ಗದಗ | ಸಮುದಾಯದ ವಿರುದ್ಧ ಪ್ರಭುತ್ವದ ಸರ್ವಾಧಿಕಾರಿ ಧೋರಣೆ: ಕೂಡ್ಲೇಪ್ಪ ಗುಡಿಮನಿ

Date:

Advertisements

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯಿಂದ ಕಬ್ಬು ಬೆಳೆಗಾರರಿಗೆ ವರ್ಷಕ್ಕೆ ₹4,000 ಕೋಟಿ ವೆಚ್ಚವಾಗುತ್ತಿದೆ. ಈ ದೇಶದ ಬಂಡವಾಳ ಶಾಹಿಗಳು ಬೆಲೆ ನಿಗದಿಪಡಿಸುತ್ತಾರೆ. ಆದರೆ ರೈತರು ಬೆಳೆದ ಬೆಳೆಗೆ ನಿಜವಾದ ಬೆಲೆ ಸಿಗಬೇಕಾದರೆ ಸಂಘಟಿತರಾಗಿ ಸರ್ಕಾರದ ಈ ನೀತಿಯ ವಿರುದ್ದ ಬೀದಿಗಿಳಿಯಬೇಕು ಎಂದು ಹಿರಿಯ ರೈತ ಮುಖಂಡ ಬಿ ಎಸ್ ಸೊಪ್ಪಿನ ಕೂಡ್ಲೇಪ್ಪ ಗುಡಿಮನಿ ಹೇಳಿದರು.

ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಘಟಕದ ನೇತೃತ್ವದಲ್ಲಿ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ 43ನೇ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ದೊಡ್ಡದೊಡ್ಡ ಕಂಪನಿಗಳ ಮಾಲೀಕರ ಲಕ್ಷಗಟ್ಟಲೆ ಸಾಲವನ್ನು ಮನ್ನಾ ಮಾಡಿದ್ದಾರೆ. ಆದರೆ ರೈತರ ಸಾಲವನ್ನು ಮನ್ನಾ ಮಾಡಲು ಇವರಿಂದ ಸಾಧ್ಯವಾಗಿಲ್ಲ. ಹಾಗಾದ್ರೆ ಇವರು ಯಾರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ಕೇರಳದ ಎಡ ಸರ್ಕಾರ ನಿಜವಾಗಿಯೂ ರೈತರ ಹಿತಾಸಕ್ತಿ ಕಾಪಾಡುವಲ್ಲಿ ಸದಾ ಮುಂದಿದೆ. ನಮ್ಮ ಸರ್ಕಾರಗಳು ರೈತರ ಹಿತಾಸಕ್ತಿ ಕಾಪಾಡುವಲ್ಲಿ ಹಿಂದೆಮುಂದೆ ನೋಡುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ದುಡಿಯುವ ಜನರ ಮೇಲೆಯೂ 4 ಬಿಲ್‌ಗಳನ್ನು ಪಾಸ್ ಮಾಡುವ ಮೂಲಕ ಕಾರ್ಮಿಕ ವಿರೋಧಿ ನೀತಿ, ಹಿಗೇ ಒಂದಲ್ಲಾ ಒಂದು ಸಮುದಾಯದ ಮೇಲೆ ಪ್ರಭುತ್ವ ತನ್ನ ಸರ್ವಾಧಿಕಾರಿ ಧೋರಣೆಯನ್ನು ಮಾಡುತ್ತಲೇ ಬಂದಿದೆ” ಎಂದು ಕೂಡ್ಲೇಪ್ಪ ಗುಡಿಮನಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಹಿರಿಯ ರೈತರಿಗೆ ಪಿಂಚಣಿ, ಸರ್ಕಾರಿ ಶಾಲಾ ಮಕ್ಕಳಿಗೆ ಕೃಪಾಂಕ ನೀಡಿ: ಶಾಸಕ ಬಿ ಆರ್ ಪಾಟೀಲ್

ಜಿಲ್ಲಾ ಸಂಚಾಲಕ ಎಂ ಎಸ್ ಹಡಪದ ಪ್ರಾಸ್ತಾವಿಕವಾಗಿ ಮಾತುನಾಡಿದರು. ನರಗುಂದ ನವಲಗುಂದ ರೈತ ಬಂಡಾಯದ ರುವಾರಿ ಬಿ ಎಸ್ ಸೊಪ್ಪಿನ ಅವರು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿ. ನಾಗರಾಜ, ರವೀಂದ್ರ, ಹೊನವಾಡ ಮಹೇಶ ಪತ್ತಾರ, ಶರಣು ಪೂಜಾರ, ಬಸವರಾಜ ಮಂತೂರ, ಫಯಾಜ್ ತೋಟದ, ಮಹೇಶ ಹಿರೇಮಠ, ಬಾಲು ರಾಠೋಡ, ಪೀರು ರಾಠೋಡ, ಮೇಘರಾಜ ಬಾವಿ ಸೇರಿದಂತೆ ರೈತರು, ಕಾರ್ಮಿಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X