‘ಅನ್ನಭಾಗ್ಯ’ದಲ್ಲಿ ವಂಚನೆ: ಟ್ವಿಟ್ಟರ್ ದೂರಿಗೆ ಸ್ಪಂದಿಸಿದ ಸಿಎಂ ಕಚೇರಿ; ನ್ಯಾಯಬೆಲೆ ಅಂಗಡಿ ಅಮಾನತು

Date:

Advertisements
  • ದಾವಣಗೆರೆಯ ಚನ್ನಗಿರಿ ತಾಲೂಕಿನ ಹಿರೇಮಳಲಿ ಗ್ರಾಮದ ನ್ಯಾಯಬೆಲೆ ಅಂಗಡಿ
  • ಪಡಿತರ ಚೀಟಿಗೆ 1 ಕೆ.ಜಿ ಪಡಿತರ ಕಡಿಮೆ ವಿತರಿಸುತ್ತಿದ್ದ ಬಗ್ಗೆ ಟ್ವಟ್ಟರ್‌ನಲ್ಲಿ ಬಂದಿದ್ದ ದೂರು

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯ ವಿತರಣೆಯ ವೇಳೆ ವಂಚಿಸುತ್ತಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಬಂದ ದೂರಿಗೆ ಸ್ಪಂದಿಸಿರುವ ಸಿಎಂ ಕಚೇರಿ, ನ್ಯಾಯಬೆಲೆ ಅಂಗಡಿಯನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.

ದಾವಣಗೆರೆಯ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಮಳಲಿ ಗ್ರಾಮದಲ್ಲಿ ಪ್ರತಿ ರೇಷನ್ ಕಾರ್ಡಿಗೆ ಒಂದು ಕೆಜಿ ಅಕ್ಕಿ ಕಡಿತ ಮಾಡಿ ನೀಡಲಾಗುತ್ತಿದೆ. ಇದು ತಾಲೂಕಿನಾದ್ಯಂತ ಎಗ್ಗಿಲ್ಲದೇ ನಡೆಯುತ್ತಿದೆ. ಇಂತವರನ್ನು ಅಮಾನತು ಮಾಡಿ ಎಂದು ವಿಡಿಯೋ ದಾಖಲೆ ಸಹಿತ ಸಿಎಂ ಕಚೇರಿಗೆ ಚಂದ್ರಶೇಖರ್ ಎಂಬವರು ಟ್ವೀಟ್ ಮೂಲಕ ದೂರು ನೀಡಿದ್ದರು.

ಇದಕ್ಕೆ ಸ್ಪಂದಿಸಿರುವ ಸಿಎಂ ಕಚೇರಿಯ ಅಧಿಕಾರಿಗಳು, ಸ್ಥಳೀಯ ಅಧಿಕಾರಿಗಳಿಂದ ವರದಿ ಪಡೆದ ಬಳಿಕ ಜಿಲ್ಲಾಧಿಕಾರಿಗಳು ನ್ಯಾಯಬೆಲೆ ಅಂಗಡಿಯನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.

Advertisements

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿಎಂ ಕಚೇರಿಯ ಅಧಿಕಾರಿಗಳು, ಚನ್ನಗಿರಿ ತಾಲೂಕಿನ ಹಿರೇಮಳಲಿ ಗ್ರಾಮದ ನ್ಯಾಯಬೆಲೆ ಅಂಗಡಿಯವರು ಪ್ರತಿ ಪಡಿತರ ಚೀಟಿಗೆ 1 ಕೆ.ಜಿ ಪಡಿತರ ಕಡಿಮೆ ವಿತರಿಸುತ್ತಿರುವ ವಿಷಯವನ್ನು ಚಂದ್ರಶೇಖರ್ ಎನ್ನುವವರು ಟ್ವಿಟ್ಟರ್ ಮೂಲಕ ನಮ್ಮ ಗಮನಕ್ಕೆ ತಂದರು. ದೂರು ಬಂದ ತಕ್ಷಣ ಸಂಬಂಧಪಟ್ಟ ಇಲಾಖೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಯಿತು. ದೂರು ಕೇಳಿಬಂದ ಕೆಲವೇ ಗಂಟೆಗಳ ಒಳಗೆ ಆಹಾರ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿರುತ್ತಾರೆ. ಅವರ ವರದಿ ಆಧರಿಸಿ ಜಿಲ್ಲಾಧಿಕಾರಿಯವರು ನಿಯಮ ಉಲ್ಲಂಘನೆ ಮಾಡಿರುವ ನ್ಯಾಯಬೆಲೆ ಅಂಗಡಿಯನ್ನು ಅಮಾನತುಗೊಳಿಸಿ, ಪಡಿತರ ವಿತರಣೆಗೆ ತಾತ್ಕಾಲಿಕ ವ್ಯವಸ್ಥೆ ಮಾಡಿರುತ್ತಾರೆ” ಎಂದು ತಿಳಿಸಿದೆ.

“ಬಡಜನರ ಹಸಿವು ನೀಗಿಸುವ ಉದ್ದೇಶದ ಪಡಿತರ ವಿತರಣಾ ವ್ಯವಸ್ಥೆಯನ್ನು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುವ ಇಂತಹ ಯಾವುದೇ ಘಟನೆಗಳನ್ನು ನಾವು ಸಹಿಸುವುದಿಲ್ಲ. ಜನರಿಗೆ ಅವರ ಹಕ್ಕಿನ ಪಡಿತರ ಸಾಮಗ್ರಿಗಳನ್ನು ಸಿಗುವಂತೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಅವರ ಕಚೇರಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X