ಗದಗ | ಅಂಬೇಡ್ಕರ್ ಆಶಯದಂತೆ ಬೌದ್ಧ ಧಮ್ಮ ಸ್ವೀಕರಿಸಿದ ಜಿಲ್ಲೆಯ ದಲಿತ ಕುಟುಂಬಗಳು

Date:

Advertisements

ಡಾ.ಬಿ.ಆರ್. ಅಂಬೇಡ್ಕರ್ ಅವರ‌ ಆಶಯದಂತೆ ಗದಗ ಜಿಲ್ಲೆಯ ಸುಮಾರು 160 ಜನ ನಾಗಪುರದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.

ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರು ತಮ್ಮ ಇಡೀ ಜೀವಿತಾವಧಿಯಲ್ಲಿ ಹಿಂದೂ ಧರ್ಮದಲ್ಲಿನ ಜಾತೀಯತೆ, ಮೇಲು ಕೀಳು, ವರ್ಣಾಶ್ರಮ ವ್ಯವಸ್ಥೆಯನ್ನು ಕಟುವಾಗಿ ಖಂಡಿಸಿ, ಕೊನೆಗೆ “ಹಿಂದೂವಾಗಿ ಹುಟ್ಟಿದ್ದೇನೆ. ಆದರೆ, ಹಿಂದೂವಾಗಿ ಸಾಯಲಾರೆ” ಎಂದು ಆಡಿದ ಮಾತಿನಂತೆ 1956 ಅಕ್ಟೋಬರ್ 14 ರ ವಿಜಯ ದಶಮಿಯದಿನ ತಮ್ಮ ಐದು ಲಕ್ಷ ಅನುಯಾಯಿಗಳೊಂದಿಗೆ ನಾಗಪುರದಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದ್ದರು.

1956 ಅಕ್ಟೋಬರ್ 14 ರ ನಂತರ ಪ್ರತಿ ವರ್ಷ ವಿಜಯ ದಶಮಿಯದಿನ ನಾಗಪುರದಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚಿನ ಸಂಖ್ಯೆಯಲ್ಲಿ ದೇಶ, ವಿದೇಶಗಳಿಂದ ಅಂಬೇಡ್ಕರ್ ಅವರ ಅನುಯಾಯಿಗಳು ಆವತ್ತಿನ ದಿನ ನಾಗಪುರದಲ್ಲಿ ಸೇರುತ್ತಾರೆ.

Advertisements

ಪ್ರತಿ ವರ್ಷವೂ ಗದಗ ಜಿಲ್ಲೆಯಿಂದ ನೂರಾರು ಜನ ನಾಗಪುರದ ಧಮ್ಮ ದೀಕ್ಷಾ ಭೂಮಿಗೆ ಭೇಟಿ ನೀಡುತ್ತಾರೆ. ಈ ಬಾರಿ 58ನೇ ವರ್ಷದ ಧಮ್ಮ ಪರಿವರ್ತನಾ ದಿನಾಚರಣೆಗೆ ಗದಗ ಜಿಲ್ಲೆಯಿಂದ ಸುಮಾರು 160 ಜನ ನಾಲ್ಕು ಬಸ್ ಗಳ ಮೂಲಕ ಭಾಗವಹಿಸಿ, ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.

IMG 20241014 WA2122

58 ನೇ ವರ್ಷದ ಧಮ್ಮ ಪರಿವರ್ತನಾ ದಿನದಂದು ಡಾ.ಬಾಬಾ ಸಾಹೇಬರ ಆಶಯದಂತೆ ಗದಗ ಜಿಲ್ಲೆಯ ದಲಿತ ಮುಖಂಡರಾದ ಶರೀಫ್ ಬಿಳೆಯಲಿ, ಡಾ.ರಾಮಚಂದ್ರ ಹಂಸನೂರ ಅವರ ಕುಟುಂಬ ಮುಂಡರಗಿ ತಾಲೂಕಿನ ಡೋಣಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲೇಶ್ ಹೊಸಮನಿ, ಬಾಲೆಹೊಸೂರಿನ ಕೇಶವ ಕಟ್ಟಿಮನಿ, ಮಂಜುನಾಥ ಛಲವಾದಿ, ಸಂಜಯ್ ಅಂಬೇಡ್ಕರ್ ಅವರು ದೇಶದ ವಿವಿಧ ಬೌದ್ಧ ಭಿಕ್ಕುಗಳ ಸಮ್ಮುಖದಲ್ಲಿ ಬೌದ್ಧ ಧಮ್ಮವನ್ನು ಸ್ವೀಕಾರ ಮಾಡಿದರು.

ಈ ಧಮ್ಮ ದೀಕ್ಷಾ ಸ್ವೀಕಾರ ಸಮಾರಂಭಕ್ಕೆ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಅವರು ಉಪಸ್ಥಿತರಿದ್ದರು. ಅವರು ಧಮ್ಮ ದೀಕ್ಷಾ ಸ್ವೀಕರಿಸಿದ ಗದಗ ಜಿಲ್ಲೆಯವರಿಗೆ ಧಮ್ಮ ದೀಕ್ಷಾ ಪ್ರಮಾಣ ಪತ್ರವನ್ನು ನೀಡಿದರು.

ಈ ಸಂದರ್ಭದಲ್ಲಿ ಗದಗ ಜಿಲ್ಲೆಯ ದಲಿತ ಮುಖಂಡರಾದ ಆನಂದ ಶಿಂಗಾಡಿ, ಮುತ್ತು ಬಿಳೆಯಲಿ, ಯಲ್ಲಪ್ಪ ರಾಮಗಿರಿ, ಮಂಜುನಾಥ ಗೊಂದಿಯವರ, ಅನಂತ ಕಟ್ಟಿಮನಿ, ರಮೇಶ್ ಕೋಳೂರು, ಬಸವರಾಜ ಛಲವಾದಿ, ಹುಚ್ಚಪ್ಪ ಛಲವಾದಿ, ಸತ್ಯಪ್ಪ ಛಲವಾದಿ ಸೇರಿದಂತೆ ಗದಗ ಜಿಲ್ಲೆಯ ಹಲವಾರು ಮಂದಿ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X