ಶಾಸಕ ಪ್ರದೀಪ್​ ಈಶ್ವರ್‌ಗೆ ಮಾತೃ ವಿಯೋಗ

Date:

ಬಿಜೆಪಿಯ ಪ್ರಬಲ ನಾಯಕ ಹಾಗೂ ಮಾಜಿ ಸಚಿವ ಕೆ ಸುಧಾಕರ್​ ವಿರುದ್ಧ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್​ ಪಕ್ಷದಿಂದ ಕಣಕ್ಕಿಳಿದು, ಭರ್ಜರಿ ಗೆಲುವು ದಾಖಲಿಸಿ, ಮೊದಲ ಬಾರಿಗೆ ಶಾಸಕರಾಗಿರುವ ಪ್ರದೀಪ್​ ಈಶ್ವರ್​ ಅವರಿಗೆ ಇಂದು ಮಾತೃವಿಯೋಗವಾಗಿದೆ.

ಪ್ರದೀಪ್​ ಈಶ್ವರ್​ ಅವರನ್ನು ಪೋಷಿಸಿದ್ದ ಸಾಕು ತಾಯಿ ರತ್ನಮ್ಮ ಅವರು ತುಂಬಾ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಬೆಳಿಗ್ಗೆ ಪೇರೇಸಂದ್ರ ಗ್ರಾಮದಲ್ಲಿ ರತ್ಮಮ್ಮ ವಿಧಿವಶರಾಗಿದ್ದಾರೆ.

ಸಿದ್ದರಾಮಯ್ಯ ಪ್ರಮಾಣ ವಚನ ಕ್ರಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದ ಪ್ರದೀಪ್​ ಈಶ್ವರ್ ʼತಾಯಿ ಇನ್ನಿಲ್ಲʼ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಪೇರೇಸಂದ್ರ ಗ್ರಾಮಕ್ಕೆ ಮರಳಿದ್ದಾರೆ. ತಾಯಿಯ ಅಂತಿಮ ದರ್ಶನ ಪಡೆದು ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ಸಿಮ್ಸ್‌ ಡೀನ್ ಮುಖಕ್ಕೆ ಮಸಿ

ಪ್ರದೀಪ್​ ಈಶ್ವರ್​ ಶಾಸಕರಾಗಿ ಆಯ್ಕೆಯಾದ ದಿನದಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್​ ಸರ್ಕಾರ ರಚನೆಯಾಗುವ ಮುನ್ನವೇ ಕ್ಷೇತ್ರದಲ್ಲಿ ಜನರ ಜೊತೆ ನಿಕಟ ಸಂಪರ್ಕ ಬೆಳೆಸುತ್ತಿರುವ ಪ್ರದೀಪ್​ ಈಶ್ವರ್​, ಮನೆ ಮನೆಗೆ ತೆರಳಿ ಕ್ಷೇತ್ರದ ಜನರ ಕಷ್ಟ-ಸುಖಗಳನ್ನು ಆಲಿಸುತ್ತಿದ್ದಾರೆ. ಅಲ್ಲದೆ, ಸ್ಥಳದಲ್ಲೇ ಪರಿಹಾರವನ್ನು ನೀಡುವ ಮೂಲಕ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಪರಿಹರಿಸುವ ಭರವಸೆಯನ್ನು ನೀಡುವ ಮೂಲಕ ಜನನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...