ಗದಗ | ನಿರಂತರ ಮಳೆಯಿಂದ 192 ಮನೆಗಳು ಹಾನಿ

Date:

Advertisements

ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಒಂದು ಕಡೆ ರೈತರಿಗೆ ಸಂತೋಷವಾದರೆ, ಇನ್ನೊಂದು ಕಡೆ ನಾಗರಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆಯಿಂದ ಎಷ್ಟೋ ಮನೆಗಳು, ಕುಸಿದ ಗೋಡೆಗಳು ಹಾನಿಗೀಡಾಗಿದ್ದು, ಸ್ಥಳಿಯರನ್ನು ಸಂಕಷ್ಟಕ್ಕೆ ದೂಡಿದೆ.

ಗದಗ ಜಿಲ್ಲೆಯಲ್ಲೂ ನಿರಂತರ ಮಳೆಯಿಂದ ಸಾಕಷ್ಟು ಮನೆಗಳು ಹಾನಿಗೊಳಗಾಗಿವೆ. ಜಿಲ್ಲೆಯಲ್ಲಿ ಜುಲೈ 1 ರಿಂದ 28ರವರೆಗೆ 118 ಮಿಮೀ ಮಳೆಯಾಗಿದೆ. ವಾಡಿಕೆ ಮಳೆ 61 ಮಿಮೀ ಇದ್ದು ಶೇ.93 ರಷ್ಟು ಮಳೆ ಹೆಚ್ಚಾಗಿದೆ.

ಮಳೆಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 192 ಮನೆಗಳು ಭಾಗಶಃ ಹಾನಿಗೀಡಾಗಿವೆ. ತಾಲೂಕುವಾರು ನೋಡುವುದಾದರೆ, ಗದಗ-73, ಗಜೇಂದ್ರಗಡ-15, ಲಕ್ಷ್ಮೇಶ್ವರ-46, ಮುಂಡರಗಿ-8, ನರಗುಂದ-19, ರೋಣ-4, ಶಿರಹಟ್ಟಿ-27 ಮನೆಗಳು ಹಾನಿಯಾಗಿವೆ.

Advertisements

ನಿರಂತರ ಮಳೆಯಿಂದ ಬಹುತೇಕೆರು ಮನೆಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಕೂಡಲೇ ಸರ್ಕಾರವು ಗದಗ ಜಿಲ್ಲೆಯಾದ್ಯಂತ ಹಾನಿಗೊಳಗಾದ ಮನೆಗಳಿಗೆ ಸೂಕ್ತ ಪರಿಹಾರ ಕೊಡಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ರಾಯಚೂರು | ಉಕ್ಕಿ ಹರಿಯುತ್ತಿದೆ ಕೃಷ್ಣಾ ನದಿ; ಸೇತುವೆ ಮುಳುಗಡೆ

ಜಲಾಶಯ ಮಟ್ಟ: ನವಿಲು ತೀರ್ಥ ಜಲಾಶಯ 37.785 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಈವರೆಗೆ 18.311 ಟಿಎಂಸಿ ನೀರು ಸಂಗ್ರಹವಾಗಿದೆ. ನೀರಿನ ಒಳ ಹರಿವು 12,821 ಕ್ಯೂಸೆಕ್‌ ಇದ್ದು, ಹೊರ ಹರಿವು 194 ಕ್ಯೂಸೆಕ್ ಇದೆ. ಭದ್ರಾ ಜಲಾಶಯ 71.535 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಈವರೆಗೆ 38,271 ಟಿಎಂಸಿ ನೀರು ಸಂಗ್ರಹವಾಗಿದೆ. ನೀರಿನ ಒಳ ಹರಿವು 16,041 ಕ್ಯೂಸೆಕ್ ಇದ್ದು, ಹೊರ ಹರಿವು 185 ಕ್ಯೂಸೆಕ್ ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X