ಬೆಳಗಾವಿ | ಮೀನು ಹಿಡಿಯಲು ಹೋಗಿದ್ದ ತಂದೆ ಮಕ್ಕಳು ನೀರುಪಾಲು: ಮೂವರ ಪೈಕಿ ಇಬ್ಬರ ಶವ ಪತ್ತೆ

Date:

Advertisements

ಬೆಳಗಾವಿ ಜಿಲ್ಲೆಯ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ತಂದೆಯೊಂದಿಗೆ ಮೀನುಗಾರಿಕೆಗೆ ಹೋದಾಗ ನೀರುಪಾಲಾಗಿದ್ದ ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿವೆ.

ಬೆನಕನಹೊಳಿಯ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ನೀರುಪಾಲಾಗಿದ್ದ ತಂದೆ ಮತ್ತು ಇಬ್ಬರು ಮಕ್ಕಳ ಪೈಕಿ ಮಕ್ಕಳಾದ ರಮೇಶ ಅಂಬಲಿ(15), ಯಲ್ಲಪ್ಪ ಅಂಬಲಿ(13) ಮೃತ ದೇಹಗಳು ಪತ್ತೆಯಾಗಿವೆ. ಅವರ ತಂದೆ ಲಕ್ಷ್ಮಣ ಅಂಬಲಿ(45) ಪತ್ತೆಗಾಗಿ ಅಗ್ನಿಶಾಮಕ ದಳ ತಂಡ ಹಾಗೂ ಪೊಲೀಸರಿಂದ ಕಾರ್ಯಾಚರಣೆಯನ್ನು ಮಂಗಳವಾರವೂ ಮುಂದುವರಿಸಲಾಗಿದೆ.

mmm 1
ಲಕ್ಷ್ಮಣ ಅಂಬಲಿ(45)

‘ಲಕ್ಷ್ಮಣ ಅವರು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ರಾತ್ರಿ ಬೈಕ್‌ ನಿಲ್ಲಿಸಿ ತಮ್ಮ ಇಬ್ಬರು ಮಕ್ಕಳೊಂದಿಗೆ ಮೀನುಗಾರಿಕೆಗಾಗಿ ನದಿಗೆ ಇಳಿದಿದ್ದರು. ಆದರೆ, ಸೋಮವಾರ ಬೆಳಿಗ್ಗೆಯವರೆಗೂ ಮನೆಗೆ ಬಂದಿರಲಿಲ್ಲ. ಊರಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿರಬಹುದು ಎಂದು ಕುಟುಂಬಸ್ಥರು ತಿಳಿಸಿದ್ದರು. ಅಲ್ಲಿ ವಿಚಾರಿಸಿದಾಗ ಸುಳಿವು ಸಿಗಲಿಲ್ಲ. ಆಗ ಈ ಅವಘಡ ನಡೆದಿರುವುದು ಗೊತ್ತಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಸುದ್ದಿಗಾರರಿಗೆ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಬೆಳಗಾವಿ | ನ.20ರಂದು ಲಿಂಗತ್ವ ಅಲ್ಪಸಂಖ್ಯಾತರಿಂದ ಸ್ವಾಭಿಮಾನದ ನಡಿಗೆ

‘ಕುಟುಂಬದ ಸದಸ್ಯರಿಗೆ ಸೂಕ್ತ ಪರಿಹಾರ ನೀಡಲಾಗುವುದು’ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X