ಗದಗ | ಶಿರಹಟ್ಟಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸಿಇಓ ಭರತ್ ಎಸ್ ಭೇಟಿ

Date:

Advertisements

“ಕಳೆದ ಮೂರು-ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಬಿಡುವಿಲ್ಲದ ಸಂಚಾರ ನಡೆಸಿರುವ ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್ ಸರ್ಕಾರದ ವಿವಿಧ ಕಾಮಗಾರಿಗಳು, ಯೋಜನೆಗಳ ಅನುಷ್ಟಾನ ಹಾಗೂ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಶಿರಹಟ್ಟಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಸಿಇಓ ಭರತ್ ಎಸ್ ಭೇಟಿ ನೀಡಿ ಪರಿಶೀಲನೆ ನೆಡೆಸಿದರು.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕು ಮಜ್ಜುರ ಹಾಗೂ ಮಾಚೇನಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಲ ಜೀವನ್‌ ಮಿಷನ್‌ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿ ನೆಡೆಸಿದರು. 

ಈ ಹಿನ್ನೆಲೆಯಲ್ಲಿ ಮಜ್ಜುರ, ಶಿವಾಜಿ ತಾಂಡಾ,  ಮಾಚೇನಹಳ್ಳಿ, ತೆಗ್ಗಿನ ಭಾವನೂರ, ನವೆಭಾವನೂರ ಗ್ರಾಮಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಜೆಜೆಎಂ ಕಾಮಗಾರಿಗಳು, ಸಂಪರ್ಕಗಳ ಗುಣಮಟ್ಟ, ಮೀಟರ್‌ ಅಳವಡಿಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಕಾರ್ಯ ನಿರ್ವಹಣೆ ಕುರಿತು ವಿವರವಾದ ಪರಿಶೀಲನೆ ನಡೆಸಿದರು. ಇದೆ ಸಂದರ್ಭದಲ್ಲಿ ಮನೆ ಮನೆಗಳಿಗೆ ಅಳವಡಿಸಲಾಗಿರುವ ನಳಗಳ ಸಂರ್ಪಕ ಬಗ್ಗೆ ಫಲಾನುಭವಿಗಳೊಂದಿಗೆ ಚರ್ಚೆ ಮಾಡಿದರು.

ಗ್ರಾಮಗಳ ಭೇಟಿ ವೇಳೆ , “ಗುಣಮಟ್ಟದ ಕಾಮಗಾರಿ ಕೈಗೊಳ್ಳುವಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜವಾಬ್ದಾರಿ ಎಷ್ಟಿದೆಯೋ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳುವುದು, ಸದುಪಯೋಗ ಪಡೆದುಕೊಳ್ಳುವ ಜವಾಬ್ದಾರಿ ಸಾರ್ವಜನಿಕರ ಮೇಲೂ ಇದೆ. ಹೀಗಾಗಿ ಸಾರ್ವಜನಿಕರು ಸರ್ಕಾರದ ಭಾಗವಾಗಿ ಜವಾಬ್ದಾರಿಗಳನ್ನು ನಿಭಾಯಿಸಬೇಕು ಕಾಮಗಾರಿಗಳು ಗುಣನುಟ್ಟದಿಂದ ಆಗುವಂತೆ ನೋಡಿಕೊಳ್ಳಬೇಕಲ್ಲದೇ ಪೂರ್ಣಗೊಂಡಿರುವ ಕಾಮಗಾರಿಗಳಿಂದ ಸದುಪಯೋಗ ಪಡೆದುಕೊಳ್ಳಬೇಕು” ಎಂದರು.

ಈ ವೇಳೆಯಲ್ಲಿ ಶಿರಹಟ್ಟಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ರಾಘವೇಂದ್ರ ದೊಡ್ಡಮನಿ, ಸಹಾಯಕ ಎಂಜಿನಿಯರ್‌ ಮಲ್ಲಿಕಾರ್ಜುನ ಪಾಟೀಲ, ವಿಭಾಗೀಯ ಅಧಿಕಾರಿ ಮುನ್ನಿ ಹರಕುನಿ, ಗ್ರಾಮ ಪಂಚಾಯತ್‌ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X