ಗದಗ | ಬಾಗಿದ ವಿದ್ಯುತ್ ಕಂಬದಿಂದ ಅಪಾಯದ ಆತಂಕ; ತೆರವುಗೊಳಿಸದ ಅಧಿಕಾರಿಗಳು

Date:

Advertisements

ರಸ್ತೆ ಮಧ್ಯದಲ್ಲಿರುವ ವಿದ್ಯುತ್‌ ಕಂಬ ಅರ್ಧಕ್ಕೆ ಮುರಿದು ಬಾಗಿದ್ದು, ಹತ್ತು ಹದಿನೈದು ದಿನಗಳಾದರೂ ಈವರೆಗೆ ಅಧಿಕಾರಿಗಳು ತೆರವುಗೊಳಿಸದೆ ಇರುವುದು ಅಪಾಯಕ್ಕೆ ಎಡೆಮಾಡಿದೆ.

ಗದಗ ಜಿಲ್ಲೆಯ ರೋಣ ಪಟ್ಟಣದ ಮಿನಿ ವಿಧಾನಸೌಧದ ಎದುರಿಗೆ ಇರುವ ಮುಖ್ಯ ರಸ್ತೆಯ ಡಿವೈಡರ್ ಮಧ್ಯೆಯಿರುವ ಬೀದಿದೀಪದ(ವಿದ್ಯುತ್ ಕಂಬ) ಕಂಬಕ್ಕೆ ಹದಿನೈದು ದಿನಗಳ ಹಿಂದೆ ಲಾರಿ ಡಿಕ್ಕಿ ಹೊಡೆದು, ರಸ್ತೆಗೆ ಬಾಗಿದೆ. ಅಪಾಯಕ್ಕೆ ಎಡೆ ಮಾಡಿಕೊತ್ತಿದ್ದರೂ ಕೂಡಾ ಇಲ್ಲಿಯ ಅಧಿಕಾರಿಗಳು ಯಾವುದೇ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಇರುವುದು ದುರಂತ.

ಈ ಮುಖ್ಯ ರಸ್ತೆಯಲ್ಲಿ ಬಸ್‌, ಲಾರಿ ಸೇರಿದಂತೆ ದ್ವಿಚಕ್ರ ವಾಹನಗಳು ಅತಿಹೆಚ್ಚು ಓಡಾಡುತ್ತವೆ. ಹುಬ್ಬಳ್ಳಿ, ನರಗುಂದ, ಗದಗ ಬಸ್‌ಗಳೂ ಕೂಡಾ ಇದೇ ರಸ್ತೆಯಲ್ಲಿ ಹೆಚ್ಚು ಸಂಚರಿಸುತ್ತವೆ. ಈ ರಸ್ತೆಯ ಪಕ್ಕದಲ್ಲಿಯೇ ಪೆಟ್ರೋಲ್‌ ಬಂಕ್‌ ಹೋಟೆಲ್‌ಗಳು, ಜೆರಾಕ್ಸ್ ಅಂಗಡಿಗಳೂ ಕೂಡ ಇವೆ. ಈ ರಸ್ತೆ ಪಕ್ಕದಲ್ಲಿಯೇ ತಹಶೀಲ್ದಾರ್ ಕಚೇರಿ ಮಿನಿ ವಿಧಾನಸೌಧ ಕೂಡ ಇದೆ. ಜನದಟ್ಟಣೆ ಇರುವ ರಸ್ತೆಯು ಆಗಿದೆ. ಸಂಚರಿಸುವ ಬಸ್‌ ಮತ್ತು ಲಾರಿಗಳು ಅಪಾಯ ಒಡ್ಡಿದ ಬೀದಿದೀಪದ ಕಂಬಕ್ಕೆ ತಾಗಿದರೆ ದೊಡ್ಡ ಅಪಘಾತ ಸಾವು ನೋವುಗಳಾಗುವ ಸಂಭವ ಹೆಚ್ಚಾಗಿದೆ.

Advertisements

ಸಮಸ್ಯೆ ಏನು?

ರೋಣ ಪಟ್ಟಣದ ಮುಲ್ಲಾನಾ ಭಾವಿ ಕ್ರಾಸ್‌ನಿಂದ ತಹಶೀಲ್ದಾರ್ ಕಚೇರಿವರೆಗೂ ಒಂದೇ ರಸ್ತೆಯಿದೆ. ತಹಶೀಲ್ದಾರ್ ಕಚೇರಿ ಹತ್ತಿರ ಬರುತ್ತಿದ್ದಂತೆಯೇ ರಸ್ತೆಯ ಮಧ್ಯದಿಂದ ಡಿವೈಡರ್ ರಸ್ತೆಗಳು ಆಗಿದ್ದು, ವೇಗವಾಗಿ ಬರುವ ಬಸ್ಸು ಮತ್ತು ಲಾರಿಗಳು, ಒಮ್ಮಿಂದೊಮ್ಮೆಲೆ ಮಗ್ಗಲು ರಸ್ತೆಗೆ ತೆಗೆದುಕೊಳ್ಳಲು ಆಗದೆ ಇರುವುದರಿಂದ ಕಂಬಕ್ಕೆ ಡಿಕ್ಕಿ ಹೊಡೆಯುವ ಸಂಭವ ಜಾಸ್ತಿ ಕಂಡುಬರುತ್ತದೆ. ರಾತ್ರಿ ವೇಳೆ ಲಾರಿ ಮತ್ತು ಬಸ್‌ ಚಾಲಾಯಿಸುವುದು ಸಾರ್ವಜನಿಕರಿಗೆ ಸವಾಲಾಗಿದೆ.‌

ವಿದ್ಯುತ್‌ ಕಂಬ 1

ಅಷ್ಟೇ ಅಲ್ಲದೇ ಈ ರಸ್ತೆ ಪಕ್ಕದಲ್ಲಿ ಹೋಟೆಲ್‌ಗಳಿಗೆ ಹೋಗುವವರು ದ್ವಿಚಕ್ರ ವಾಹನಗಳ ಬಳಸುವುದರಿಂದ ಬಸ್‌ಗಳು ಸರಾಗವಾಗಿ ಓಡಾಡಲು ಆಗುತ್ತಿಲ್ಲ. ಇದರಿಂದ ಈ ರೀತಿಯ ಅಪಾಯಗಳಾಗುವ ಸಂಭವ ಹೆಚ್ಚು.

ಮಾದಿಗ ದಂಡೋರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಬುರಡಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಈ ಬೀದಿದೀಪದ ಕಂಬಕ್ಕೆ ಬಸ್ಸೋ ಲಾರಿಯೋ ಡಿಕ್ಕಿ ಹೊಡೆದಿದ್ದು, ಸುಮಾರು ಹದಿನೈದು ದಿನಗಳಿಂದ ಈ ಕಂಬ ಬೀಳುವ ಹಂತದಲ್ಲಿದೆ. ನಿತ್ಯ ನೂರಾರು ಬಸ್‌ಗಳು, ದ್ವಿಚಕ್ರ ವಾಹನಗಳು, ಓಡಾಡುತ್ತವೆ. ಬಸ್‌ಗಳಿಗೆ ತಾಗಿ ದೊಡ್ಡ ಅನಾಹುತವಾಗುವ ಸಂಭವ ಹೆಚ್ಚು. ಹಾಗಾಗಿ ಕೂಡಲೇ ಕಂಬವನ್ನು ತೆರವುಗೊಳಿಸಿ, ಅಪಾಯ ತಪ್ಪಿಸಬೇಕು. ತಹಶೀಲ್ದಾರ್ ಇದೇ ರಸ್ತೆಯಲ್ಲಿಯೇ ನಿತ್ಯ ಓಡಾಡುತ್ತಾರೆ. ಆದರೂ ಗಮನ ಹರಿಸದೇ ಇರುವುದು ದುರಂತ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರಿ ಶಾಲೆ ನಿರ್ಮಾಣ ಜಾಗದಲ್ಲಿ ಅಕ್ರಮ ಶೆಡ್: ತೆರವುಗೊಳಿಸಲು ಜಿಲ್ಲಾಧಿಕಾರಿಗೆ ಮನವಿ

ಈ ಕುರಿತು ಮಾಹಿತಿ ಪಡೆಯಲು ಈ ದಿನ.ಕಾಮ್ ಪುರಸಭೆ ಮುಖ್ಯ ಅಧಿಕಾರಿಗೆ ಸಂಪರ್ಕಿಸಿದ್ದು, ಅವರು ಕರೆಗೆ ಲಭ್ಯವಾಗಿಲ್ಲ.

“ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಬಾಗಿದ ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಅಪಾಯ ಹಾಗೂ ಅಪಘಾತ ಆಗುವುದನ್ನು ತಪ್ಪಿಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದರು.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X