ಮಂಡ್ಯ| ದಲಿತ ಹಕ್ಕುಗಳಿಗಾಗಿ ಹೋರಾಡಿ : ಚಂದ್ರಹಾಸ್‌ ಸಲಹೆ

Date:

Advertisements

ಭಾರತ ಸಂವಿಧಾನದಲ್ಲಿ ಮೀಸಲಾತಿ ಬಂದಿದೆ. ಆದರೆ ಹಕ್ಕುಗಳಿಂದ ದೂರು ಇಡಬೇಕು ಎಂಬುವ ಉದ್ದೇಶದಿಂದ ಹುನ್ನಾರ ನಡೆಸಲಾಗುತ್ತಿದೆ. ಹಾಗಾಗಿ ನಮ್ಮ ಹೋರಾಟ ನಿರಂತರವಾಗಿರಬೇಕು ಎಂದು ಲೋಕೋಪಯೋಗಿ ನಿವೃತ್ತ ಅಧಿಕಾರಿ ಚಂದ್ರಹಾಸ್‌ ಹೇಳಿದರು.

ಮಂಡ್ಯದ ಅಶೋಕ ನಗರದಲ್ಲಿ ದಲಿತ ಹಕ್ಕುಗಳ ಸಮಿತಿ (ಡಿಎಚ್‌ಎಸ್‌) ನೂತನ ಕಚೇರಿ ಶಾಖಾ ಉದ್ಘಾಟನಾ ಕಾರ್ಯಕ್ರಮವನ್ನು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ, ʼದಲಿತರು ತಮ್ಮ ಹಕ್ಕುಗಳಿಗಾಗಿ ಎಷ್ಟು ಹೋರಾಡಿದರೂ ಸಾಲುವುದಿಲ್ಲ. ಹೀಗಾಗಿ ದಲಿತ ಹಕ್ಕುಗಳಿಗೆ ಈ ಸಮಿತಿ ನಿರಂತರವಾಗಿ ದುಡಿಯಲಿʼ ಎಂದು ಹಾರೈಸಿದರು

ಕೆಪಿಆರ್‌ಎಸ್ ರೈತ ಮುಖಂಡ ಟಿ.ಎಲ್‌.ಕೃಷ್ಣೇಗೌಡ ಮಾತನಾಡಿ, ʼದಲಿತರ ಹಕ್ಕುಗಳಿಗೆ ಹೋರಾಡಲು ಒಂದು ಕಚೇರಿ ಮಾಡಿಕೊಳ್ಳಲಾಗಿದೆ. ಅದೇ ವಸತಿ ರಹಿತ ದಲಿತರಿಗೆ ವಸತಿ ಕೊಡಿಸಲು ಹೋರಾಟ ರೂಪಿಸಬೇಕು. ಗ್ರಾಮೀಣ, ಪಟ್ಟಣ ಪ್ರದೇಶಗಳಲ್ಲಿ ಮನೆ, ಭೂಮಿ ಇಲ್ಲದೇ ಸಮಸ್ಯೆ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಯೋಚಿಸೋಣʼ ಎಂದರು.

Advertisements

ʼದಲಿತರ ಹಕ್ಕಿಗಾಗಿ ಹೋರಾಟ ಮಾಡದಿದ್ದರೆ ಸಂಘಟನೆ ಕಟ್ಟಿ ಪ್ರಯೋಜನವಿಲ್ಲ, ದಲಿತರಿಗೆ ಈಗಲೂ ಸಹ ಲೇಔಟ್‌ಗಳಲ್ಲಿ ನಿವೇಶನ ನೀಡುತ್ತಿಲ್ಲ. ಉನ್ನತ ಹುದ್ದೆಯಲ್ಲಿರುವ ದಲಿತ ಅಧಿಕಾರಿಗಳು ಸಹ ಜಮೀನು ಕೊಂಡುಕೊಳ್ಳಲು ಸಾಧ್ಯವಿಲ್ಲ. ಇಂತಹ ಕರಾಳ ಅಸ್ಪ್ರಶ್ಯತೆ, ಜಾತಿಯತೆ ವಿರುದ್ಧ ಹೋರಾಡಿ ನಮ್ಮ ಹಕ್ಕು ಪಡೆದುಕೊಳ್ಳಬೇಕುʼ ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಆಗ್ರಾ ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್-ಕಾರು ಡಿಕ್ಕಿ; 7 ಮಂದಿ ಸಾವು

ಕಾರ್ಯಕ್ರಮದಲ್ಲಿ ಸಮಾನ ಮನಸ್ಕ ವೇದಿಕೆಯ ಮುಕುಂದ, ಅಹಿಂದ ಸಂಘಟನೆಯ ಶಿವರುದ್ರಯ್ಯ, ಡಿಎಚ್ಎಸ್‌ನ ಜಿಲ್ಲಾಧ್ಯಕ್ಷ ಆರ್‌.ಕೃಷ್ಣ, ಉಪಾಧ್ಯಕ್ಷ ಕೆ.ಎಸ್‌.ಶಿವಲಿಂಗಯ್ಯ, ರಾಜ್ಯ ಸಮಿತಿ ಸದಸ್ಯೆ ಗಿರಿಜಮ್ಮ, ಕಾರ್ಯದರ್ಶಿ ಅಂಬೂಜಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X