ಗದಗ | ನ್ಯಾಯಾಲಯ ಐತಿಹಾಸಿಕ ತೀರ್ಪು ಸ್ವಾಗತ : ಹಣಮಂತ ಮಾದರ

Date:

Advertisements

“ರಾಜ್ಯದಲ್ಲಿ ಇರುವ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೆ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಕಾರ್ಮಿಕರು ವಿದ್ಯಾರ್ಥಿಗಳು ಈ ತೀರ್ಪುನ್ನು ಸ್ವಾಗತಿಸುತ್ತೇವೆ” ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರೋಣ ತಾಲೂಕು ಸಂಚಾಲಕರಾದ ಹಣಮಂತ ಮಾದರ ಹೇಳಿದರು.

ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೇಡರೇಷನ್  ವತಿಯಿಂದ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೆ ಬಿಡುಗಡೆ ಮಾಡಿ ಎಂಬ ತೀರ್ಪುನ್ನು ಸ್ವಾಗತಿಸಿ ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ವಿಜಯೋತ್ಸವ ಆಚರಿಸಿ ಮಾತನಾಡಿದರು.

“ಈ ಗೆಲುವಿಗೆ ಕಾರಣರಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಮಹಾಂತೇಶ್ ಕೆ ಅವರಿಗೆ ಮತ್ತು ರಾಜ್ಯ ಅಧ್ಯಕ್ಷರು ಕಾಮ್ರೆಡ್ ಬಾಲಕೃಷ್ಣ ಶೆಟ್ಟಿ ಅವರಿಗೆ ಹಾಗೂ ವಕೀಲರಾದ ಅಕ್ಷಿತಾ ಗೋಯಲ್ ಮತ್ತು ಆದಿತ್ಯ ಚಟರ್ಜಿ ಅವರಿಗೆ ಸಲ್ಲುತ್ತದೆ. ಕಾರ್ಮಿಕರು, ವಿದ್ಯಾರ್ಥಿಗಳು ರೋಣ ತಾಲೂಕ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸುವು ಮೂಲಕ ಕರ್ನಾಟಕ ರಾಜ್ಯ ಹೈಕೋರ್ಟ್ ಐತಿಹಾಸಿಕ ತೀರ್ಪನ್ನು ಸ್ವಾಗತ ಮಾಡುತ್ತೇವೆ” ಎಂದು ಹೇಳಿದರು.

Advertisements

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡ ಸಂಕಪ್ಪ ಕುರಹಟ್ಟಿ ಅವರು ಮಾತನಾಡಿ, 2021 ರಿಂದ 2023 ರ ವರೆಗೆ ಬಾಕಿ ಇರುವ ಕಾರ್ಮಿಕ ಮಕ್ಕಳ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಆದಷ್ಟು ಬೇಗನೆ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರ ಕಾರ್ಮಿಕರಿಗೆ ವಂಚನೆ ಮಾಡಿದೆ ಶೈಕ್ಷಣಿಕ ಸಹಾಯಧನ ನೀಡದೆ ಸತಾಯಿಸುತ್ತಿದ್ದಾರೆ. ಇದನ್ನು ವಿರೋಧಿಸಿ ನ್ಯಾಯಾಲಯದ ಮೊರೆ ಹೋಗಿ ದಾವೆಯನ್ನು ಹೂಡಿ ಇವತ್ತು ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿದೆ. ಅದಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಸ್ವಾಗತಿಸುತ್ತದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬೀದಿಬದಿ ವ್ಯಾಪಾರಸ್ಥರ ಸಭೆ; ಸ್ಥಳೀಯ ವ್ಯಾಪಾರಿಗಳ ರಕ್ಷಣೆಗೆ ಆಗ್ರಹ

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರು ಹನಮಂತ ತಾಳಿ,ಚಾಂದಸಾಬ್ ಕೌಜಗೇರಿ , ಮುಸ್ತಾಕ್ ಯಲಿಗಾರ, ಪ್ರವೀಣ್ ದಾನಿ, ಖಾಜೇಸಾಬ್ ಮುಲ್ಲಾ , ಹುಸೇನ್ ಸಾಬ್ ಮುಲ್ಲಾ, ಶೇಖಪ್ಪ ಬಡಿಗೇರ್, ಮಂಜುನಾಥ ಮಾದರ, ಷಣ್ಮುಖ ಕುರಿ, ಮಹಾಲಿಂಗಪ್ಪ ಬಡಿಗೇರ್ , ಬೆಳ್ಳಪ್ಪ ಕಿರಟಗೇರಿ , ದ್ಯಾಮಣ್ಣ ಬಡಿಗೇರ್, ಮಮ್ಮದಸಾಬ್ ಮುಲ್ಲಾ, ವಿಜಯ ಕಮ್ಮಾರ್,ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X