ಫೆ.26ರಂದು ರಾಜಧಾನಿಯಲ್ಲಿ ಸಂಭ್ರಮದಿಂದ ನಡೆಯಲಿದೆ ಬೆಂಗಳೂರು ಬ್ಯಾರಿಗಳ ‘ಬ್ಯಾರಿ ಕೂಟ’

Date:

Advertisements

ಬೆಂಗಳೂರಿನಲ್ಲಿ ನಾನಾ ಕಾರಣಗಳಿಗಾಗಿ ನೆಲೆಸಿರುವ ಕರಾವಳಿಯ ಮುಸ್ಲಿಂ ಸಮುದಾಯವಾಗಿರುವ ‘ಬ್ಯಾರಿ’ಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಎಂಬ ಯುವಕರ ಸಂಘಟನೆಯು ಇದೀಗ ದೊಡ್ಡ ಸಮ್ಮೇಳನವೊಂದಕ್ಕೆ ಕೈ ಹಾಕಿದ್ದು, ಪ್ಯಾಲೇಸ್‌ ಗ್ರೌಂಡ್‌ನಲ್ಲಿ ಫೆಬ್ರವರಿ 26ರಂದು ‘ಬ್ಯಾರಿ ಕೂಟ’ವನ್ನು ಆಯೋಜಿಸಿದ್ದು, ಒಂದು ದಿನವನ್ನು ಅದಕ್ಕಾಗಿಯೇ ಮೀಸಲಿಟ್ಟು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

“ಇದ್ ಬೆಂಗಳೂರ್ ಬ್ಯಾರಿಙಲೋ ಗಮ್ಮತ್ತ್ …” ಎಂಬ ಧ್ಯೇಯವಾಕ್ಯವನ್ನಿಟ್ಟುಕೊಂಡು ಬ್ಯಾರಿ ಸಮುದಾಯದ ಯುವಕರೇ ಕಟ್ಟಿಕೊಂಡಿರುವ ಬ್ಯಾರೀಸ್ ಸೆಂಟ್ರಲ್ ಕಮಿಟಿಯವರು ಬುಧವಾರದಂದು ರಾಜಧಾನಿಯ ಪ್ಯಾಲೇಸ್‌ ಗ್ರೌಂಡ್‌ನಲ್ಲಿರುವ ಶೃಂಗಾರ್ ಪ್ಯಾಲೇಸ್ ಮೈದಾನದಲ್ಲಿ ಈ ಕೂಟವನ್ನು ಹಮ್ಮಿಕೊಂಡಿದ್ದಾರೆ.

ಬ್ಯಾರಿ ಕೂಟದ ಭಾಗವಾಗಿ ರಕ್ತದಾನ ಶಿಬಿರ, ಬಿಝ್‌ಟೆಕ್ ಮೀಟ್, ಯಾಸಿರ್ ಕಲ್ಲಡ್ಕರವರು ಸಂಗ್ರಹಿಸಿದ ಹಳೆಯ ವಸ್ತುಗಳ ವಿಶೇಷ ಪ್ರದರ್ಶನ, ಕುಕ್ಕಿಂಗ್ ವಿದೌಟ್ ಫೈರ್, ಮಕ್ಕಳಿಗಾಗಿ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಕವಿಗೋಷ್ಠಿಯನ್ನು ಕೂಡ ಹಮ್ಮಿಕೊಳ್ಳಲಾಗಿದೆ. ಈ ಎಲ್ಲ ಕಾರ್ಯಕ್ರಮದಲ್ಲಿ ಆಯಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಬ್ಯಾರಿ ಸಮುದಾಯದ ಸಾಧಕರು ಭಾಗವಹಿಸಲಿದ್ದಾರೆ. ಅಲ್ಲದೇ, ವಿಶೇಷ ಆಕರ್ಷಣೆಯಾಗಿ ಕರಾವಳಿಯ ತಿಂಡಿ ತಿನಿಸುಗಳು ಇರಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಬಾಂಗ್ಲಾದೇಶದ ಖ್ಯಾತ ಚಿತ್ರ ನಿರ್ದೇಶಕ ಝಾಹಿದುರ್ ರಹೀಮ್ ಅಂಜನ್ ಬೆಂಗಳೂರಿನಲ್ಲಿ ನಿಧನ

ಬೆಂಗಳೂರಿನಲ್ಲಿ ನಾನಾ ಕಾರಣಗಳಿಗಾಗಿ ನೆಲೆಸಿರುವ ಎಲ್ಲರನ್ನೂ ಒಂದುಗೂಡಿಸುವ ನಿಟ್ಟಿನಲ್ಲಿ ಆರಂಭಿಸಿದ ಯುವಕರ ಸಂಘಟನೆಯೇ ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು. ಇದು ಬೆಂಗಳೂರಿನಲ್ಲಿ ವಾಸಿಸುವ ಬ್ಯಾರಿಗಳ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನ ಇಟ್ಟು ಸ್ಥಾಪಿಸಲ್ಪಟ್ಟ ಒಂದು ಚಳುವಳಿಯಾಗಿದೆ. ಇಲ್ಲಿ ಪಕ್ಷ, ಸಂಘಟನಾ, ಮತ್ತು ಆಶಯ ಭೇದಭಾವಗಳಿಲ್ಲ ಎಂದು ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ಅಧ್ಯಕ್ಷರಾದ ಶಬೀರ್ ಬ್ರಿಗೇಡ್ ತಿಳಿಸಿದ್ದಾರೆ.

ಬ್ಯಾರಿ ಕೂಟಕ್ಕೆ ಸ್ಪೀಕರ್ ಯು ಟಿ ಖಾದರ್ ಸಹಿತ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ. ಬ್ಯಾರಿ ಕೂಟದಲ್ಲಿ ಸಾಧ್ಯವಿರುವ ಎಲ್ಲ ಬೆಂಗಳೂರಿನ ಬ್ಯಾರಿಗಳು ತಮ್ಮ ಕೆಲಸ ಕಾರ್ಯಗಳನ್ನು ಒಂದು ದಿನ ಬದಿಗಿಟ್ಟು ಭಾಗವಹಿಸಬೇಕು. ಒಂದೇ ಸಮುದಾಯದ ಜನರನ್ನು ಒಟ್ಟು ಸೇರಿಸಲು ನಮ್ಮ ಪ್ರಯತ್ನಕ್ಕೆ ಸಾಥ್ ನೀಡಬೇಕು. ಎಂದು ಶಬೀರ್ ಬ್ರಿಗೇಡ್ ವಿನಂತಿಸಿಕೊಂಡಿದ್ದಾರೆ.

WhatsApp Image 2025 02 25 at 1.52.32 AM
WhatsApp Image 2025 02 25 at 8.21.19 AM 1

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X