ಗದಗ | ಗೋ ಹತ್ಯೆ, ಜಾತಿ ಹೆಸರಲ್ಲಿ ದಲಿತರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು: ಶರಣು ಪೂಜಾರ

Date:

ಭಾರತ ಸರ್ವಜನಾಂಗದ ಶಾಂತಿಯ ತೋಟ. ಈ ದೇಶದಲ್ಲಿ ಎಲ್ಲ ಧರ್ಮದವರು ಸ್ವಚ್ಛಂದವಾಗಿ‌ ಬದುಕುತ್ತಿದ್ದಾರೆ. ಈ ಬದುಕನ್ನು, ಈ ತೋಟವನ್ನು ಜಾತಿಯ ಹೆಸರಿನಲ್ಲಿ, ಗೋಹತ್ಯೆ ಹೆಸರಿನಲ್ಲಿ, ದಲಿತರ ಮೇಲೆ‌ ದೌರ್ಜನ್ಯ ಮಾಡುವುದನ್ನು ನಿಲ್ಲಿಸಬೇಕು ಎಂದು ಶರಣು ಪೂಜಾರ ಹೇಳಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ‌ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ರವಿ ಮಾದರ ಅವರ ನೇತೃತ್ವದಲ್ಲಿ ‘ಗೋ ಹತ್ಯೆ ನಿಷೇಧ ಕಾಯ್ದೆ ರದ್ದತಿ’ ಖಂಡಿಸಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

“ಕೋಲಾರ ಜಿಲ್ಲೆಯಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣದ ಆರೋಪಿಗಳನ್ನು ಗಲ್ಲಿಗೆ ಹಾಕಬೇಕು. ಮಧ್ಯಪ್ರದೇಶದಲ್ಲಿ ಮಾನವನ ಘನತೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾ ಎಂಬ ಆರೋಪಿಯನ್ನು ಗಡಿಪಾರು ಮಾಡಬೇಕು ಹಾಗೂ ಪ್ರಸ್ತುತದಲ್ಲಿಯೂ ದೇಶದಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಬೇಕು” ಎಂದು ಖಂಡಿಸಿ ಪ್ರತಿಭಟನೆ ನಡೆಸಿದರು.

ದಸಂಸ ಜಿಲ್ಲಾ ಸಂಚಾಲಕ ಶರಣು ಪೂಜಾರ ಮಾತನಾಡಿ, “ಬಿಜೆಪಿ ನಾಯಕರು ಗೋ ಹತ್ಯೆ ನಿರ್ಬಂಧ ಹೇರಲೇಬೇಕು ಎಂಬ ದೃಢ ನಿಶ್ಚಯದೊಂದಿಗೆ ಗೋ ಹತ್ಯೆ ನಿಷೇಧ ಕಾಯ್ದೆ ತಂದಿದ್ದರು. ಆದರೆ, ಈ ಕಾಯ್ದೆಗೆ ಆರಂಭದಿಂದಲೂ‌ ವಿರೋಧ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್, ʼತಮ್ಮ‌ಪಕ್ಷ ಅಧಿಕಾರಕ್ಕೆ‌ ಬಂದರೆ ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುತ್ತೇವೆʼ ಎಂದು ಹೇಳಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ತಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೀರಿ ಎಂಬ ವಿಶ್ವಾಸ ರಾಜ್ಯದ ಶೋಷಿತ ಜನರಲ್ಲಿ ನಂಬಿಕೆ ಇದೆ” ಈ ನಂಬಿಕೆಯನ್ನು ಹುಸಿಗೊಳಿಸಿದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಗೆ ನೀಡಿದರು.

“ಜಾತಿಗ್ರಸ್ತ ಮನುವಾದಿಗಳು , ಆರ್‌ಎಸ್‌ಎಸ್‌ ಪುಂಡರು ದಲಿತರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ” ಎಂದು ಶರಣು ಪುಜಾರ ಎಚ್ಚರಿಕೆ ನೀಡಿದರು.

ಹೋರಾಟಗಾರ, ಸಂಘಟಕ ಮಾರುತಿ‌ ಚಟಗಿ‌ ಮಾತನಾಡಿ,”ದನದ ಹೆಸರಿನ ಮೇಲೆ ದಲಿತರನ್ನು ಕೊಲ್ಲುವುದು, ಹಿಂಸಿಸುವುದು, ದೌರ್ಜನ್ಯ ನಡೆಸುವುದು ಆರ್‌ಎಸ್‌ಎಸ್ ಪುಂಡರ ನೀತಿಯನ್ನು ನಾವು ಒಟ್ಟಾಗಿ ವಿರೋಧಿಸಬೇಕು. ಈ ದೇಶದಲ್ಲಿ ಪ್ರತಿಯೊಬ್ಬರಿಗೂ‌ ತಾವು ಸೇವಿಸುವ ಆಹಾರದ ಹಕ್ಕಿದೆ. ಮಾಂಸ ತಿನ್ನಬೇಡಿ ಎನ್ನುವುದಕ್ಕೆ‌ ಇವರ್ಯಾರು? ನಮ್ಮ ಆಹಾರ ನಮ್ಮ ಹಕ್ಕು. ಅದನ್ನು ನಾವು ಹಕ್ಕಿನಿಂದಲೇ ಸೇವಿಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಎಸ್ಎಸ್ ಸಂಘಟಕ ಉಮೇಶ ರಾಠೋಡ್ ಮಾತನಾಡಿ, “ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದರೂ, ದಲಿತರ ಮೇಲಿನ ದೌರ್ಜಗಳು, ಮರ್ಯಾದೆ ಹತ್ಯೆ ಪ್ರಕರಣಗಳು, ದಲಿತ ಮಹಿಳೆಯರ ಮೇಲಿನ ಅತ್ಯಾಚಾರಗಳು ಇನ್ನೂ ಕೊನೆಗೊಂಡಿಲ್ಲ. ಅದು ಇವತ್ತಿಗೂ ನಡೆಯುತ್ತಿವೆ. ಇದಕ್ಕೆ ಸೂಕ್ತ ಕಾನೂನನ್ನು ರೂಪಿಸುವಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿಫಲವಾಗಿದೆ. ಸಾಮಾಜಿಕ ನ್ಯಾಯದ ಪರವಾಗಿರುವ ಕಾಂಗ್ರೆಸ್ ಸರ್ಕಾರ ಸೂಕ್ತವಾದ ಕಾನೂನು ಮಾಡಿಸಿ ದಲಿತರಿಗೆ ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದ ಲೂಟಿ, ಜನರಿಗೆ ಅನ್ಯಾಯ, ಕಲಾಪದ ಸಮಯ ಹಾಳು ಮಾಡುವುದೇ ಬಿಜೆಪಿ ಕೆಲಸ: ಕೃಷ್ಣಭೈರೇಗೌಡ ಕಿಡಿ

ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾ ಸಂಚಾಲಕ ಗಣೇಶ ರಾಠೋಡ್, ಡಿಎಸ್ಎಸ್ ಮುಖಂಡರು ಬಸವರಾಜ ಕಡಬಿನ, ಪರಶು ಕಾಳೆ, ಶರಣು ದೊಡ್ಡಮನಿ, ಮರಿಯಪ್ಪ‌ ಮಾದರ, ನೀಲಪ್ಪ‌ ಗುಡಿಮನಿ, ಆನಂದ ಅರಳಿಗಿಡದ, ಶಿವು ಚವ್ಹಾಣ, ಅಲ್ಲಾಭಕ್ಷ ಮುಂಚಾಲಿ, ಆನಂದ ಮಾದರ, ಹನಮಂತ ಮೂಲಿಮನಿ, ಮಾರುತ್ತಿ‌ಬಂಡಿವಡ್ಡರ ಹಾಗೂ ಡಿಎಸ್ಎಸ್ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...