ಗದಗ | ಧರ್ಮಸ್ಥಳದ ಸುತ್ತ ಮುತ್ತ ಅಸಹಜ ಸಾವುಗಳ ಮರು ತನಿಖೆಗೆ  ಸಿಪಿಐ(ಎಂ) ಒತ್ತಾಯ

Date:

“2012ರಲ್ಲಿ ಇಡೀ ರಾಜ್ಯವೇ ಬೆಚ್ಚಿಬಿದ್ದ, ಧರ್ಮಸ್ಥಳದ ಸಮೀಪದ ಉಜಿರೆಯ ಸುತ್ತಮುತ್ತ ನೂರಾರು ಅಸಹಜ ಸಾವುಗಳು ಸಂಭವಿಸುತ್ತಿರುವ ಕುರಿತು ವರದಿಯಾಗಿದ್ದಾವು. ಅದರಲ್ಲಿ ಉಜಿರೆ ಸಮೀಪದ ಪಾಂಗಳದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ, ಅದನ್ನು ಮುಚ್ಚಿ ಹಾಕಲು ನಡೆಸಿದ ವ್ಯವಸ್ಥಿತ ಪ್ರಯತ್ನಗಳು ಮರೆಯಲಾರದ ಸಂಗತಿಗಳು” ಎಂದು ಸಿ.ಪಿ.ಐ(ಎಂ) ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ ಒತ್ತಾಯಿಸಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, “ಈ ಪ್ರಕರಣದಲ್ಲಿ ಅಮಾಯಕನೊಬ್ಬನನ್ನು ಆರೋಪಿಯೆಂದು ಹೆಸರಿಸಿ ಜೈಲಿಗೆ ಹಾಕಿಸಿದ್ದರು. ದುರುದ್ದೇಶಪೂರ್ವಕವಾಗಿ ಸಾಕ್ಷಿ ನಾಶ ಮಾಡಿದ್ದರ ವಿರುದ್ಧ ವ್ಯಾಪಕವಾಗಿ ಪ್ರತಿಭಟನೆಗಳು ಕೂಡ ನಡೆದಿದ್ದವು. ನಂತರ ಪ್ರಕರಣವನ್ನು ಸಿ.ಬಿ.ಐ.ಗೆ ವಹಿಸಿ, ತನಿಖೆ ನಡೆದು ಸಿ.ಬಿ.ಐ ನ್ಯಾಯಾಲಯದ ತೀರ್ಪು ಕೂಡ ಬಂದಿದೆ. ತೀರ್ಪಿನ ಅನುಸಾರವಾಗಿ ಅಮಾಯಕನೆಂದು ಇಡೀ ರಾಜ್ಯ ಗಟ್ಟಿ ಧ್ವನಿಯಲ್ಲಿ ಹೇಳಿದ ವ್ಯಕ್ತಿಯನ್ನು ನಿರಪರಾಧಿ ಎಂದು ಬಿಡುಗಡೆ ಮಾಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಅದೇ ವೇಳೆಗೆ ಪ್ರಾಥಮಿಕ ಹಂತದಲ್ಲಿ ತನಿಖಾಧಿಕಾರಿಗಳು, ಶವಪರೀಕ್ಷೆ ಮಾಡಿದ ವೈದ್ಯಾಧಿಕಾರಿಗಳು ಉದ್ದೇಶಪೂರ್ವಕವಾಗಿ ಸಾಕ್ಷಿ ನಾಶಮಾಡಿದ್ದು, ಅವರ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಸಿ.ಬಿ.ಐ.ನ್ಯಾಯಾಲಯ ಸೂಚನೆ ನೀಡಿತ್ತು. ಇಡೀ ಪ್ರಕರಣದಲ್ಲಿ ಈ ಮೊದಲೇ ಸಾಮಾಜಿಕ ಕಳಕಳಿಯ ಸಂಘಟನೆಗಳು, ವ್ಯಕ್ತಿಗಳು ಎತ್ತಿದ ಹಲವು ಪ್ರಶ್ನೆಗಳಿಗೆ ಉತ್ತರವಾಗಿದೆ. ಆದರೆ, ಸಾಕ್ಷಿ ದೂರುದಾರನ ಹೇಳಿಕೆಯ ನಂತರ ಕ್ಷಿಪ್ರಗತಿಯಲ್ಲಿ ಸರಕಾರವೇಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ನಮ್ಮ ಪ್ರಶ್ನೆಯಾಗಿದೆ” ಎಂದರು.

“ಎಲ್ಲ ಪ್ರಕರಣಗಳನ್ನು ನ್ಯಾಯಾಲಯದ ಸುಪರ್ದಿಯಲ್ಲಿ ಮರು ತನಿಖೆ ಮಾಡಬೇಕು. ತನಿಖೆ ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆದು ಶೀಘ್ರವಾಗಿ ಅಪರಾಧಿಗಳನ್ನು ಪತ್ತೆ ಮಾಡಿ ಮುಂದಿನ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...