ತಿಪಟೂರಿನಲ್ಲಿ ಉಚಿತ ಕೌಶಲ್ಯ ತರಬೇತಿ ಕೇಂದ್ರ ಕಾರ್ಯಾರಂಭ

Date:

Advertisements

ತಿಪಟೂರು ತಾಲೂಕಿನ  ಯುವಜನತೆಯ ಉದ್ಯೋಗಾರ್ಹತೆ ಹೆಚ್ಚಿಸಲು ಇಲ್ಲಿನ ಸತ್ಯಕುಮಾರ್ ರಿಲೀಫ್ ಫೌಂಡೇಷನ್ ವತಿಯಿಂದ  ಸ್ಥಾಪಿಸಲಾಗಿರುವ ಸಂಪೂರ್ಣ ಉಚಿತ ಕೌಶಲ ತರಬೇತಿ ಕೇಂದ್ರ ಗುರುವಾರ ಕಾರ್ಯಾರಂಭಗೊಂಡಿತು. 

ಇಂದು ಮೊದಲ ಬ್ಯಾಚಿನ ಅಭ್ಯರ್ಥಿಗಳಿಗೆ ತರಬೇತಿ ಆರಂಭಗೊಳ್ಳುತ್ತಿದ್ದು, ಇದು ಶೇಕಡ ನೂರರಷ್ಟು ಉದ್ಯೋಗ ಗ್ಯಾರಂಟಿಯೊಂದಿಗೆ ರೂಪಿಸಿರುವ 35 ದಿನಗಳ ಉಚಿತ ತರಬೇತಿ ಕಾರ್ಯಕ್ರಮವಾಗಿದೆ. ಎಸ್ ಎಸ್ ಎಲ್ ಸಿ, ಡಿಪ್ರೊಮಾ ಮತ್ತು ಪದವಿ ಪಾಸ್ ಅಥವಾ ಫೇಲ್ ಆದವರಿಗೆ ತರಬೇತಿಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಟ್ಯಾಲಿ, ಸ್ಪೋಕನ್ ಇಂಗ್ಲಿಷ್, ಕಂಪ್ಯೂಟರ್, ಜಿ ಎಸ್ ಟಿ, ಜೀವನ ಕೌಶಲ್ಯ ಗಳು, ಆಪ್ತ ಸಮಾಲೋಚನೆ ಹಾಗೂ ಆತ್ಮವಿಶ್ವಾಸ ವೃದ್ಧಿಗೆ ಆದ್ಯತೆ ನೀಡುವ ಮೂಲಕ ಅಭ್ಯರ್ಥಿಗಳನ್ನು ಉದ್ಯೋಗಕ್ಕೆ ಸಜ್ಜುಗೊಳಿಸಲಾಗುತ್ತದೆ ಎಂದು ಶ್ರೀಧರ್ ವಿವರಿಸಿದರು.

1001078605

 ಶಾಸಕ ಕೆ ಷಡಕ್ಷರಿ ಅವರು ಮಾತನಾಡಿ, “ಸತ್ಯಕುಮಾರ್ ಪ್ರತಿಷ್ಠಾನ, ಎಂ ಜೆ ಎಸ್ ಪಿ ಆರ್ ಮತ್ತು ಉನ್ನತಿ ಸಂಸ್ಥೆಯ ಸಹಯೋಗದಲ್ಲಿ ಈ ಕೌಶಲ್ಯ ಕೇಂದ್ರ ಸ್ಥಾಪಿಸಿ ಶ್ಲಾಘನೀಯ ಕಾರ್ಯ ಮಾಡಿದೆ. ಪ್ರಸ್ತುತ ಉದ್ದಿಮೆಗಳ ನಿರೀಕ್ಷೆಗಳಿಗೆ ಅನುಗುಣವಾಗಿ ಯುವಜನತೆಯಲ್ಲಿ ಕೌಶಲಗಳನ್ನು ಮೈಗೂಡಿಸಬೇಕೆಂಬುದೇ ಈ ಉಪಕ್ರಮದ ಉದ್ದೇಶವಾಗಿದ್ದು, ಇಲ್ಲಿನ ಯುವಜನತೆ ಇದರ ಸದ್ಬಳಕೆ ಮಾಡಿಕೊಳ್ಳಬೇಕು” ಎಂದರು.

Advertisements

ಉನ್ನತಿ ಪ್ರತಿಷ್ಠಾನವು ರಾಷ್ಟ್ರೀಯ ಕೌಶಲಾಭಿವೃದ್ಧಿ ಮಂಡಳಿಯಿಂದ (ನ್ಯಾಷನಲ್ ಸ್ಕಿಲ್ ಡೆವಲಪ್ ಮೆಂಟಲ್ ಕೌನ್ಸಿಲ್) ಮಾನ್ಯತೆ ಹೊಂದಿದ್ದು, ದೇಶದಾದ್ಯಂತ 38 ಕೌಶಲ ಕೇಂದ್ರಗಳನ್ನು ಸ್ಥಾಪಿಸಿದೆ. ಸಂಸ್ಥೆಯು ವಿವಿಧ ಮುಂಚೂಣಿ ಕಂಪನಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಈವರೆಗೆ 70,000ಕ್ಕೂ ಹೆಚ್ಚು ಜನರನ್ನು ತರಬೇತಿಯೊಂದಿಗೆ ಸಜ್ಜುಗೊಳಿಸಿ ಉದ್ಯೋಗ ಲಭ್ಯವಾಗಿಸಿದೆ ಎಂದು ಎಂ ಜೆ ಎಸ್ ಪಿ ಆರ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್  ಎಂ ಜೆ ಶ್ರೀಕಾಂತ್ ಹೇಳಿದರು.

ಕಾರ್ಯಕ್ರಮದಲ್ಲಿ ಫೌಂಡೇಷನ್ ನ ಟ್ರಸ್ಟಿ ಡಾ.ಜಿ.ಎಸ್.ಶ್ರೀಧರ್, ಶಂಕರ ಕಿಯೋನಿಕ್ಸ್ ಸಂಸ್ಥೆಯ ಶಿವಪ್ರಕಾಶ್, ಉನ್ನತಿ ತರಬೇತುದಾರರಾದ ತೃಪ್ತಿ, ಚೇತನಾ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X