ಎಎಸ್‌ಐ ಮೇಲೆ ಹಲ್ಲೆ ಪ್ರಕರಣ: ಮಾಜಿ ಶಾಸಕ ವಿ.ಎಸ್‌ ಪಾಟೀಲ್ ಪುತ್ರ ಬಂಧನ

Date:

12 ವರ್ಷಗಳ ಹಿಂದೆ ಎಎಸ್‌ಐ ಬಾಲಕೃಷ್ಣ ಪಾಲೇಕರ್ ಮೇಲೆ ಹಲ್ಲೆ ಹಾಗೂ ಎರಡು ಚೆಕ್‌ಬೌನ್ಸ್‌ ಪ್ರಕರಣಗಳಲ್ಲಿ ಮಾಜಿ ಶಾಸಕ ವಿ.ಎಸ್‌ ಪಾಟೀಲ್ ಅವರ ಪುತ್ರ ಬಾಪು ಗೌಡ ಪಾಟೀಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪ ಕಾರಾಗೃಹದಲ್ಲಿ ಇರಿಸಲಾಗಿದೆ.

- Advertisement -

2011ರಲ್ಲಿ ಬಾಪುಗೌಡಗೆ ಸೇರಿದ ವಾಹನವನ್ನು ಪೊಲೀಸರು ಹಿಡಿದಿದ್ದರು. ಪ್ರಕರಣ ಸಂಬಂಧ ಮುಂಡಗೋಡದ ಅರಣ್ಯ ಇಲಾಖೆಯ ಐಬಿಯಲ್ಲಿ ಆಧಿಕಾರ ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ವೇಳೆ, ಎಎಸ್‌ಐ ಬಾಲಕೃಷ್ಣ ಅವರ ಮೇಲೆ ಬಾಪುಗೌಡ ಮತ್ತು ಆತನ 15 ಮಂದಿ ಸಹಚರರು ಕುಡಿತ ಅಮಲಿನಲ್ಲಿ ಹಲ್ಲೆ ನಡೆಸಿದ್ದರು. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಆರೋಪಿಗಳ ವಿರುದ್ಧ ಎಐಎಸ್‌ ಬಾಲಕೃಷ್ಣ ಅವರು ನ್ಯಾಯಾಲಯದಲ್ಲಿ ಬಾಪುಗೌಡ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಮತ್ತು ಹಲ್ಲೆ ಪ್ರಕರಣ ದಾಖಲಿಸಿದ್ದರು. ಅಲ್ಲದೆ, ಬಾಪುಗೌಡ ವಿರುದ್ಧ ಇಬ್ಬರು ಖಾಸಗಿ ವ್ಯಕ್ತಿಗಳು ಚೆಕ್‌ ಬೌನ್ಸ್‌ ಪ್ರಕರಣವನ್ನೂ ದಾಖಲಿಸಿದ್ದರು. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 353, 141, 143, 147, 323, 353, 504, 506, 149ಅಡಿ ಪ್ರಕರಣ ದಾಖಲಾಗಿದೆ.

ಈ ಎಲ್ಲ ಪ್ರಕರಣಗಳಲ್ಲೂ ಮುಂಡಗೋಡ ಜೆಎಂಎಫ್‌ಸಿ ನ್ಯಾಯಾಲಯ ವಾರೆಂಟ್‌ ಹೊರಡಿಸಿತ್ತು. ಆದರೆ, ಆತ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಆತನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಬಾಪುಗೌಡನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದು, ಶಿರಸಿ ಠಾಣೆಗೆ ಕಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...