ವಿಜಯಪುರ | ರೈತರ ಸಮಸ್ಯೆಗೆ ಸ್ಪಂದಿಸದ ಲೈನ್ ಮ್ಯಾನ್ ವರ್ಗಾವಣೆಗೆ ಆಗ್ರಹ

Date:

Advertisements

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇ ಇಂಡಿ ವ್ಯಾಪ್ತಿಯ ಹೆಸ್ಕಾಂ ಲೈನ್‌ ಮ್ಯಾನ್ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಹಾಗಾಗಿ ಕೂಡಲೇ ಅವರನ್ನು ವರ್ಗಾವಣೆ ಮಾಡಿ, ಬೇರೆ ಲೈನ್ ಮ್ಯಾನ್ ನೇಮಕ ಮಾಡಬೇಕೆಂದು ಆಗ್ರಹಿಸಿ ರೈತ ಮುಖಂಡರು ಹೆಸ್ಕಾಂ ಎಇಇಗೆ ಮನವಿ ಸಲ್ಲಿಸಿದರು.

ಈ ವೇಳೆ ಪ್ರಶಾಂತ ಲಾಳಸಂಗಿ ಮಾತನಾಡಿ, “ಹಿರೇ ಇಂಡಿ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಲೈನ್‌ ಮ್ಯಾನ್ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರೈತರು ಸಮಸ್ಯೆ ಕುರಿತು ಅವರಿಗೆ ಮೊಬೈಲ್ ಕರೆ ಮಾಡಿದರೆ ಕರೆ ಸ್ವೀರಿಸುವುದಿಲ್ಲ. ರೈತರ ಸಮಸ್ಯೆಗಳನ್ನು ಆಲಿಸುವುದಲ್ಲ. ವಿದ್ಯುತ್ ತಂತಿ ಕಡಿದು ಬಿದ್ದಿದ್ದರೂ ದುರಸ್ತಿ ಮಾಡುತ್ತಿಲ್ಲ. ಈ ಎಲ್ಲ ಆರೋಪಗಳಿರು ಕಾರಣ ಕೂಡಲೇ ಅವರನ್ನು ಬದಲಾವಣೆ ಮಾಡಬೇಕು. ಇಲ್ಲವಾದರೆ ಹೆಸ್ಕಾಂ ಕಚೇರಿ ಎದುರು ಧರಣಿ ಕುಳಿತುಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಸಿದರು.

ವಿಭಾಗದ ಅಧಿಕಾರಿ ಸಂಗಮೇಶ ಇಮ್ಮನದ್ ಮನವಿ ಸ್ವೀಕರಿಸಿ ಮಾತನಾಡಿ, “ತಮ್ಮ ಮನವಿಯನ್ನು ಎಇಇ ಸಾಹೇಬರ ಗಮನಕ್ಕೆ ತಂದು ಕೂಡಲೇ ಹಿರೇ ಇಂಡಿ ಭಾಗದ ಲೈನ್ ಮ್ಯಾನ್ ಅವರನ್ನು ಬದಲಾವಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಭರವಸೆ ನೀಡಿದರು.

Advertisements

ಇದನ್ನೂ ಓದಿ : ವಿಜಯಪುರ | ಬೇಸಿಗೆ ಬೇಗೆ ನೀಗಲು ಕೆರೆಗಳಿಗೆ ನೀರು: ಶಾಸಕ ಯಶವಂತರಾಯಗೌಡ

ಅಶೋಕ ಆಕಲಾದಿ, ಅನೀಲ ತಾಂಬೆ, ಶ್ರೀಮಂತ ತಾಂಬೆ, ಮಂಜು ದೇವರ, ದಶರಥ ಇಂಗಳೆ ಹಾಗೂ ಕಲ್ಲಪ್ಪ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X