ಉಡುಪಿ | ಪಂಚರ್ ಹಾಕುವ ವೇಳೆ ಟೈರ್ ಸ್ಫೋಟ: ಗಾಳಿಯಲ್ಲಿ ಹಾರಿಬಿದ್ದ ಯುವಕ; ವಿಡಿಯೋ ವೈರಲ್

Date:

Advertisements

ಪಂಚರ್ ಶಾಪ್ ಒಂದರಲ್ಲಿ ಟೈರಿಗೆ ಗಾಳಿ ತುಂಬುವ ಸಂದರ್ಭ ಟೈರ್ ಸ್ಪೋಟಗೊಂಡು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಬಳಿ ನಡೆದಿದೆ.

ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ಯುವಕ ಅಬ್ದುಲ್ ರಜೀದ್ (19) ಎಂದು ಗುರುತಿಸಲಾಗಿದೆ.

ಖಾಸಗಿ ಶಾಲೆ ಬಸ್ಸೊಂದರ ಟೈರ್ ಪ್ಯಾಚ್‌ಗೆಂದು ಬಂದಿದ್ದು, ಟಯರನ್ನು ಕೆಳಗಿಳಿಸಿ ಗಾಳಿ ತುಂಬುವಾಗ ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈರ್ ಸಿಡಿದು ಸ್ಪೋಟಗೊಂಡಿದೆ. ಈ ಸಂದರ್ಭ ಗಾಳಿ ತುಂಬಿಸುತ್ತಿದ್ದ ಯುವಕ ಎದ್ದು ನಿಲ್ಲುವಷ್ಟರಲ್ಲಿ ಸ್ಪೋಟಗೊಂಡ ಟೈಯರ್‌ನ ಸಿಡಿತಕ್ಕೆ ಗಾಳಿಯಲ್ಲಿ ಮೇಲಕ್ಕೆ ಎಸೆಯಲ್ಪಟ್ಟಿದ್ದಾನೆ.

Advertisements

ಟೈರ್ ಸ್ಫೋಟಗೊಂಡ ಬಳಿಕ ಟೈಯರ್ ಡ್ರಮ್ ಬಸ್ಸಿನ ಮೇಲ್ಚಾವಣಿಯ ಮೇಲೆ ಬಿದ್ದು ನೆಲಕ್ಕುರುಳಿದೆ. ಘಟನೆಯ ಎಲ್ಲಾ ದೃಶ್ಯಾವಳಿಗಳು ಪಕ್ಕದಲ್ಲೇ ಇರುವ ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸದ್ಯ ಗಂಭೀರ ಗಾಯಗೊಂಡಿರುವ ಯುವಕ ಅಬ್ದುಲ್ ರಜೀದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X