ಯುವತಿ ಜೊತೆ ನಿಶ್ಚಿತಾರ್ಥ; ಯುವಕನ ಮೇಲೆ ಬಿಸಿನೀರು ಎರಚಿದ ಸ್ನೇಹಿತೆ

Date:

Advertisements
  • ವಿವಾಹವಾಗಿದ್ದನ್ನು ಮುಚ್ಚಿಟ್ಟು ಯುವಕನನ್ನು ಪ್ರೀತಿಸುತ್ತಿದ್ದ ಮಹಿಳೆ
  • ಹುಟ್ಟುಹಬ್ಬದ ನೆಪ ಹೇಳಿ ಮನೆಗೆ ಕರೆದು ಬಿಸಿನೀರು ಎರಚಿದ್ದ ಮಹಿಳೆ

ಅನ್ಯ ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಯುವಕನ ಮೇಲೆ ಆತನ ಸ್ನೇಹಿತೆ ಬಿಸಿನೀರು ಎರಚಿ, ಗಾಯಗೊಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಲಬುರಗಿ ಮೂಲದ ವಿಜಯ್ ಕುಮಾರ್ ಗಾಯಗೊಂಡಿರುವ ಯುವಕ. ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಮೇಲೆ ಬಿಸಿನೀರು ಎರಚಿದ ಮಹಿಳೆ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯ್ ಕುಮಾರ್ ಬಟ್ಟೆ ಮಾರಾಟ ಜಾಲತಾಣದಲ್ಲಿ ಕೆಲಸ ಮಾಡುತ್ತಿದ್ದರು. ಆತನಿಗೆ ತನ್ನದೇ ಜಿಲ್ಲೆಯ ಮಹಿಳೆಯೊಬ್ಬರು ಪರಿಚಯವಾಗಿದ್ದರು. ಇಬ್ಬರ ನಡುವೆ ಸ್ನೇಹವಿತ್ತು. ಆದರೆ, ಆಕೆಗೆ ವಿವಾಹವಾಗಿದ್ದರೂ, ಈತನನ್ನು ಪ್ರೀತಿಸುತ್ತಿದ್ದರು ಮತ್ತು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದರು ಎಂದು ತಿಳಿದುಬಂದಿದೆ.

Advertisements

“ಆಕೆಗೆ ವಿವಾಹವಾಗಿರುವ ವಿಚಾರ ತಿಳಿದುಕೊಂಡ ವಿಜಯ್, ಆಕೆಯಿಂದ ಅಂತರ ಕಾಯ್ದುಕೊಂಡಿದ್ದ. ಅಲ್ಲದೆ, ಇತ್ತೀಚೆಗೆ ಬೇರೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ” ಎಂದು ಪೊಲೀಸರು ತಿಳಿಸಿದ್ದಾರೆ.

“ಮೇ 25ರಂದು ಮಹಿಳೆ, ತನ್ನ ಹುಟ್ಟುಹಬ್ಬದ ಆಚರಣೆಗೆಂದು ವಿಜಯ್‌ನನ್ನು ತನ್ನ ಕೊಠಡಿಗೆ ಕರೆಸಿಕೊಂಡಿದ್ದರು. ಈ ವೇಳೆ, ವಿಜಯ್‌ ಮೇಲೆ ಬಿಸಿನೀರು ಎರಚಿ, ಮಹಿಳೆ ಪರಾರಿಯಾಗಿದ್ದಾರೆ. ಮನೆ ಮಾಲೀಕರ ಸಹಾಯದಿಂದ ವಿಜಯ್ ಆಸ್ಪತ್ರೆಗೆ ದಾಖಲಾಗಿದ್ದಾರೆ” ಎಂದು ಪೊಲೀಸರು ವಿವರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X