ಮಂಡ್ಯ | ಕಾವೇರಿ ಪ್ರವಾಹದಿಂದ ಮುಳುಗಡೆ ಭೀತಿಯಲ್ಲಿ ಎಣ್ಣೆಹೊಳೆ ಗ್ರಾಮ

Date:

Advertisements

ಕೃಷ್ಣರಾಜ ಸಾಗರ ಜಲಾಶಯದಿಂದ 1,70,000 ಕ್ಯುಸೆಕ್ ಹೊರಹರಿವು ನೀರನ್ನು ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ತಗ್ಗಿನಲ್ಲಿರುವ ಪಾಂಡವಪುರ ತಾಲೂಕಿನ ಎಣ್ಣೆಹೊಳೆ ಗ್ರಾಮವು ಮುಳುಗಡೆಯಾಗುವ ಭೀತಿ ಎದುರಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಹೊರ ಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಣ್ಣೆಹೊಳೆ ಗ್ರಾಮ ಹೊರ ಜಗತ್ತಿನೊಂದಿಗೆ ಸಂಪರ್ಕ ಕಡಿತವಾಗುವ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.

1001149415

ಪಾಂಡವಪುರ ತಾಲೂಕಿನಲ್ಲಿ ಪ್ರತಿ ವರ್ಷ ಕಾವೇರಿಯಲ್ಲಿ ಪ್ರವಾಹ ಬಂದಾಗ ಮುಳುಗಡೆಯ ಭೀತಿ ಎದುರಿಸು ತಗ್ಗಿನಲ್ಲಿರುವ ಏಕೈಕ ಗ್ರಾಮ ಎಣ್ಣೆಹೊಳೆ.

Advertisements

ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 8 ಕೋಟಿ ವೆಚ್ಚದಲ್ಲಿ ಮೂರು ವರ್ಷಗಳ ಹಿಂದೆ ಯೋಜನಾಬದ್ಧವಾದ ತಡೆಗೋಡೆ ನಿರ್ಮಿಸದೆ, ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವುದರಿಂದ ಗ್ರಾಮದೊಳಗೆ ಪ್ರವಾಹದ ನೀರು ನುಗ್ಗುವುದನ್ನು ತಡೆಯಲು ವಿಫಲವಾಗಿದೆ.

1001149418

ಊರಿನ ಒಂದು ಕಡೆಯಿಂದ ಕಾವೇರಿ ನದಿಯ ನೀರು ಬರುತ್ತದೆ ಹಾಗೂ ಇನ್ನೊಂದು ಕಡೆಯಿಂದ ಕಾಲುವೆಯ ನೀರು ಬಂದು ಸೇರುವ ಕೊಲ್ಲಿಯ ಜಾಗದಲ್ಲಿ ರಭಸ ಹೆಚ್ಚಾಗಿ, ನೀರು ಒತ್ತರಿಸಿಕೊಳ್ಳುತ್ತದೆ. ಈ ಭಾಗದಲ್ಲಿ ತಡೆಗೋಡೆ ಇಲ್ಲದ ಕಾರಣ ಊರ ಕಡೆಗೆ ನೀರು ನುಗ್ಗುತ್ತದೆ. ಇನ್ನೂ 20000 ಕ್ಯುಸೆಕ್ ನೀರು ಹೆಚ್ಚಾದರೆ ಕ್ಯಾತನಹಳ್ಳಿಗೆ ಹೋಗುವ ಸಂಪರ್ಕ ರಸ್ತೆ ಕಡಿತವಾಗುವ ಭೀತಿ ಎದುರಾಗಿದೆ.

ಜಿಲ್ಲಾಡಳಿತ, ಕಾವೇರಿ ನೀರಾವರಿ ನಿಗಮ ಹಾಗೂ ಸಣ್ಣ ನೀರಾವರಿ ಇಲಾಖೆ ಇವರೆಲ್ಲ ಗಮನಹರಿಸಿ ಪ್ರಕೃತಿ ವಿಕೋಪ ನಿಧಿಯಿಂದ ತುರ್ತು ಕಾಮಗಾರಿಯನ್ನು ಕೈಗೊಂಡು ಪ್ರವಾಹದ ಪ್ರಭಾವವನ್ನು ತಡೆಯಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಎಣ್ಣೆ ಹೊಳೆ ರಘು ಒತ್ತಾಯಿಸಿದ್ದಾರೆ.

1001149416

ಈ ಮೊದಲು ಬಿದ್ದ ಮಳೆಯ ನೀರು ಚರಂಡಿಯ ಮೂಲಕ ಸರಾಗವಾಗಿ ಊರಿಂದ ಹೊರಹರಿದು ಹೋಗಿ ನದಿಯನ್ನು ಸೇರುತ್ತಿತ್ತು. ಅವೈಜ್ಞಾನಿಕವಾಗಿ ತಡೆಗೋಡೆಯನ್ನು ನಿರ್ಮಿಸಿದ ಕಾರಣ ನೀರು ಊರಲ್ಲಿ ಶೇಖರಣೆಯಾಗಿ ನಿಂತು ರೋಗರುಜಿನಗಳಿಗೆ ಕಾರಣವಾಗುತ್ತಿದೆ. ಇದನ್ನು ತುರ್ತಾಗಿ ಸರಿಪಡಿಸಬೇಕಾಗಿದೆ ಎಂದು ಒತ್ತಾಯಿಸಿದರು.

ಪ್ರತಿ ಸಲವೂ ಕಾವೇರಿ ನದಿಯಲ್ಲಿ ನೀರು ಹೆಚ್ಚಾದಂತೆ ಎಣ್ಣೆಹೊಳೆ ಗ್ರಾಮದಲ್ಲಿ ಮುಳುಗಡೆಯ ಭೀತಿ ಎದುರಾಗುತ್ತದೆ. ಇದರ ಬಗ್ಗೆ ಸರ್ಕಾರಗಳು ವಿಶೇಷ ಕಾಳಜಿ ವಹಿಸಿ ಗ್ರಾಮದಲ್ಲಿ ಆಗಿರುವ ಅವ್ಯವಸ್ಥೆಯನ್ನು ತುರ್ತಾಗಿ ಸರಿಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

1001149443
1001149417
Untitled 24
ನಗರಕೆರೆ ಜಗದೀಶ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X