ಗದಗ | ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ ಬಿಡುಗಡೆಗೆ ಆಗ್ರಹಿಸಿ ಉರುಳು ಸೇವೆ

Date:

Advertisements

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ, ನಾಡ ಸೇನಾನಿ ಟಿ ಎ ನಾರಾಯಣಗೌಡರ ಬಿಡುಗಡೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ಗದಗ ನಗರದ ಎಪಿಎಂಸಿ ಆವರಣದಿಂದ ಪಂಡಿತ್ ಪುಟ್ಟರಾಜ ಗವಾಯಿಗಳ ಮಠದವರೆಗೆ ಉರುಳು ಸೇವೆ ಮಾಡುವ ಮೂಲಕ ಆಕ್ರೋಶ ಹೊರಹಾಕಿದರು.

ಕರವೇ ಗದಗ ಜಿಲ್ಲಾಧ್ಯಕ್ಷ ಶರಣು ಎಸ್ ಗೋಡಿ ಮಾತನಾಡಿ, “ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆಗೆ ಒತ್ತಾಯಿಸಿ ನಡೆಸಿದ ಹೋರಾಟದ ಸಮಯದಲ್ಲಿ ಬಂಧಿಸಿರುವ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಹಾಗೂ ಕರವೇ ಮುಖಂಡರು, ಕಾರ್ಯಕರ್ತರನ್ನು ರಕ್ಷಣೆಯ ಬಿಡುಗಡೆ ಮಾಡಬೇಕು ಮತ್ತು ಕೇಸುಗಳನ್ನು ವಾಪಸ್ ಪಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ನಾಮಫಲಕದಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆಗಾಗಿ ನಡೆಯುತ್ತಿರುವ ಅಭಿಯಾನವನ್ನು ರಾಜ್ಯಾದ್ಯಂತ ಹಾಗೂ ಜಿಲ್ಲೆಯಾದ್ಯಂತ ಮುಂದುವರಿಸಲಾಗುವುದು. ಕನ್ನಡ ಕಲಿಗಳು ಕನ್ನಡಕ್ಕಾಗಿ ಹೋರಾಟ ನಡೆಸಿ ಸೆರೆವಾಸದಲ್ಲಿ ಇರುವ ಈ ಸಮಯದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುವುದಕ್ಕಿಂತ ಕರಾಳ ದಿನವಾಗಿ ಆಚರಿಸುವುದೇ ಸೂಕ್ತವಾಗಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ನಮ್ಮೂರಿನ ರಾಮ ನಮಗೆ ಆಶೀರ್ವಾದ ಮಾಡೋದಿಲ್ವ?: ಸಚಿವ ರಾಜಣ್ಣ

ಗದಗ ಜಿಲ್ಲಾ ಯುವ ಘಟಕದ ಅಧ್ಯಕ್ಷ ನಿಂಗನಗೌಡ ಮಾಲಿಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತ ಪೂಜಾರ, ಮಹಿಳಾ ಘಟಕದ ಅಧ್ಯಕ್ಷೆ ಆಶಾ ಜೂಲಗುಡ್ಡ, ಮಹಾದೇವಿ ದೊಡ್ಡಗೌಡ್ರ, ರತ್ನಮ್ಮ ಯಲಬುರ್ಗಿ, ಲಕ್ಷ್ಮೇಶ್ವರ ತಾಲೂಕು ಅಧ್ಯಕ್ಷ ಲೋಕೇಶ ಸುತಾರ, ಮುಂಡರಗಿ ತಾಲೂಕು ಅಧ್ಯಕ್ಷ ರಾಮನಗೌಡ ಹಳೆಮನಿ, ಪ್ರಕಾಶ ಸಂದಿಗೋಡ, ಈರಣ್ಣ ಹುರಕಡ್ಲಿ, ಅಲ್ಲಾಬಕ್ಷಿ ನದಾಫ್, ಆನಂದ ಹೊಸಮನಿ ಯಲ್ಲಪ್ಪ ಬೋವಿ, ಮಾರುತಿ ಈಳಗೇರ ಆಷಪಾಕ್ ಬಾಗೋಡಿ, ಪ್ರವೀಣ್ ಗಾಣಿಗೇರ ಮೈನು ಮನಿಯಾರ, ಅಪ್ಪು ಉಮಚಗಿ ಗಣೇಶ ಕಳಸೂರ, ವೀರೇಶ ಮಡಿವಾಳರ, ನಾಗರಾಜ ಬಂಡಿವಡ್ಡರ, ಮಂಜುನಾಥ ಹುಲ್ಲೂರು, ರಾಹುಲ್ ಹೂಗಾರ, ಚಂದ್ರು ಮಣ್ಣೂರ, ಮಲ್ಲಪ್ಪ ಗೊಜನೂರು, ರವಿ ಕೋರಿ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X