ಗದಗ | ವಸತಿ ನಿಲಯಗಳ ಮಂಜೂರಾತಿಗೆ ಅಂಜುಮನ್ ಇಸ್ಲಾಂ ಕಮಿಟಿ ಒತ್ತಾಯ

Date:

Advertisements

ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯ, ಮೇಟ್ರಿಕ್ ಪೂರ್ವ, ಮೇಟ್ರಿಕ ನಂತರ ವಸತಿ ನಿಲಯ ಮಂಜೂರು ಮಾಡಬೇಕೆಂದು ಅಂಜುಮನ್ ಇಸ್ಲಾಂ ಕಮೀಟಿ ಮುಖಂಡರು ಒತ್ತಾಯಿಸಿದ್ದಾರೆ. ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಶರಣಪ್ಪ ಗರೇಬಾಳ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಮನವಿ ಸಲ್ಲಿಸಿ ಮಾತನಾಡಿದ ಕಮಿಟಿಯ ಕಾರ್ಯದರ್ಶಿ ದವಲಸಾಬ್ ತಾಳಿಕೋಟಿ, “ಗಜೇಂದ್ರಗಡ ಪಟ್ಟಣವು ಗದಗ ಜಿಲ್ಲೆಯಲ್ಲಿಯೇ ಅತ್ಯಂತ ತೀವ್ರಗತಿಯಲ್ಲಿ ಬೆಳವಣಿಗೆ ಹೊಂದುತ್ತಿರುವ ತಾಲೂಕು ಕೇಂದ್ರವಾಗಿದೆ. ಸುಮಾರು 25,000ಕ್ಕೂ ಹೆಚ್ಚು ಮಂದಿ ಅಲ್ಪಸಂಖ್ಯಾತರ ಸಮುದಾಯದವರು ವಾಸಿಸುತ್ತಿದ್ದಾರೆ. ಈ ಸಮುದಾಯದ ಮಕ್ಕಳ ಉನ್ನತ ಶಿಕ್ಷಣ ಹಾಗೂ ಭವಿಷ್ಯದ ಹಿತ ದೃಷ್ಟಿಯಿಂದ ಗಜೇಂದ್ರಗಡ ಪಟ್ಟಣದಲ್ಲಿಯೇ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯ ಸ್ಥಾಪನೆ ಮಾಡಬೇಕು. ಅದಕ್ಕಾಗಿ ಹಲವು ವರ್ಷಗಳಂದಲೂ ಬೇಡಿಕೆ ಸಲ್ಲಿಸುತ್ತಿದ್ದೇವೆ. ಆದರೂ, ಇನ್ನೂ ಜಾರಿಯಾಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವಂತೆ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯ, ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಸತಿ ನಿಲಯವನ್ನು ಗಜೇಂದ್ರಗಡ ಪಟ್ಟಣದಲ್ಲಿಯೇ ಸ್ಥಾಪಿಸುವ ಮೂಲಕ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸಬೇಕು” ಎಂದು ದಾವಲಸಾಬ್ ತಾಳಿಕೋಟಿ ಹೇಳಿದರು.

Advertisements

ಈ ವೇಳೆ ಅಂಜುಮನ್ ಇಸ್ಲಾಂ ಕಮೀಟಿ ಛೇರ್ಮನ್ ಹಸನಸಾಬ ತಟಗಾರ, ಫಯಾಜ್ ತೋಟದ, ದಾದು ಹಣಗಿ, ಭಾಷಾ ಮುದಗಲ್ಲ, ಇಮ್ರಾನ್ ಅತ್ತಾರ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X