ಬೆಂಗಳೂರು ಪೂರ್ವ ನಗರ ಪಾಲಿಕೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ, ಸಾಮೂಹಿಕ ಸ್ವಚ್ಛತಾ ಕಾರ್ಯ

Date:

Advertisements

ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತ ಡಿ ಎಸ್ ರಮೇಶ್ ಅವರ ನಿರ್ದೇಶನದಂತೆ ಇಂದು ವಾರ್ಡ್ ಸಂಖ್ಯೆ:84 ಹಗದೂರು ವ್ಯಾಪ್ತಿಯ ವೈಟ್ ಫೀಲ್ಡ್ ಮುಖ್ಯರಸ್ತೆ, ವಾರ್ಡ್ ಸಂಖ್ಯೆ-82ರ ಗರುಡಾಚಾರಪಾಳ್ಯ ಹಾಗೂ ವಾರ್ಡ್ ಸಂಖ್ಯೆ-51 ವಿಜೀನಾಪುರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಮತ್ತು ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.

ಮಹದೇವಪುರ ವಿಭಾಗ ವ್ಯಾಪ್ತಿಯ ವಾರ್ಡ್ ಸಂಖ್ಯೆ:84 ಹಗದೂರು ವ್ಯಾಪ್ತಿಯ ವೈಟ್ ಫೀಲ್ಡ್ ಮುಖ್ಯರಸ್ತೆಯ ವರ್ತೂರು ಕೋಡಿಯಿಂದ ಹೋಪ್ ಫಾರ್ಮ್‌ವರೆಗೆ, ವಾರ್ಡ್ ಸಂಖ್ಯೆ-82 ಗರುಡಾಚಾರಪಾಳ್ಯದಲ್ಲಿನ ಸಿಂಗಯ್ಯಪಾಳ್ಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಹಾಗೂ ಕೆ ಆರ್ ಪುರಂ ವಿಭಾಗ ವಾರ್ಡ್ ಸಂಖ್ಯೆ-51ವಿಜೀನಾಪುರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು.

ಮಹದೇವಪುರ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ಈಗಾಗಲೇ ನಿಗದಿಪಡಿಸಿರುವ ದಿನಾಂಕದಂತೆ ಮುಂದಿನ ದಿನಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುವುದು ಎಂದು ಮಹಾದೇವಪುರ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿದರು.

ಪಾದಚಾರಿ ಮಾರ್ಗಗಳಲ್ಲಿ ನಿರ್ಮಿಸಿದ ಪೆಟ್ಟಿಗೆ ಅಂಗಡಿಗಳು, ವಾಣಿಜ್ಯ ಮಳಿಗೆಗಳ ಮುಂದಿನ ಮೇಲ್ಛಾವಣಿಗಳು, ತಾತ್ಕಾಲಿಕ ಮೇಲ್ಛಾವಣಿ, ತಳ್ಳುವ ಗಾಡಿಗಳು, ಹಣ್ಣಿನ ಅಂಗಡಿಗಳು, ಡೆಬ್ರೀಸ್, ಅನಧಿಕೃತ ಕೇಬಲ್‌ಗಳು, ಫುಟ್‌ಪಾತ್ ಹೋಟೆಲ್‌ಗಳು ಮುಂತಾದವುಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ಅನುವು ಮಾಡಿಕೊಡಲಾಯಿತು.

ಸಾಮೂಹಿಕ ಸ್ವಚ್ಛತಾ ಕಾರ್ಯ

ಪೂರ್ವ ನಗರ ಪಾಲಿಕೆಯ ಕೆ ಆರ್ ಪುರ ಮುಖ್ಯ ರಸ್ತೆ, ಬಸವನಪುರ, ಬೆಳ್ಳಂದೂರು, ಹೂಡಿ, ವಿಜ್ಞಾನ ನಗರ ಮತ್ತು ದೇವಸಂದ್ರ ವಾರ್ಡ್ ವ್ಯಾಪ್ತಿಯ ಹಲವು ಕಡೆಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಹಾಗೂ ಬಿ ನಾರಾಯಣಪುರ, ಕೆ ಆರ್ ಪುರ, ಪೈ ಬಡಾವಣೆ ಪ್ರದೇಶಗಳಲ್ಲಿನ ಒಳಚರಂಡಿಗಳನ್ನು ಸ್ವಚ್ಛಗೊಳಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಗದಗ | ದಲಿತ ಮಹಿಳೆಗೆ ಅವಮಾನ; ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು

ಇಂದು ನಡೆದ ತೆರವು ಕಾರ್ಯಾಚರಣೆ ಮತ್ತು ಸಾಮೂಹಿಕ ಸ್ವಚ್ಛತಾ ಕಾರ್ಯದಲ್ಲಿ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಅಭಿಯಂತರರು, ಜೆಹೆಚ್ಐಗಳು, ವಾರ್ಡ್ ಮಾರ್ಷಲ್‌ಗಳು ಹಾಗೂ ಪೌರಕಾರ್ಮಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X