ಗದಗ | ಬಿಜೆಪಿ ಅಭ್ಯರ್ಥಿಯ ನಗರಸಭೆ ಸದಸ್ಯತ್ವ ರದ್ದು ಪಡಿಸುವಂತೆ ಡಿಎಸ್‌ಎಸ್‌ ಮನವಿ

Date:

Advertisements

ಗದಗ-ಬೆಟಗೇರಿ ನಗರಸಭೆಯ ವಾರ್ಡ್‌ ಸಂಖ್ಯೆ 28ರ ಬಿಜೆಪಿ ಅಭ್ಯರ್ಥಿ ಶಿದ್ದಿಂಗಪ್ಪ (ಅನಿಲ) ಮಲ್ಲಪ್ಪ ಅಬ್ಬಿಗೇರಿಯವರ ಸದಸ್ಯತ್ವ ರದ್ದುಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ಒತ್ತಾಯಿಸಿದೆ. ಗದಗ ಜಿಲ್ಲಾಧಿಕಾರಿ ವೈಶಾಲಿ ಅವರಿಗೆ ಮನವಿ ಸಲ್ಲಿಸಿದೆ.

ಮನವಿ ಸಲ್ಲಿಸಿ ಮಾತನಾಡಿದ ದಸಂಸ ಜಿಲ್ಲಾದ್ಯಕ್ಷ ಬಾಲರಾಜ್ ಅರಬರ ಮಾತನಾಡಿ, “ಗದಗ-ಬೆಟಗೇರಿ ನಗರಸಭೆಯ ವಾರ್ಡ್‌ ಸಂಖ್ಯೆ 280ರ ಬಿಜೆಪಿ ಅಭ್ಯರ್ಥಿ ತಿದ್ದಿಂಗಪ್ಪ (ಅನಿಲ) ಮಲ್ಲಪ್ಪ ಅಬ್ಬಿಗೇರಿಯವರು ಕಳೆದ 2021ರ ನಗರಸಭೆಯ ಚುನಾವಣೆಯಲ್ಲಿ ಜಿಲ್ಲಾ ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಮೋಸದಿಂದ ಜಯಗಳಿಸಿದ್ದಾರೆ. ಈ ಅಭ್ಯರ್ಥಿಯ ಜಾತಿ ಒಂದು ಪತ್ರದಲ್ಲಿ ಹಿಂದೂ ಲಿಂಗವಂಶ, ಒಂದರಲ್ಲಿ ಹಿಂದೂ ಅಂತಾ ಇನ್ನೊಂದರಲ್ಲಿ ಹಿಂದೂ ಗಾಣಿಗ ಎಂದು ಸಲ್ಲಿಸಿರುವುದು ಕಂಡುಬಂದಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ವಸತಿನಿಲಯಕ್ಕೆ ಮೂಲಸೌಕರ್ಯ ಒದಗಿಸುವಂತೆ ಎಐಡಿಎಸ್‌ಒ ಆಗ್ರಹ

Advertisements

“ಈಗಾಗಲೇ ಈ ಕುರಿತು ಅವರ ಮೇಲೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಇಂತಹ ಸಮಸ್ಯೆ ಇದ್ದರೂ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿ ಮೋಸಗೊಳಿಸಿದ್ದಾರೆ. ಅಲ್ಲದೇ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಿ, ಚುನಾವಣೆಯಲ್ಲಿ ಮೋಸದಿಂದ ಗೆದ್ದಿರುವ ಇವರ ಸದಸ್ಯತ್ವವನ್ನು ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮುಖಂಡರು ನಾಗರಾಜ್ ಗೋಕಾವಿ, ಕೆಂಚಪ್ಪ ಮ್ಯಾಗೇರಿ, ಮಾರುತಿ ಅಂಗಡಿ, ಬಸವರಾಜ ಈರಣ್ಣನವರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X