ಗದಗ | ಕೊಳವೇ ಬಾವಿಯಲ್ಲಿ ನೀರಿಲ್ಲದೆ ಒಣಗುತ್ತಿದೆ ಶೇಂಗಾ

Date:

Advertisements

ಕೊಳವೆ ಬಾವಿಗಳನ್ನು ನಂಬಿಕೊಂಡು ಶೇಂಗಾ ಬಿತ್ತಿದ್ದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರೈತರು ಅಂತರ್ಜಲ ಕುಸಿತದಿಂದ ಬೆಳೆಗೆ ನೀರು ಸಾಲದೆ ಹೊಲಗಳನ್ನು ಉಳುಮೆ ಮಾಡಿ, ನೆಲಸಮ ಮಾಡುತ್ತಿದ್ದಾರೆ.

ಕೊಳವೆ ಬಾವಿ ಸೌಲಭ್ಯ ಇರುವ ರೈತರು ನೂರಾರು ಹೆಕ್ಟೇರ್‌ನಲ್ಲಿ ಬೇಸಿಗೆ ಶೇಂಗಾ ಬಿತ್ತಿದ್ದರು. ಲಕ್ಷ್ಮೆಶ್ವರದ ರೈತ ಸಂಪರ್ಕ ಕೇಂದ್ರದಿಂದ ಈ ವರ್ಷ 550 ಕ್ವಿಂಟಲ್ ಶೇಂಗಾ ಬೀಜ ಮಾರಾಟ ಮಾಡಲಾಗಿತ್ತು. ಅದರಂತೆ ರೈತರು ಕಷ್ಟಪಟ್ಟು ಶೇಂಗಾ ಬಿತ್ತನೆ ಕೂಡ ಮಾಡಿದ್ದರು. ಆದರೆ, ಈಗ ಕೊಳವೆಬಾವಿಗಳು ಬತ್ತುವ ಹಂತಕ್ಕೆ ಬಂದಿದ್ದು ಶೇಂಗಾ ಬೆಳೆಗೆ ನೀರು ಸಾಲದಾಗಿದೆ.

ಹೀಗಾಗಿ ಬಿತ್ತಿದ್ದ ಬೆಳೆಯನ್ನು ರೈತರು ಉಳುಮೆ ಮಾಡಿ, ನೆಲಸಮ ಗೊಳಿಸಿದ್ದಾರೆ. ತಾಲೂಕಿನಾದ್ಯಂತ ಒಟ್ಟು 4,592 ಕೊಳವೆ ಬಾವಿಗಳು ಇವೆ. ಲಕ್ಷ್ಮೇಶ್ವರ ಸಮೀಪದ ಉಂಡೇನಹಳ್ಳಿ ಗ್ರಾಮದಲ್ಲಿ ರೈತರು ಬರೋಬ್ಬರಿ 450ಕ್ಕೂ ಕೊಳವೆ ಬಾವಿಗಳನ್ನು ಕೊರೆಸಿದ್ದಾರೆ. ಈ ಬಾರಿಯ ಮುಂಗಾರು ಮತ್ತು ಹಿಂಗಾರು ಮಳೆಗಳು ಸರಿಯಾಗಿ ಆಗದ ಕಾರಣ ಅಂತರ್ಜಲಮಟ್ಟ ದಿನದಿಂದ ದಿನಕ್ಕೆ ಪಾತಾಳಕ್ಕೆ ಕುಸಿಯುತ್ತಿದೆ.

Advertisements

ಕೊಳವೆ ಬಾವಿಗಳನ್ನೇ ನೆಚ್ಚಿದ್ದ ರೈತರ ಭಲವೇ ಕುಸಿದಂತಾಗಿದೆ. ಶೇಂಗಾ ಬಿತ್ತನೆಗೆ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಿದ್ದಾರೆ. ಈಗ ನೀರಿಲ್ಲದೆ ರೈತರಲ್ಲಿ ಆತಂಕ ಮನೆಮಾಡಿದೆ. ಬೋರ್‌ವೆಲ್‌ಗಳನ್ನು ನಂಬಿ ಸಾಲಸೋಲ ಮಾಡಿ ಬೀಜ ತಂದು ಶೇಂಗಾ ಬಿತ್ತಿದ್ದೇವು ಈಗ ಬೆಳೆಕೈಗೆ ಬರದೆ ಸಂಕಷ್ಟಕ್ಕೆ ಸಿಲುಕಿದ್ದೇವೆ ಎನ್ನುತ್ತಿದ್ದಾರೆ ತಾಲೂಕಿನ ರೈತರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X