ಗದಗ | ಶೈಕ್ಷಣಿಕ, ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕದಾಸರ ಕೊಡುಗೆ ಅಪಾರ: ಸಚಿವ ಎಚ್‌ ಕೆ ಪಾಟೀಲ್

Date:

Advertisements

ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕದಾಸರ ಕೊಡುಗೆ ಅಪಾರ. ಹಾಗಾಗಿ ಇಂದು ಕನಕದಾಸರ ಜಯಂತಿಯನ್ನು ಭಕ್ತಿಪೂರ್ವಕವಾಗಿ, ಅಭಿಮಾನಪೂರ್ವಕವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ್ ಹೇಳಿದರು.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರ ಸಹಯೋಗದಲ್ಲಿ ಸೋಮವಾರ ನಗರದ ಹಾತಲಗೇರಿ ನಾಕಾ ಬಳಿಯ ಭಕ್ತ ಕನಕದಾಸ ವೃತ್ತದಲ್ಲಿ ಕನದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

“ಭಕ್ತ ಕನಕದಾಸ ಜಯಂತಿ ಆಚರಣೆಯು ಸಾಂಸ್ಕೃತಿಕ ಲೋಕಕ್ಕೆ ಚೇತನವನ್ನು ತೋರಿಸುತ್ತದೆ. ದಾಸ ಸಾಹಿತ್ಯದೊಳಗೆ ಕನಕದಾಸರು ನೀಡಿರುವ ಸಾಂಸ್ಕೃತಿಕ ಲೋಕಕ್ಕೆ ಅವರ ಕೊಡುಗೆ ದೊಡ್ಡ ಪ್ರಮಾಣದಲ್ಲಿ ಆಧ್ಯಾತ್ಮಿಕ ಬೆಳವಣಿಗೆಗೆ ಕಾರಣವಾಗಿದೆ” ಎಂದರು.

Advertisements

“ಕನಕದಾಸರು ಕವಿ, ದಾರ್ಶನಿಕ ಮತ್ತು ಸಂಗೀತಗಾರರಾಗಿ ಬೆಳೆದರು ಮತ್ತು ಕರ್ನಾಟಕದಲ್ಲಿ ಭಕ್ತಿ ಸಾಹಿತ್ಯದ ಯುಗವನ್ನು ಆರಂಭಿಸಿದರು. ಕನಕದಾಸರ ಕಾವ್ಯಗಳು ಕರ್ನಾಟಕ ಶೈಲಿಯಲ್ಲಿ ರಚನೆಯಾದ ಕಾವ್ಯಗಳಾಗಿದ್ದು, ಅವರು ತಮ್ಮ ಎಲ್ಲ ಹಾಡುಗಳಿಗೆ ‘ಕಾಗಿನೆಲೆ ಆದಿಕೇಶವ’ ಎಂಬ ಕಾವ್ಯನಾಮವನ್ನು ಬಳಸಿದ್ದಾರೆ. ನಳಚರಿತ್ರೆ, ಹರಿಭಕ್ತಿಸಾರ, ನೃಸಿಂಹಸ್ತವ, ರಾಮಧಾನ್ಯಚರಿತ್ರೆ ಮತ್ತು ಮೋಹನತರಂಗಿಣಿ ಅವರ ಕೆಲವು ಪ್ರಸಿದ್ಧ ಕೃತಿಗಳಾಗಿವೆ” ಎಂದು ಹೇಳಿದರು.

“ಶಾಲಾ-ಕಾಲೇಕು ವಿದ್ಯಾರ್ಥಿಗಳಿಗೆ ಭಕ್ತ ಕನಕದಾಸರ ದಾಸಸಾಹಿತ್ಯದ ಪುಸ್ತಕಗಳು ದೊರೆಯುವ ಹಾಗೆ ಮಾಡಿ ಕನದಾಸರ ಭಕ್ತಿ ಸಾಹಿತ್ಯವನ್ನು ಪರಿಚಯಿಸಬೇಕಿದೆ” ಎಂದು ಸಚಿವ ಎಚ್ ಕೆ ಪಾಟೀಲ ನುಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವೈದ್ಯರ ನಿರ್ಲಕ್ಷ್ಯದಿಂದ ವೃದ್ಧೆ ಮಹಿಳೆ ಸಾವು; ಆಸ್ಪತ್ರೆ ಎದುರು ಪ್ರತಿಭಟನೆ

ವಿಧಾನ ಪರಿಷತ್ ಶಾಸಕ ಎಸ್ ವಿ ಸಂಕನೂರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅವರು ಭಕ್ತ ಕನಕದಾಸ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು.

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಫಕ್ಕೀರಪ್ಪ ಹೆಬಸೂರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ ಬಿ ಅಸೂಟಿ, ತಾಲೂಕು ಗ್ಯಾರಂಟಿ ಅನಿಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಪ್ರಭು ಬುರಬುರೆ, ರವಿ ದಂಡಿನ, ಪ್ರಕಾಶ ಕರಿ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X