ಗದಗ | ಕರ್ನಾಟಕ 50ರ ಸಂಭ್ರಮ; ಮಕ್ಕಳಿಗೆ ಗಾಳಿಪಟ ತಯಾರಿಸಿ-ಹಾರಿಸುವ ಸ್ಪರ್ಧೆ

Date:

Advertisements

ಕರ್ನಾಟಕ 50ರ ಸಂಭ್ರಮದ ಅಂಗವಾಗಿ ಮೆಣಸಗಿ ಹಾಗೂ ಹೊಳೆಮಣ್ಣೂರು ಗ್ರಾಮ ಪಂಚಾಯತಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳಿಗೆ ಗಾಳಿಪಟ ತಯಾರಿಸುವ ಹಾಗೂ ಹಾರಿಸುವ ಸ್ಪರ್ಧೆಯನ್ನು ಆಯೋಜಿಸಿತ್ತು. ಸ್ಪರ್ಧೆಯಲ್ಲಿ 500 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದು, ಸ್ವತಃ ಗಾಳಿಪಟ ತಯಾರಿಸಿ, ಹಾರಿಸಿ ಸಂಭ್ರಮಿಸಿದ್ದಾರೆ.

ಈ ಎರಡೂ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಮೇಲ್ವಿಚಾರಕರು, ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸಿಬ್ಬಂದಿ ಕೆಂಪು ಮತ್ತು ಹಳದಿ ಬಣ್ಣದ ಹಾಳೆಗಳನ್ನು ಪೂರೈಸಿ, ಮಕ್ಕಳಿಗೆ ಗಾಳಿಪಟ ತಯಾರಿಸುವ ಕುರಿತು ತರಬೇತಿ ನೀಡಿದರು.

ಮಕ್ಕಳು ತಮ್ಮ ಸುತ್ತಮುತ್ತ ಸಿಕ್ಕ ಬಿದಿರು ಹಾಗೂ ತೆಂಗಿನ ಗರಿಗಳ ಕಡ್ಡಿಗಳಿಂದ ಗಾಳಿಪಟಗಳನ್ನು ತಯಾರಿಸಿ, ಸೂತ್ರ ಜೋಡಿಸಿ, ಬಾಲಂಗೋಚಿ ಕಟ್ಟಿ, ಒಬ್ಬರಿಗಿಂತ ಒಬ್ಬರು ಅಂದವಾದ ಗಾಳಿಪಟ ತಯಾರಿಸಿದ್ದರು. ಮಕ್ಕಳು ಗಾಳಿಪಟ ತಯಾರಿಸಿ ಹಾರಿಸುತ್ತಿರುವುದನ್ನು ಕಂಡು ಪೋಷಕರೂ ಸಹ ಮಕ್ಕಳಿಗೆ ಗಾಳಿಪಟ ತಯಾರಿಸುವಲ್ಲಿ ನೆರವಾದರು.

Advertisements

ಶಾಲೆಗಳ ಮುಖ್ಯೋಪಾಧ್ಯಾಯರ  ಉತ್ತಮವಾಗಿ ಗಾಳಿಪಟ ತಯಾರಿಸಿ, ಹಾರಿಸಿದ ವಿದ್ಯಾರ್ಥಿಗಳ ಪೈಕಿ ತರಗತಿವಾರು ಪ್ರಥಮ, ದ್ವಿತೀಯ ಹಾಗೂ ಸಮಾಧಾನಕರ ಬಹುಮಾನಕ್ಕೆ ಮಕ್ಕಳ ಹೆಸರು ಅಂತಿಮಗೊಳಿಸಿದರು.

ಹೊಳೆ ಮಣ್ಣೂರು  ಗ್ರಾಮ ಪಂಚಾಯತಿ ಅಧ್ಯಕ್ಷರಾಗಿರುವ ಸುಜಾತ ಮಠಪತಿ, ಗ್ರಾಮೀಣ ಕ್ರೀಡೆಗಳು ಮಹತ್ವ ಕಳೆದುಕೊಳ್ಳುತ್ತಿರುವ ಈ ದಿನಮಾನಗಳಲ್ಲಿ, ನಮ್ಮ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಮಕ್ಕಳಿಗೆ ಗಾಳಿಪಟ ತಯಾರಿಸುವ ತರಬೇತಿ ನೀಡಿ ಅಗತ್ಯ ಪರಿಕರಗಳನ್ನು ಒದಗಿಸುವ  ಮೂಲಕ ಮಕ್ಕಳು ವಿನೂತನವಾಗಿ ಯೋಚಿಸುವಂತೆ, ಸಂಭ್ರಮಿಸುವಂತೆ ಮಾಡಿರುವುದು ನಮಗೆ ಹೆಮ್ಮೆಯ ವಿಷಯ ಎಂದರು.

ಕರ್ನಾಟಕ 50ರ ಸಂಭ್ರಮದ ನಿಮಿತ್ಯ ನಮ್ಮ ಶಾಲೆಯ ಮಕ್ಕಳು ಗಾಳಿಪಟ ತಯಾರಿಸಿ ಹಾರಿಸಿ ಸಂಭ್ರಮಿಸುತ್ತಿರುವುದು ನಮಗೆ ಖುಷಿ ತಂದಿದೆ ಎಂದು ಮೆಣಸಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಈಶ್ವರಪ್ಪ ಮುದೇನೂರು ಅಭಿಪ್ರಾಯ ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X