ಚಿರತೆಯ ಬೆನ್ನಟ್ಟಿ ಮಗಳನ್ನು ರಕ್ಷಿಸಿದ ತಂದೆ

Date:

Advertisements

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದೆ. ಬಾಲಕಿ ಚೀರಿಕೊಂಡ ಕೂಡಲೇ ಸ್ಥಳಕ್ಕೆ ಧಾವಿಸಿದ ಆಕೆಯ ತಂದೆ, ಚಿರತೆಯನ್ನು ಓಡಿಸಿ, ಮಗಳನ್ನು ರಕ್ಷಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.

ಕೊಳ್ಳೇಗಾಲ ವನ್ಯಜೀವಿ ವಿಭಾಗದಲ್ಲಿರುವ ಕಗ್ಗಲಿಗುಂಡಿ ಪೊಡುವಿನಲ್ಲಿ ಘಟನೆ ನಡೆದಿದೆ. ಆರು ವರ್ಷದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದ್ದು, ಆಕೆಯನ್ನು ಎಳೆದೊಯ್ಯಲು ಯತ್ನಿಸಿದೆ. ಈ ವೇಳೆ, ಬಾಲಕಿ ಚೀರಿಕೊಂಡಿದ್ದು, ಬಾಲಕಿಯ ತಂದೆ ಮತ್ತು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದಾರೆ. ಬಾಲಕಿಯ ತಂದೆ ಚಿರತೆಯ ಬಳಿ ಕೂಗಿಕೊಂಡು ಅಡ್ಡಾಡಿದ್ದು, ಗಾಬರಿಗೊಂಡ ಚಿರತೆ ಬಾಲಕಿಯನ್ನು ಬಿಟ್ಟು ಓಡಿಹೋಗಿದೆ.

ಅರಣ್ಯದ ಅಂಚಿನಲ್ಲಿ ಗ್ರಾಮವಿದ್ದು, ಅಲ್ಲಿ 45 ಕುಟುಂಬಗಳು ವಾಸುತ್ತಿವೆ. ಕಾಡು ಪ್ರಾಣಿಗಳಾದ ಆನೆ, ಚಿರತೆಗಳು ಗ್ರಾಮದ ಮೇಲೆ ದಾಳಿ ಮಾಡದಂತೆ ತಡೆಯಲು ಸುತ್ತಲೂ ದೊಡ್ಡ ಕಂದಕವನ್ನು ತೆಗೆಯಲಾಗಿದೆ. ಆದರೂ, ಚಿರತೆ ದಾಳಿ ಮಾಡಿದೆ.

Advertisements

ಬಾಲಕಿಯನ್ನು ರಕ್ಷಿಸಲಾಗಿದ್ದರೂ ಬಾಲಕಿಯ ತಂದೆ ರಾಮು, ಆತನ ಪತ್ನಿ ಲಲಿತಾ ಹಾಗೂ ಗ್ರಾಮಸ್ಥರು ಆಘಾತಗೊಂಡಿದ್ದಾರೆ. ಬಾಲಕಿಯ ಕೆಳ ದವಡೆಗೆ ಮುರಿದಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಬೋನುಗಳನ್ನು ಅಳವಡಿಸಿದ್ದಾರೆ. ಚಿರತೆಗಳ ಮೇಲೆ ಕಣ್ಣಿಡಲು ಅನೇಕ ಕಡೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ ಎಂದು ಮೈಸೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X