ ರೈತಾಪಿ ಅದರಲ್ಲೂ ಸಣ್ಣ, ಅತಿ ಸಣ್ಣ ಹಾಗೂ ಕೃಷಿ ಕಾರ್ಮಿಕರು ಹೈನುಗಾರಿಕೆಯನ್ನು ಅವಲಂಭಿಸಿ ಜೀವನವನ್ನು ಕಟ್ಟಿಕೊಳ್ಳುತ್ತಿದ್ದಾರೆ” ಎಂದು ಪ್ರತಿಭಟನಾಕಾರರು ವಿವರಿಸಿದ್ದಾರೆ.

“ಹೈನುಗಾರಿಕೆ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಿದೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ರಾಜ್ಯದ ಮಾರುಕಟ್ಟೆಗೆ ತಂದು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಾಶ ಮಾಡಲು ಹೊರಟಿದೆ” ಎಂದು ಕಿಡಿಕಾರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಪ್ರಮುಖರ ಸಭೆ ಕರೆದು ಬೆಂಬಲ ಕೋರಿದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಮಧುಚಂದನ್

“ಸರ್ಕಾರದ ಈ ನಿರ್ಧಾರವು ರಾಜ್ಯದ ರೈತರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಒತ್ತು ನೀಡಿ, ರಾಜ್ಯದ ಹಿತಾಶಕ್ತಿಯನ್ನು ಕಾಪಾಡಿಕೊಳ್ಳಲು ಒತ್ತಾಯಿಸಿ, ರಾಜ್ಯಪಾಲರು ಮಧ್ಯ ಪ್ರವೇಶಿಸಿ ರಾಜ್ಯದ ಹೈನುಗಾರಿಕೆಯನ್ನು ಉಳಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಮುಖಂಡರಾದ ನೇತ್ರಾವತಿ, ಹೊಸೂರು ಕುಮಾರ್, ಹೊಸಕೋಟೆ ಬಸವರಾಜು ಹಾಗೂ ಎಲ್ಲ ತಾಲೂಕಿನ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಜರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ...

ಶಿವಮೊಗ್ಗ | ಹದಿನೈದು ವರ್ಷ ಆಡಳಿತ; ನೆಟ್ವರ್ಕ್ ಸಮಸ್ಯೆ ನೀಗಿಸದ ಸಂಸದರು: ಶಾಸಕ ಬೇಳೂರು ಗೋಪಾಲಕೃಷ್ಣ

ಹಳ್ಳಿಗಾಡು ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತಲೆ ದೂರಿದೆ. ಹದಿನೈದು ವರ್ಷದ...

ಗದಗ | ಬಿಜೆಪಿ, ಎಬಿವಿಪಿ ಬೃಹತ್‌ ಪ್ರತಿಭಟನೆ; ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯ

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿಜೆಪಿ ಗದಗ...

ಹಾಸನ | ಸಿಪಿಐಎಂ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಭಾರತ ಉಳಿಸುವಂತೆ ಮತದಾರರಲ್ಲಿ ಮನವಿ

ಕಡುಭ್ರಷ್ಟ ಮತ್ತು ಕೋಮುವಾದಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳನ್ನು ಈ ಲೋಕಸಭಾ...