ಗದಗ | ಅರ್ಹ ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳು ದೊರೆಯಬೇಕು: ಬಾಲು ರಾಠೋಡ

Date:

Advertisements

“ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ಸಾಮಾಜಿಕ ಭದ್ರತೆ ಅಡಿಯಲ್ಲಿ ಮಂಡಳಿ ರಚನೆ ಮಾಡಬೇಕು. ನಿಜವಾದ  ಅರ್ಹ ಕಟ್ಟಡ  ಕಾರ್ಮಿಕರಿಗೆ ಸೌಲಭ್ಯಗಳು ದೊರಯಬೇಕು” ಎಂದು ಸಮಾವೇಶ ಉದ್ಘಾಟಿಸಿದ ಕೃಷಿ ಕೂಲಿಕಾರರ ಸಂಘದ ತಾಲೂಕಾಧ್ಯಕ್ಷ ಬಾಲು ರಾಠೋಡ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಶಾದಿ ಮಹಲ್ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿ.ಐ.ಟಿ.ಯು.) ತಾಲ್ಲೂಕು ಸಮಿತಿ ನೇತೃತ್ವದಲ್ಲಿ ತಾಲ್ಲೂಕು ಕಟ್ಟಡ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದರು.

“ಅನಕ್ಷರಸ್ಥ ಕಾರ್ಮಿಕರು ಅರ್ಜಿ ಸಲ್ಲಿಸುವಾಗ ಸಣ್ಣಪುಟ್ಟ ದೋಷಗಳ ಆಗಬಹುದು. ಆ ದೋಷಗಳನ್ನು ಸರಿಪಡಿಸುವ ಅವಕಾಶ ನೀಡದೆ ಅರ್ಜಿಗಳನ್ನು ವಜಾ ಮಾಡಲಾಗುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು. ನಿಜವಾದ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಸೌಲಭ್ಯಗಳನ್ನು ತಲುಪಿಸಬೇಕು” ಎಂದು ಒತ್ತಾಯಿಸಿದರು.

Advertisements

ಪ್ರಧಾನ ಕಾರ್ಯದರ್ಶಿ ಪೀರು ರಾಠೋಡ ಮಾತನಾಡಿ, “ಇಂದು ರೈತರ ಭೂಮಿ, ವಸತಿ, ಬೆಂಬಲ ಬೆಲೆಗಾಗಿ ಮತ್ತು ಕಾರ್ಮಿಕರ ಕೆಲಸದ ಭದ್ರತೆಯನ್ನು ಕಾಪಾಡಲು ಬಲಿಷ್ಠ ಚಳುವಳಿ ಕಟ್ಟಬೇಕಿದೆ. ಕಾರ್ಮಿಕರು ಸಂಘಟನೆ ಜೊತೆಗೂಡಿ ತಿಳುವಳಿಕೆ ಪಡೆದು ಹೆಚ್ಚಿನ ಸೌಲಭ್ಯಗಳನ್ನು ಪಡೆಯಬೇಕು. ರೈತ-ಕಾರ್ಮಿಕರ ಸಮಸ್ಯೆಗಳನ್ನು ಸರ್ಕಾರ ಆದ್ಯತೆಯಲ್ಲಿ ಪರಿಹರಿಸಬೇಕು. ಇದರಿಂದ ದೇಶ ಅಬಿವೃದ್ಧಿಯಾಗುತ್ತದೆ” ಎಂದರು.

ಸಿ.ಐ.ಟಿ.ಯು ತಾಲ್ಲೂಕು ಸಂಚಾಲಕ ಮೈಬು ಹವಾಲ್ದಾರ್ ಮಾತನಾಡಿ, “ಜಾತಿ, ಧರ್ಮ ಭಾವನಾತ್ಮಕ ವಿಷಯಗಳಿಗಿಂತ ಜನರ ಸಮಸ್ಯೆಗಗಳಿಗೆ ಪರಿಹಾರ ಪಡೆದುಕೊಳ್ಳಲು ಪ್ರಜಾಪ್ರಭುತ್ವದಲ್ಲಿ ಕಾನೂನಾತ್ಮಕ ಹೋರಾಟ ನಡೆಸಬೇಕು” ಎಂದರು.

ಸಮಾವೇಶದಲ್ಲಿ 21 ಜನರ ನೂತನ ತಾಲೂಕು ಸಮಿತಿ ರಚನೆಗೊಂಡಿತು. ಅಧ್ಯಕ್ಷರಾಗಿ  ಅಂದಪ್ಪ ಕುರಿ, ಕಾರ್ಯದರ್ಶಿಯಾಗಿ ಪೀರು ರಾಠೋಡ, ಖಜಾಂಚಿಯಾಗಿ ಮೆಹಬೂಬ್ ಹವಾಲ್ದಾರ್ ಮರು ಆಯ್ಕೆಗೊಂಡರು. ಇನ್ನುಳಿದಂತೆ 18 ಜನ ಸದಸ್ಯರು ತಾಲೂಕು ಸಮಿತಿಗೆ ಸರ್ವಾನುಮತದಿಂದ ಆಯ್ಕೆಗೊಂಡರು.

ಈ ಸುದ್ದಿ ಓದಿದ್ದೀರಾ? ಗದಗ | ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಶ್ರೀರಾಮ ಸೇನೆ

ಸಮಾವೇಶದಲ್ಲಿ ಕಟ್ಟಡ ಕಾರ್ಮಿಕರ ತಾಲೂಕಿನ ಅಧ್ಯಕ್ಷ ಅಂದಪ್ಪ ಕುರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮುಖಂಡರು ಹನುಮಂತಪ್ಪ ಮಾದರ, ಮುಖಂಡರು ಅಂದಪ್ಪ ರಾಠೋಡ, ರೇವಣಪ್ಪ ರಾಠೋಡ, ಕನಕರಾಯ ಮಾದರ, ಶಂಕ್ರಪ್ಪ ಹೊಸಮನಿ, ಹನುಮಂತಪ್ಪ ಮಾದರ, ರುದ್ರಪ್ಪ ರಾಠೋಡ, ಶರಣಪ್ಪ ಬಂಡಿವಡ್ಡರ, ಈರಪ್ಪ ಬಂಡಿವಡ್ಡರ, ಸಂತೋಷ ಕುಮಾರ್,  ಎಸ್ ಎಫ್ ಐ ತಾಲೂಕು ಅಧ್ಯಕ್ಷ ಅನಿಲ ರಾಠೋಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X