ಎಸ್ಎಫ್ಸಿ ವಿಶೇಷ ಅನುದಾನವನ್ನು ಪಟ್ಟಣದ 23 ವಾರ್ಡ್ಗಳಿಗೆ ಸರಿಯಾಗಿ ಹಂಚಿಕೆ ಮಾಡಬೇಕು ಎಂದು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಪುರಸಭೆ ಸದಸ್ಯ ಸಂತೋಷ್ ಹಿರೇಮನಿ ಒತ್ತಾಯಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಮುಂಡರಗಿ ಪುರಸಭೆಯ ಎಸ್ಎಫ್ಸಿ ವಿಶೇಷ ಅನುದಾನವನ್ನು 23 ವಾರ್ಡ್ಗಳಿಗೆ ಸಮರ್ಪಕವಾಗಿ ಹಂಚಿಕೆ ಮಾಡಬೇಕು. ಈಗಾಗಲೇ ಎಸ್ಎಫ್ಸಿ ವಿಶೇಷ ಅನುದಾನ ಸುಮಾರು 2 ಕೋಟಿ ರೂ. ಮಂಜುರಾಗಿದ್ದು, ಅದರಲ್ಲಿ ₹67 ಲಕ್ಷ 22ನೇ ವಾರ್ಡಿಗೆ ಅತಿ ಹೆಚ್ಚು ಹಂಚಿಕೆಯಾಗಿದ್ದು, ಜಿಲ್ಲಾಧಿಕಾರಿ ಅನುಮೋದನೆಗೆ ಕಳುಹಿಸಲಾಗಿದ್ದು, ಮುಖ್ಯ ಅಧಿಕಾರಿಗಳು ಹಾಗೂ ಸಹಾಯಕ ಅಭಿಯಂತರರು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡುಬರುತ್ತದೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ; ಹಕ್ಕುಪತ್ರದ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ
“ಪುರಸಭೆ ಸದಸ್ಯರನ್ನು ಕರೆಯದೆ ತಾವೇ ಠರಾವ್ ಮಾಡಿಕೊಂಡಿದ್ದಾರೆ. ಇದರಿಂದ ಸಂಶಯ ವ್ಯಕ್ತವಾಗುತ್ತಿದೆ. ಯಾವುದೇ ಸದಸ್ಯರಿಗೂ ಕೂಡ ಸಭೆಯ ನೋಟಿಸ್ ಬಂದಿರುವುದಿಲ್ಲ ಅಧಿಕಾರಿಗಳೇ ಕ್ರಿಯಾ ಯೋಜನೆಯನ್ನು ಮಾಡಿರುವುದು ಕಂಡುಬಂದಿದ್ದು, ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಎಸ್ಎಫ್ಸಿ ವಿಶೇಷ ಅನುದಾನವನ್ನು ಪಟ್ಟಣದ 23ನೇ ವಾರ್ಡ್ಗೆ ಸರಿಯಾಗಿ ಹಂಚಿಕೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪುರಸಭೆ ಎದುರು ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು.