ಬಿಜೆಪಿಯ ಪ್ರಬಲ ನಾಯಕ ಹಾಗೂ ಮಾಜಿ ಸಚಿವ ಕೆ ಸುಧಾಕರ್ ವಿರುದ್ಧ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದು, ಭರ್ಜರಿ ಗೆಲುವು ದಾಖಲಿಸಿ, ಮೊದಲ ಬಾರಿಗೆ ಶಾಸಕರಾಗಿರುವ ಪ್ರದೀಪ್ ಈಶ್ವರ್ ಅವರಿಗೆ ಇಂದು ಮಾತೃವಿಯೋಗವಾಗಿದೆ.
ಪ್ರದೀಪ್ ಈಶ್ವರ್ ಅವರನ್ನು ಪೋಷಿಸಿದ್ದ ಸಾಕು ತಾಯಿ ರತ್ನಮ್ಮ ಅವರು ತುಂಬಾ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಬೆಳಿಗ್ಗೆ ಪೇರೇಸಂದ್ರ ಗ್ರಾಮದಲ್ಲಿ ರತ್ಮಮ್ಮ ವಿಧಿವಶರಾಗಿದ್ದಾರೆ.
ಸಿದ್ದರಾಮಯ್ಯ ಪ್ರಮಾಣ ವಚನ ಕ್ರಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದ ಪ್ರದೀಪ್ ಈಶ್ವರ್ ʼತಾಯಿ ಇನ್ನಿಲ್ಲʼ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಪೇರೇಸಂದ್ರ ಗ್ರಾಮಕ್ಕೆ ಮರಳಿದ್ದಾರೆ. ತಾಯಿಯ ಅಂತಿಮ ದರ್ಶನ ಪಡೆದು ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಬೇಡ್ಕರ್ಗೆ ನಿಂದನೆ ಆರೋಪ; ಸಿಮ್ಸ್ ಡೀನ್ ಮುಖಕ್ಕೆ ಮಸಿ
ಪ್ರದೀಪ್ ಈಶ್ವರ್ ಶಾಸಕರಾಗಿ ಆಯ್ಕೆಯಾದ ದಿನದಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಚನೆಯಾಗುವ ಮುನ್ನವೇ ಕ್ಷೇತ್ರದಲ್ಲಿ ಜನರ ಜೊತೆ ನಿಕಟ ಸಂಪರ್ಕ ಬೆಳೆಸುತ್ತಿರುವ ಪ್ರದೀಪ್ ಈಶ್ವರ್, ಮನೆ ಮನೆಗೆ ತೆರಳಿ ಕ್ಷೇತ್ರದ ಜನರ ಕಷ್ಟ-ಸುಖಗಳನ್ನು ಆಲಿಸುತ್ತಿದ್ದಾರೆ. ಅಲ್ಲದೆ, ಸ್ಥಳದಲ್ಲೇ ಪರಿಹಾರವನ್ನು ನೀಡುವ ಮೂಲಕ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಪರಿಹರಿಸುವ ಭರವಸೆಯನ್ನು ನೀಡುವ ಮೂಲಕ ಜನನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ.