ಗದಗ | ಶಿಶುಪಾಲನಾ ಕೇಂದ್ರ ಮಕ್ಕಳ ಬೆಳವಣಿಗೆಗೆ ಪೂರಕವಾಗಿರಲಿ: ಜಿ.ಪಂ. ಐಇಸಿ ಸಂಯೋಜಕ

Date:

Advertisements

ಶಿಶುಪಾಲನಾ ಕೇಂದ್ರ ಮಕ್ಕಳಿಗೆ ಪೂರಕ ವಾತಾವರಣ ನಿರ್ಮಿಸುವುದರ ಜೊತೆಗೆ ಸಮಾಜಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದು ಗದಗ ಜಿಲ್ಲಾ ಪಂಚಾಯತ್ ಐಇಸಿ ಸಂಯೋಜಕ ವಿ ಎಸ್ ಸಜ್ಜನ ಹೇಳಿದರು.

ರೋಣ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ರೋಣ‌, ಗಜೇಂದ್ರಗಡ ಹಾಗೂ ನರಗುಂದ ತಾಲೂಕಿನ ಶಿಶುಪಾಲನಾ ಕೇಂದ್ರದ ಆರೈಕೆ ಸಿಬ್ಬಂದಿಗಳ ಮೂರನೇ ದಿನದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

“ಮೊಬೈಲ್ ಕ್ರೆಚೆಸ್ ಸಂಸ್ಥೆಯು ದೆಹಲಿಯಲ್ಲಿ ಸುಮಾರು 54 ವರ್ಷಗಳ ಹಿಂದೆ ಸ್ಥಾಪಿತವಾದ ಒಂದು ಸ್ವಯಂ‌ ಸೇವಾ ಸಂಸ್ಥೆಯಾಗಿದ್ದು, ದೇಶದಾದ್ಯಂತ ಎಲ್ಲ ರಾಜ್ಯಗಳಲ್ಲಿ ಮಕ್ಕಳ ಬಾಲ್ಯದ ಬೆಳವಣಿಗೆ, ಸಮಾಜದ ಅಂಚಿನಲ್ಲಿರುವ ಮಕ್ಕಳ ಹಕ್ಕುಗಳ ಕುರಿತಾಗಿ ಕೆಲಸ ಮಾಡುತ್ತಿದೆ. ಸಂಸ್ಥೆಯು ಸಮುದಾಯ ಮಟ್ಟದಿಂದ ರಾಷ್ಟ್ರ ಮಟ್ಟದಲ್ಲಿ ಸ್ಥಳೀಯ ಸರ್ಕಾರ, ಹಲವಾರು ಸಂಘ ಸಂಸ್ಥೆಗಳೊಡನೆ ಮಕ್ಕಳ ಬಾಲ್ಯದ ಬೆಳವಣಿಗೆಯ ಕುರಿತು ಕೆಲಸ ಮಾಡುತ್ತಿದೆ” ಎಂದರು.

Advertisements

“ಕರ್ನಾಟಕ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯೊಂದಿಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ 4,000 ಶಿಶುಪಾಲನಾ‌ ಕೇಂದ್ರಗಳನ್ನು ಪ್ರಾರಂಭಿಸಲು ಒಪ್ಪಂದ ಮಾಡಿಕೊಂಡಿರುತ್ತದೆ. ಮೊಬೈಲ್ ಕ್ರೆಚಸ್ ಸಂಸ್ಥೆಯು ಕೇಂದ್ರದ ಆರೈಕೆ ಸಿಬ್ಬಂದಿಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದರ ಕುರಿತಾಗಿ ಪಂಚಾಯತ್ ರಾಜ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ರಾಜ್ಯ ಮಟ್ಟದ ತರಬೇತಿ ನೀಡಲಾಗಿತ್ತು. ಅಂತಹ ನುರಿತ ತರಬೇತುದಾರರಿಂದ ತಾಲೂಕು ಮಟ್ಟದಲ್ಲಿ ತರಬೇತಿ ನೀಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸರ್ವ ಧರ್ಮೀಯರಿಂದ ಉರುಸ್‌ ಆಚರಣೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಮೇಲ್ವಿಚಾರಕರು ಹಾಗೂ ತರಬೇತಿದಾರರಾಗಿರುವ ಮಂಜುಳಾ ಗುನಾರಿ, ರಾಜೇಶ್ವರಿ ಮೇಟಿ ತರಬೇತಿ ನೀಡುವುದರ ಜೊತೆಗೆ ಇತರೆ ಗ್ರೂಪ್ ಚಟುವಟಿಕೆಗಳನ್ನು ಮಾಡಿಸಿದರು. ಈ ತರಬೇತಿಯಲ್ಲಿ 54 ಆರೈಕೆ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Dikkatli casino oynamak , keyfinizi korur .
    Bahis limitlerinizi net tanımlamak , kontrolü tutmaya olanak tanır.
    Hesabınızı hariç tutma araçlarını kullanmak, sorunları engellemenize katkıda bulunur.
    Alev Casino TR
    Kumarın sorunlarının farkında olmak, sorunsuz deneyim mümkün kılar.
    Erken aşamada profesyonel destek danışmak, keyfi artırmaya yardımcı olur.
    Bu adımlar , sorunsuz keyifli bahis süreci keyfini maksimize eder.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X