ಗದಗ | 13 ಶಿಶುಪಾಲನಾ ಕೇಂದ್ರಗಳ ಆರಂಭ

Date:

Advertisements

ಗದಗ ತಾಲೂಕಿನಲ್ಲಿ ಆ.15ರಂದು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಅಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ ಮಕ್ಕಳಿಗಾಗಿ 13 ಶಿಶುಪಾಲನ ಕೇಂದ್ರಗಳು ಕಾರ್ಯಾರಂಭಗೊಳ್ಳಲಿವೆ ಎಂದು ಗದಗ ಜಿಲ್ಲಾ ಪಂಚಾಯತ್‌ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಉದ್ಘಾಟನಾ ಹೊಸ್ತಿಲಲ್ಲಿ ಇರುವ ಶಿಶುಪಾಲನಾ ಕೇಂದ್ರಗಳನ್ನು ಪರಿಶೀಲಿಸಿ ಮಾತನಾಡಿದರು. “ಗ್ರಾಮೀಣ ಮಹಿಳೆಯರ ಮಕ್ಕಳ ಪಾಲನೆ ಮತ್ತು ಪೋಷಣೆಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರ ಕೂಸಿನ ಮನೆ (ಶಿಶುಪಾಲನಾ ಕೇಂದ್ರ)ಯನ್ನು ಆರಂಭಿಸುತ್ತಿದೆ. ಅದಕ್ಕಾಗಿ ಗದಗ ತಾಲೂಕಿನಲ್ಲಿ ಯೋಜನೆಯ ಸಾಕಾರಕ್ಕೆ ಸಕಲ ಸಿದ್ಧತೆ ನಡೆದಿದ್ದು, ಪ್ರಸ್ತುತ 13 ಗ್ರಾಮ ಪಂಚಾಯಿತಿಗಳಲ್ಲಿ 13 ‘ಕೂಸಿನ ಮನೆ’ಗಳು ಚಾಲನೆಗೆ ಸಜ್ಜಾಗಿ ನಿಂತಿವೆ” ಎಂದು ಹೇಳಿದರು.

“ಗ್ರಾಮ ಮಟ್ಟದಲ್ಲಿ ಮನರೇಗಾ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಶಿಶುಪಾಲನಾ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಸನ್ನ‌ದ್ಧವಾಗಿದೆ. ಗ್ರಾಮೀಣ ಮಹಿಳೆಯರ ಮಕ್ಕಳ ಪಾಲನಾ ‘ಕೂಸಿನ ಮನೆ’ ಸ್ಥಾಪನೆಯ ಉದ್ದೇಶವಾಗಿದೆ” ಎಂದರು

Advertisements

“ಮನರೇಗಾ ಅಡಿ ಕೆಲಸ ನಿರ್ವಹಿಸುತ್ತಿರುವ ಮಹಿಳಾ ಕೂಲಿ ಕಾರ್ಮಿಕರ ಮತ್ತು ಗ್ರಾಮೀಣ ಭಾಗದ ಇತರ ಕೆಲಸಗಳಲ್ಲಿ ತೊಡಗಿರುವ ತಾಯಂದಿರ 6 ತಿಂಗಳಿಂದ 3 ವರ್ಷದ ಶಿಶುಗಳನ್ನು ವ್ಯವಸ್ಥಿತವಾಗಿ ಪೋಷಣೆ ಮಾಡುವ ಉದ್ದೇಶದಿಂದ ‘ಕೂಸಿನ ಮನೆ’ ಯೋಜನೆ ಜಾರಿಗೆ ತರಲಾಗಿದೆ” ಎಂದು ತಿಳಿಸಿದರು.

13 ಕೂಸಿನ ಮನೆ: ಗದಗ ತಾಲೂಕಿನ 27 ಗ್ರಾಪಂಗಳ ಪೈಕಿ ಆಯ್ದ 13 ಗ್ರಾಮ ಪಂಚಾಯಿತಿಗಳಲ್ಲಿ ಮನರೇಗಾ ಯೋಜನೆ ಮತ್ತು ಇತರ ಯೋಜನೆಗಳ ಒಗ್ಗೂಡಿಸುವಿಕೆ ಮೂಲಕ ಪ್ರತಿ ದಿನ 6ರಿಂದ 8 ತಾಸುಗಳ ಕಾಲ ಕೇಂದ್ರಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಕೂಸಿನ ಮನೆ’ಗಳು ಕಾರ್ಯ ನಿರ್ವಹಿಸಲಿವೆ.

ಈ ಸುದ್ದಿ ಓದಿದ್ದೀರಾ? ಬಡವರು ವಾಸಿಸುತ್ತಿರುವ ಜಾಗಕ್ಕೆ ಅವರೇ ಮಾಲೀಕರು: ಮಾಜಿ ಸಚಿವ ಎಚ್ ಆಂಜನೇಯ

ಗದಗ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಎಚ್ ಎಸ್ ಜನಗಿ ಮಾತನಾಡಿ, “ರಾಜ್ಯ ಸರ್ಕಾರವು ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಎಂಬ ಮಹತ್ವದ ಯೋಜನೆ ಜಾರಿಗೆ ತಂದಿದ್ದು, ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಜವಾಬ್ದಾರಿ ಪ್ರತಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯ” ಎಂದು ತಿಳಿಸಿದರು.

ಕೇಂದ್ರದಲ್ಲಿ ಏನೇನಿದೆ?

“ಶಿಶುಪಾಲನಾ ಕೇಂದ್ರಗಳಲ್ಲಿ ಮೊದಲು ಸುಸಜ್ಜಿತ ಕಟ್ಟಡ, ನೀರು, ಗಾಳಿ ಬೆಳಕು, ಶೌಚಾಲಯ ವ್ಯವಸ್ಥೆ ಇರಬೇಕು. ಜತೆಗೆ ಮಕ್ಕಳಿಗೆ ಆಟದ ಸಾಮಗ್ರಿಗಳು, ಕಲಿಕಾ ಸಾಮಗ್ರಿಗಳನ್ನು ಒಳಗೊಂಡಿರಲಿದೆ” ಎಂದು ಅಧಿಕಾರಿಗಳು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X