ಮಂಡ್ಯ | ರೈತರಿಗೆ ಬಿತ್ತನೆ ಬೀಜ ಹಂಚಿಕೆ, ರೈತರತ್ನ ಪ್ರಶಸ್ತಿ ವಿತರಣೆ

Date:

Advertisements

ಜಿಎಸ್‌ಎಫ್ ಫೌಂಡೇಶನ್, ಭೂ ಸಿರಿ ರೈತ ಉತ್ಪಾದಕರ ಕಂಪನಿ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ಹಂಚಿಕೆ ಹಾಗೂ ರೈತರತ್ನ ಪ್ರಶಸ್ತಿ ವಿತರಣಾ ಸಮಾರಂಭ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಎಪಿಎಂಸಿ ಅಂಗಳದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಧಾನ್ಯಕ್ಕೆ ಪೂಜೆ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, “ಪ್ರತಿ ವರ್ಷದಂತೆ ಈ ವರ್ಷವೂ ಸಹ ರೈತರಿಗೆ ಬಿತ್ತನೆ ಬೀಜವನ್ನು ಹಂಚಿಕೆ ಕೆಲಸವನ್ನು ಮಾಡಲಾಗುತ್ತಿದೆ. ಕಡಿಮೆ ಇಳುವರಿ ಹೊಂದಿರುವ ಪ್ರದೇಶದಲ್ಲಿ ಸುಮಾರು 4 ಸಾವಿರ ರೈತರನ್ನು ಆಯ್ಕೆ ಮಾಡಿದ್ದು, ಅವರನ್ನು ಪ್ರೋತ್ಸಾಹಿಸಲು ಪ್ರತಿ ಹೆಕ್ಟೇರ್ ಜಮೀನಿಗೆ 6 ಸಾವಿರ ರೂಪಾಯಿ ಪ್ರೋತ್ಸಾಹ ಹಣವನ್ನು ನೀಡಲಾಗುತ್ತಿದೆ. ಅದರಲ್ಲಿ 4.5 ಸಾವಿರ ಪರಿಕರ ಹಾಗೂ 1.5 ಸಾವಿರ ಹಣ ನೇರವಾಗಿ ರೈತರ ಖಾತೆಗೆ ಹಣ ಹಾಕಲಾಗುತ್ತಿದೆ. ಸರಕಾರದ ಯೋಜನೆಗಳನ್ನು ರೈತರು ಉಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು” ಎಂದು ತಿಳಿಸಿದರು.

Advertisements
1001192138

ಕೊಂಡ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರಗಳಿಗೆ ಮಾರಾಟಗಾರರಿಂದ ರೈತರು ಅಧಿಕೃತ ರಶೀದಿ ಪಡೆದುಕೊಳ್ಳಬೇಕು. ಯಾವುದಾರರೂ ತೊಡಕು ಇದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು.

ಇದೇ ಸಂದರ್ಭದಲ್ಲಿ ರೈತರಿಗೆ ರಾಗಿ ಬಿತ್ತನೆ ಬೀಜಗಳನ್ನು ಹಂಚಿಕೆ ಮಾಡಿ ಪ್ರಗತಿಪರ ರೈತರಿಗೆ ಸನ್ಮಾನಿಸಲಾಯಿತು.

1001192218

ನಂತರ ಮೃತ ರೈತರ ಕುಟುಂಬಕ್ಕೆ ಸರಕಾರದ ವತಿಯಿಂದ 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ಸ್ಟಾರ್ ಚಂದ್ರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ್. ಸೇರಿದಂತೆ ಪ್ರಗತಿಪರ ರೈತರು ಹಾಗೂ ಕೃಷಿ, ಅರಣ್ಯ, ತೋಟಗಾರಿಕೆ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X