ಚಿಕ್ಕಬಳ್ಳಾಪುರ | ಮೇ 20ರಂದು ಉಚಿತ ಪ್ಲಾಸ್ಟಿಕ್‌ ಸರ್ಜರಿ ಶಿಬಿರ

Date:

Advertisements

ಸುಟ್ಟ ಗಾಯ, ಆಸಿಡ್ ದಾಳಿ, ವಿದ್ಯುತ್ ಅಪಘಾತಗಳಿಂದಾದ ಗಾಯಗಳನ್ನು ಪ್ಲಾಸ್ಟಿಕ್‌ ಸರ್ಜರಿ ಮೂಲಕ ಸರಿಪಡಿಸುವ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಇದೇ ಮೇ 20ರಂದು ಬೆಂಗಳೂರಿನ ಮಲ್ಲೇಶ್ವರಂ 18ನೇ ಕ್ರಾಸ್‌ನಲ್ಲಿರುವ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ಫ್ರೆಂಡ್ಸ್ ವೆಲ್ಫೇರ್ ಆರ್ಗನೈಜೇಷನ್‌ನ ಅಧ್ಯಕ್ಷ ದೀಪೇಂದ್ರ ದೇವ್‌ ತಿಳಿಸಿದರು.

ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಟ್ಟ ಗಾಯಗಳಿಂದ ಸಾರ್ವಜನಿಕರೊಂದಿಗೆ ಬೆರೆಯಲು ಸಾಧ್ಯವಾಗದೆ ಅದೆಷ್ಟೋ ಜನ ಪರಿತಪಿಸುತ್ತಿದ್ದಾರೆ. ಇನ್ನು ಯಾವುದೋ ಕ್ಷುಲ್ಲುಕ ಕಾರಣಕ್ಕೆ ಆಸಿಡ್ ದಾಳಿಯಾಗಿ ಸುಂದರ ಮುಖ ವಿಕಾರವಾಗಿ ಸಾರ್ವಜನಿಕವಾಗಿ ಮುಖ ತೋರಿಸದೆ ನೊಂದವರು ಎಷ್ಟೋ ಮಂದಿ. ಇನ್ನು ವಿದ್ಯುತ್ ಆಘಾತ ಸೇರಿ ಇತರೆ ಸಮಸ್ಯೆಗಳಿಂದಲೂ ಮುಖ ಸೇರಿ ದೇಹದ ಯಾವುದೇ ಭಾಗದಲ್ಲಿ ಗಾಯಗಳಾಗಿ, ಇದರಿಂದ ಸಾರ್ವಜನಿಕರೊಂದಿಗೆ ಬೆರೆಯಲಾಗದೆ ಪರದಾಡುತ್ತಿರುವವರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಸಲುವಾಗಿ ಶಿಬಿರ ಆಯೋಜಿಸಿರುವುದಾಗಿ ತಿಳಿಸಿದರು.

ಎಲ್ಲ ರೀತಿಯ ಸುಟ್ಟ ಗಾಯಗಳಿಗೂ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು. ಸಮಾಜಕ್ಕೆ ಸೇವೆ ಮಾಡಬೇಕು ಎಂಬ ಉದ್ಧೇಶದಿಂದ ಉಚಿತವಾಗಿ ಈ ಪ್ಲಾಸ್ಟಿಕ್ ಸರ್ಜರಿ ಶಿಬಿರ ನಡೆಸಲಾಗುತ್ತಿದೆ. ಕಳೆದ 28 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರಗಳನ್ನು ನಡೆಸಲಾಗುತ್ತಿದ್ದು, ಈ ಬಾರಿ 28ನೇ ವರ್ಷದ ಪ್ಲಾಸ್ಟಿಕ್ ಸರ್ಜರಿ ಶಿಬಿರ ನಡೆಯುತ್ತಿದೆ. ಈವರೆಗೆ ಸುಮಾರು 4500 ಮಂದಿ ರೋಗಿಗಳಿಗೆ ಉಚಿತವಾಗಿ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ ಎಂದು ಹೇಳಿದರು.

Advertisements

ಪ್ರತಿ ವರ್ಷವೂ ರಾಜ್ಯ ಹಾಗೂ ಹೊರರಾಜ್ಯಗಳಿಂದ ಶಿಬಿರದಲ್ಲಿ ಹಲವು ಮಂದಿ ಭಾಗವಹಿಸುತ್ತಿದ್ದು, ಎಲ್ಲವೂ ಉಚಿತವಾಗಿರಲಿದೆ. ಪ್ಲಾಸ್ಟಿಕ್ ಸರ್ಜರಿ, ಆಸ್ಪತ್ರೆ ವೆಚ್ಚ ಸೇರಿ ಎಲ್ಲವೂ ಉಚಿತವಾಗಿರಲಿದೆ. ಇನ್ನು ಹೊರಗೆ ಯಾರಾದರೂ ಇದೇ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಬೇಕಾದರೆ ಕನಿಷ್ಠ 2.5 ಲಕ್ಷದಿಂದ 5 ಲಕ್ಷದವರೆಗೆ ವೆಚ್ಚವಾಗಲಿದೆ. ಹಾಗಾಗಿ ಇಲ್ಲಿ ಸಂಪೂರ್ಣ ಉಚಿತವಾಗಿರುವ ಕಾರಣ ಆರ್ಥಿಕವಾಗಿ ಹಿಂದುಳಿದವರು ಶಿಬಿರದ ಸದುಪಯೋಗಪಡೆಯಬಹುದು ಎಂದು ಹೇಳಿದರು.

ಆಸಕ್ತರು ಮೊ.ಸಂಖ್ಯೆ: 9880307780, 9148741707 ಕರೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಸಂಸ್ಥೆಯ ಜಂಟಿ ಕಾರ್ಯದರ್ಶಿ ಕುಂತಲ್‌ ಶಾ, ಪಾಯಲ್ ಶಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X