ಗದಗ | ಮೌಢ್ಯತೆ ಆಚರಿಸುವ ದೇಶಗಳ ಅಭಿವೃದ್ಧಿ ಸಾಧ್ಯವಿಲ್ಲ: ಡಾ. ಜಯದೇವಿ ಗಾಯಕವಾಡ

Date:

Advertisements

ಯಾವ ದೇಶದಲ್ಲಿ ಮೌಢ್ಯ ಸಂಪ್ರದಾಯಗಳ ಆಚರಣೆ ಇರುತ್ತವೆಯೋ, ಅಂತಹ ದೇಶಗಳ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ. ಜಯದೇವಿ ಗಾಯಕವಾಡ ಹೇಳಿದರು.

ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕ ಹಾಗೂ ಗದಗ ನಗರದ ಡಾ. ಎಂ ಎಂ ಕಲಬುರ್ಗಿ ಸಂಶೋಧನ ಕೇಂದ್ರ ಸಹಯೋಗದೊಂದಿಗೆ ತೋಂಟದಾರ್ಯ ಮಠದಲ್ಲಿ ಹಮ್ಮಿಕೊಂಡಿದ್ದ ದಸಾಪ ಪಯಣ 30ನೇ ವರ್ಷದ ಪ್ರಯುಕ್ತ ಪುಸ್ತಕ ಬಿಡುಗಡೆ ಹಾಗೂ ಕಾವ್ಯಯಾನ-1 ಕಾರ್ಯಕ್ರಮದಲ್ಲಿ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

“ಮೌಢ್ಯ ಸಂಪ್ರದಾಯಗಳನ್ನು ಕಡೆಗಣಿಸಿ, ವಿಜ್ಞಾನವನ್ನು ಅನುಸರಿಸಿದರೆ ಮಾತ್ರ ದೇಶ ಮುಂದುವರೆಯುತ್ತದೆ. ಯಾವ ದೇಶಗಳಲ್ಲಿ‌ ಮೌಢ್ಯಾಚರಣೆ ಆಚರಿಸಲಾಗುತ್ತಿಯೋ ಆ ದೇಶಗಳು ಮುಂದುವರೆಯಲು ಸಾಧ್ಯವಿಲ್ಲ. ಸಮಾಜ ಎದುರಿಸುತ್ತಿರುವ ತಳಮಳಗಳ ಕುರಿತು ಸಾಹಿತ್ಯ ಹುಟ್ಟಬೇಕು. ಬೇಂದ್ರೆ, ಕುವೆಂಪು ಸೇರಿದಂತೆ ಇನ್ನೂ ಅನೇಕರು ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದ್ದರು. ಬುದ್ಧ, ಬಸವ, ಅಂಬೇಡ್ಕರ್ ಚಿಂತನೆಗಳು ಇಂದಿನ ಯುವಕರ ಮೇಲೆ ಪ್ರಭಾವಿಸಬೇಕಿದೆ. 12ನೇ ಶತಮಾನದಲ್ಲಿ ಸಾಹಿತ್ಯ ಮತ್ತು ಚಳವಳಿ ಒಂದೇಯಾಗಿ ಜಾರಿಯಲ್ಲಿದ್ದವು” ಎಂದರು.

Advertisements

ವಿಮರ್ಶಕ ಡಾ. ಎಚ್ ಬಿ ಕೋಲ್ಕಾರ ಮಾತನಾಡಿ, “ಪ್ರಗತಿಶೀಲ ಸಂದರ್ಭದಲ್ಲಿ ವಾಸ್ತವವನ್ನು ತಲೆಬರಹಗಳಲ್ಲಿ ಕಟ್ಟಿರುವುದನ್ನು ನೋಡಿದ್ದೇವೆ. ಹಾಗೆ ಕವಿಯ “ಇರುಳ ಬಾಗಿಲಿಗೆ ಕಣ್ಣದೀಪ” ಕವನ ಸಂಕಲನ ಇದೆ. ಇಲ್ಲಿ ಬದುಕಿನ ಶೈಲಿಗೆ, ತೀವ್ರತೆ ಕೊಡುವಲ್ಲಿ ಕವಿ ಅರಿವಿನಿಂದ ಪದಗಳಲ್ಲಿ ಕಟ್ಟುತ್ತಾನೆ. ಆದ್ಯಾತ್ಮಿಕ ಬದುಕನ್ನು ಲೌಕಿಕವಾಗಿ ಕವಿತೆಗಳಲ್ಲಿ ಕವಿ ಹೇಳುತ್ತಾನೆ. “ಎದೆಯಾಗಿನ ಮಾತು” ಕೃತಿಯು ಪ್ರೀತಿ ಪ್ರೇಮ, ವಿರಹಗಳೇ ಶಾಹಿರಿಗಳಾಗಿವೆ. ಓದುತ್ತಾ ಹೋದಂತೆ ಮನಸ್ಸಿಗೆ ಉಲ್ಲಾಸ ನೀಡುತ್ತವೆ” ಎಂದರು.

ಇದನ್ನು ಓದಿದ್ದೀರಾ? ಗದಗ | ಗೋವಿಂದ ಪೈ ಜಯಂತಿ ಸರ್ಕಾರದಿಂದ ಆಚರಿಸಲು ಮನೋಹರ್ ಮೆರವಾಡೆ ಒತ್ತಾಯ

ದಲಿತ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ಡಾ. ಅರ್ಜುನ ಗೋಳಸಂಗಿ ಅವರು ಅಧ್ಯಕ್ಷಿಯ ಮಾತುಗಳನ್ನಾಡಿದರು. ಡಾ. ಗವಿಸಿದ್ದಪ್ಪ ಪಾಟೀಲ, ಎಂ ಸಿ ಕಟ್ಟಿಮನಿ, ಕೃತಿಕರರಾದ ಡಾ. ಸದಾಶಿವ ದೊಡಮನಿ ಹಾಗೂ ಮರುಳುಸಿದ್ಧಪ್ಪ ದೊಡಮನಿ ಗೌರವ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X