ಗದಗ | ಮಕ್ಕಳಿಗೆ ಹಾಲು ಉಣಿಸುವ ಮೂಲಕ ಬಸವ ಪಂಚಮಿ ಆಚರಣೆ

Date:

Advertisements

ಹಸಿದ ಹೊಟ್ಟೆಗಳಿಗೆ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಹಾಲು ಉಣಿಸುವ ಮುಖಾಂತರ ಪಟ್ಟಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್ ಸೇರಿ ಬಸವಪರ ಸಂಘಟನೆಗಳಿಂದ ಸೋಮವಾರ ಬಸವ ಪಂಚಮಿ ಆಚರಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಹೊರ ವಲಯದ ಗುಡಿಸಲು ವಾಸಿಗಳ ಸ್ಥಳಕ್ಕೆ ಸ್ಥಳೀಯ ಬಸವಪರ ಪರ ಸಂಘಟನೆಗಳ ಮುಖಂಡರು ತೆರಳಿ ಅಲ್ಲಿನ ಮಕ್ಕಳು, ಮಹಿಳೆಯರು ಸೇರಿದಂತೆ ಜನತೆಗೆ ಹಾಲು, ಹಣ್ಣು, ಬಿಸ್ಕೆಟ್ ವಿತರಿಸಲಾಯಿತು.

ಶರಣ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಬಸವರಾಜ ಕೊಟಗಿ ಮಾತನಾಡಿ, ಸಾಂಪ್ರದಾಯಿಕ ನಾಗರಪಂಚಮಿ ಬದಲಾಗಿ ಬಸವ ಪಂಚಮಿ ಆಚರಿಸುತ್ತಿದ್ದೇವೆ. ಸಮಾಜವನ್ನು ವೈಚಾರಿಕ ಪ್ರಜ್ಞೆಯೊಂದಿಗೆ, ಮಾದರಿ ಸಮಾಜ ರೂಪಿಸಲು ಬಸವಾದಿ ಶರಣರು ಪ್ರಯತ್ನ ನಡೆಸಿದ್ದರು.

Advertisements

ಪೌಷ್ಟಿಕ ಆಹಾರವಾಗಿರುವ ಹಾಲನ್ನು ಕಲ್ಲು ಮಣ್ಣಿನ ಮೇಲೆ ಸುರಿಯುವುದು ಸಲ್ಲದು. ಅದರ ಅವಶ್ಯಕತೆ ಇರುವವರಿಗೆ ಅವನ್ನು ನೀಡಬೇಕು. ಅಂಥ ಮಾನವೀಯ ಕಾರ್ಯಗಳಲ್ಲಿ ಬಸವಪರ ಸಂಘಟನೆಗಳು ಸದಾ ಮುಂದಾಗುತ್ತವೆ ಎಂದರು.

ಈ ಸುದ್ದಿ ಓದಿದ್ದೀರಾ? ಹಾಸನ | ಗ್ರಾ.ಪಂ. ನೌಕರರಿಗೆ ವೈಜ್ಞಾನಿಕ ಕನಿಷ್ಠ ವೇತನ ಜಾರಿಗೊಳಿಸುವಂತೆ ಸಿಐಟಿಯು ಆಗ್ರಹ

ಜಾಗತಿಕ ಲಿಂಗಾಯತ ಮಹಾಸಭಾದ ಗುರುಲಿಂಗಯ್ಯ ಓದಸೂಮಠ, ಯು.ಆರ್. ಚನ್ನಮ್ಮನವರ, ಶರಣಪ್ಪ ಪೂಜಾರ, ಬಾಲು ರಾಠೋಡ, ಕಳಕಯ್ಯ ಸಾಲಿಮಠ, ಸಾಗರ ವಾಲಿ, ಬಸವರಾಜ ಚೊಳೀನ, ಶರಣಪ್ಪ ಹಡಪದ, ಮಹಾಂತೇಶ ಕಡಗದ, ಬಸವರಾಜ ಅಂಗಡಿ ಸೇರಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X