ಗದಗ | ಭ್ರಷ್ಟಾಚಾರ ಆರೋಪ: ಉಪ ತಹಶೀಲ್ದಾರ್ ಡಿ ಟಿ ವಾಲ್ಮೀಕಿ ಅಮಾನತು

Date:

Advertisements

ಅನರ್ಹ ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಯೋಜನೆಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ಭ್ರಷ್ಟಾಚಾರ ಆರೋಪದಲ್ಲಿ ಗದಗ ಉಪ ತಹಸೀಲ್ದಾರ್ ಡಿ ಟಿ ವಾಲ್ಮೀಕಿ ಅವರನ್ನು ಅಮಾನತು ಮಾಡಲಾಗಿದೆ.

ಗದಗ ತಹಶೀಲ್ದಾರರ ಕಚೇರಿಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯ ವೇತನ ಕುರಿತಂತೆ ಸಾಮಾಜಿಕ ಭದ್ರತಾ ಯೋಜನೆಗಳಡಿ ಅನರ್ಹರಿಗೆ ಮಂಜೂರಾತಿ ಆರೋಪದಡಿ ಉಪ ತಹಶೀಲ್ದಾರ ಡಿ.ಟಿ.ವಾಲ್ಮೀಕಿ ಅವರನ್ನು ಅಮಾನತ್ತು ಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. 

ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ನಾನೇ ಖುದ್ದಾಗಿ ಕಚೇರಿಗೆ ಹೋಗಿ ಪರಿಶೀಲನೆ ನಡೆಸಲಾಗಿ ಅನರ್ಹರಿಗೆ ಪಿಂಚಣಿ ಮಂಜೂರು ಮಾಡಿರುವ ಕುರಿತು ಕಂಡು ಬಂದ ಹಿನ್ನೆಲೆಯಲ್ಲಿ ಅಮಾನತ್ತು ಕ್ರಮ ವಹಿಸಲಾಗಿದೆ.

“ಜಿಲ್ಲೆಯಲ್ಲಿ 17,997 ಅನರ್ಹರಿಗೆ ಪಿಂಚಣಿ ಮಂಜೂರಾತಿ ಆಗಿರುವುದು ತಿಳಿದು ಬಂದಿದ್ದು ಇದರ ಸತ್ಯಾಸತ್ಯತೆಗಾಗಿ ಸಂಪೂರ್ಣ ತನಿಖೆಗೆ ಸೂಚಿಸಲಾಗಿದೆ. ಅನರ್ಹರಿಗೆ ವಿತರಣೆಯಾಗುತ್ತಿರುವ ಪಿಂಚಣಿ ಹಣ ತಕ್ಷಣ ನಿಲ್ಲಿಸಬೇಕೆಂದು ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಈ ಕುರಿತು ಸಾಕಷ್ಟು ವಿಚಾರಣೆ ನಡೆಸಿ ಅನರ್ಹರಿಗೆ ಕೊಡುವಂತಹ ಸೌಲಭ್ಯ ನಿಲ್ಲಿಸುವ ಕುರಿತು ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X