ಕೊಡಗು | ಜನ ಜೀವನಕ್ಕೆ ಕಂಟಕರಾದ ಅರಣ್ಯ ಇಲಾಖೆ; ಶಾಸಕ ಡಾ ಮಂತರ್ ಗೌಡ ಆಕ್ರೋಶ

Date:

Advertisements

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಕೆ ನಿಡುಗುಣೆ ಗ್ರಾಮದ ವಾಸಿ ಕಿಶೋರ್ ಸ್ವಾಮಿಯವರ ಮನೆಯ ಮೇಲೆ ಗಾಳಿ, ಮಳೆಗೆ ಮರದ ಬೃಹತ್ ಕೊಂಬೆ ಮುರಿದು ಬಿದ್ದಿದೆ. ಇದನ್ನರಿಯದ ಅರಣ್ಯ ಇಲಾಖೆ ಅಧಿಕಾರಿಗಳು ಮನೆಗೆ ನುಗ್ಗಿ ಬಂಧಿಸಿ ಕರೆದೊಯ್ದಿರುವ ಘಟನೆ ನಡೆದಿದ್ದು, ಈ ವಿಷಯ ತಿಳಿದ ಶಾಸಕ ಡಾ ಮಂತರ್ ಗೌಡ ಜನ ಜೀವನಕ್ಕೆ ಅರಣ್ಯ ಇಲಾಖೆಯವರೇ ಕಂಟಕಪ್ರಾಯರಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರೀ ಮಳೆ, ಗಾಳಿಯಿಂದ ಕೊಡಗು ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿರುವ ಸಂದರ್ಭದಲ್ಲಿ, ಅರಣ್ಯ ಇಲಾಖೆ ಜಿಲ್ಲೆಯ ಜನರ ನೆರವಿಗೆ ಧಾವಿಸದೆ ಜನರ ಜೀವನಕ್ಕೆ ಕಂಟಕರಾಗಿ ಮನಬಂದಂತೆ ವರ್ತಿಸುತ್ತಿರುವ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ವರದಿಯಾಗಿದೆ.

ಕೆ. ನಿಡುಗಣೆ ಗ್ರಾಮದ ವಾಸಿಯಾಗಿರುವ ಅರ್ಚಕ ಕಿಶೋರ್ ಸ್ವಾಮಿಯವರ ಮನೆಯ ಸಮೀಪದ ಬೃಹತ್ ಮರದ ಕೊಂಬೆ ಬೆಳಗ್ಗಿನ ಜಾವ ಅತಿಯಾದ ಗಾಳಿ ಮಳೆಗೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಮನೆಯ ಮುಂದೆ ನಿಲ್ಲಿಸಿದ ವಾಹನಗಳ ಜಕಂ ಆಗಿದ್ದು, ಕೂದಲೆಳೆ ಅಂತರದಲ್ಲಿ ಮನೆ ಬಚಾವಾಗಿದೆ. ಯಾವುದೇ ಪ್ರಾಣಪಾಯ ಸಂಭವಿಸಿಲಿಲ್ಲ. ಗ್ರಾಮಸ್ಥರು ಸೇರಿ ಮರವನ್ನು ತೆರವುಗೊಳಿಸಿ ಮಿಕ್ಕ ಮರದ ಕೊಂಬೆ ಮನೆಯ ಮೇಲೆ ಬೀಳುವ ಸಾಧ್ಯತೆ ಅರಿತು ಹಗ್ಗ ಬಳಸಿ ತೆರವುಗೊಳಿಸಿ ಮನೆಯವರಿಗೆ ತೊಂದರೆಯಾಗದಂತೆ ಮಾಡಿದ್ದಾರೆ.

Advertisements

ಇದನ್ನ ಅರಿಯದ ಅರಣ್ಯ ಇಲಾಖೆ ಸಿಬ್ಬಂದಿಗಳು ಜೀಪಿನಲ್ಲಿ ಬಂದು ಮನೆಗೆ ನುಗ್ಗಿ ಕಿಶೋರ್ ಸ್ವಾಮಿಯವರನ್ನು ಬಂಧಿಸಿ ಅಕ್ಷರಶಃ ಅಪರಾಧಿಯಂತೆ ಕರೆದುಕೊಂಡು ಹೋಗಿ, ಅಜ್ಞಾತ ಸ್ಥಳದಲ್ಲಿರಿಸಿದ್ದಾರೆ. ಮೊಬೈಲ್ ಪೋನ್ ಕಸಿದುಕೊಂಡ ಸಿಬ್ಬಂದಿಗಳು, ಯಾರ ಸಂಪರ್ಕಕ್ಕೂ ಸಿಗದ ಹಾಗೆ ಮಾಡಿದ್ದಾರೆ. ವಿಚಾರ ಊರಿನಲ್ಲಿ ಹರಿದಾಡಿದ ಕೂಡಲೇ ಗ್ರಾಮಸ್ಥರು ಮಡಿಕೇರಿ ನಗರದಲ್ಲಿ ವಲಯ ಅರಣ್ಯ ಕಛೇರಿ, ಅರಣ್ಯ ಭವನ ಎಲ್ಲಾ ಕಡೆ ಹುಡುಕಾಡಿದರೂ ಕಿಶೋರ್ ಸ್ವಾಮಿಯವರ ಪತ್ತೆ ಇಲ್ಲ. ನಂತರ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರನ್ನು ಸಂಪರ್ಕಿಸಿದ್ದಾರೆ.

ನಂತರ ಅರಣ್ಯ ಇಲಾಖೆ ಗೆಸ್ಟ್ ಹೌಸಿನಲ್ಲಿ ಇರಿಸಲಾಗಿದೆ ಎಂದು ಮಾಹಿತಿ ದೊರಕಿದ ಹಿನ್ನಲೆಯಲ್ಲಿ ಅಲ್ಲಿಗೆ ಗ್ರಾಮಸ್ಥರು ತೆರಳಿದ್ದಾರೆ. ತೆನ್ನಿರ ಮೈನಾ ವಿಚಾರವನ್ನು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ರವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಅರಣ್ಯ ಇಲಾಖೆಯವರನ್ನು ಸಂಪರ್ಕಿಸಿ ತೀವ್ರ ತರಾಟೆಗೆ ತೆಗೆದುಕೊಂಡ ಮೇಲೆ ಅರಣ್ಯ ಇಲಾಖೆಯವರು ಕಿಶೋರ್ ಸ್ವಾಮಿಯವರನ್ನು ಬಿಟ್ಟು ಕಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಅರಣ್ಯ ಇಲಾಖೆಯವರ ಹಾವಳಿ ಹೆಚ್ಚಿದ್ದು ಜನರಿಗೆ ಸಾಕಷ್ಟು ತೊಂದರೆಗಳಾಗುತ್ತಿವೆ. ವನ್ಯ ಜೀವಿ ಧಾಳಿಗಿಂತಲೂ ಅರಣ್ಯ ಇಲಾಖೆಯವರ ತೊಂದರೆ ಹೆಚ್ಚಾಗಿದ್ದು, ಸಿಬ್ಬಂದಿಯವರ ಆಟಾಟೋಪ ಹೆಚ್ಚಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ನಿರ್ಗಮಿತ ಹೆಚ್ಚುವರಿ ಜಿಲ್ಲಾಧಿಕಾರಿ, ತಹಶೀಲ್ದಾರರಿಗೆ ಜಿಲ್ಲಾಡಳಿತದಿಂದ ಆತ್ಮೀಯ ಬೀಳ್ಕೊಡುಗೆ

ಮಳೆ, ಗಾಳಿಗೆ ಅಪಾಯಕಾರಿಯಾದ ಪ್ರದೇಶಗಳಲ್ಲಿರುವ ಮರ ತೆರವುಗೊಳಿಸುವಂತೆ ಸಾವಿರಾರು ಅರ್ಜಿ ಸಲ್ಲಿಕೆಯಾಗಿದ್ದರೂ, ಅವುಗಳಲ್ಲಿ ಯಾವುದನ್ನೂ ಇತ್ಯರ್ಥ ಪಡಿಸಿರುವುದಿಲ್ಲ. ಮರ ಮನೆ ಮೇಲೆ ಬೀಳುತ್ತದೆ ಎಂದರೆ ಅರ್ಜಿ ಸಲ್ಲಿಸಿ. ಸ್ಥಳ ಪರಿಶೀಲನೆ ನಡೆಸುತ್ತೇವೆ ಎಂದು ಸಬೂಬು ಹೇಳುತ್ತಾರೆ. ಜನರೇ ಮರ ತೆರವುಗೊಳಿಸಿದರೆ ಕೇಸ್ ಹಾಕಿ ಜನರಿಗೆ ತೊಂದರೆ ಮಾಡುತ್ತಾರೆ. ಅರಣ್ಯ ಇಲಾಖೆಯಿಂದ ಮರಗಳ್ಳರಿಗೆ ಅನುಕೂಲಕರ ವಾತವರಣ ಆಗಿದೆ ಹೊರತು ಜನರಿಗಲ್ಲ ಎಂದು ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X