ಗದಗ | ನಿರಂತರ ಮಳೆಗೆ ಜಮೀನಿನಲ್ಲೇ ಕೊಳೆತ ಈರುಳ್ಳಿ ಬೆಳೆ: ರೈತರು ಕಂಗಾಲು

Date:

Advertisements

ನಿರಂತರ ಮಳೆ ಸುರಿದ ಪರಿಣಾಮವಾಗಿ ಕೊಯ್ಲಿಗೆ ಬಂದಿದ್ದ ಈರುಳ್ಳಿ ಜಮೀನಿನಲ್ಲೇ ಕೊಳೆತು ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದ್ದು, ಗದಗ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ರೈತ ಬಸರವಡ್ಡಿ ದೇವಪ್ಪ ಬಂಡಿಹಾಳ ಅವರ ನಾಲ್ಕು ಎಕರೆ ಜಮೀನಿನಲ್ಲಿ ಈರುಳ್ಳಿ ಬಿತ್ತನೆ ಮಾಡಿದ್ದರು. ಉತ್ತಮ ಫಸಲು ಬಂದಿತ್ತು. ಕೊಯ್ಲು ಮಾಡಬೇಕು ಎನ್ನುವಷ್ಟರಲ್ಲೇ ನಿರಂತರವಾಗಿ ಮಳೆ ಸುರಿದ ಪರಿಣಾಮ ಜಮೀನಿನಲ್ಲೇ ಕೊಳೆತಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ ಎಂದು ನೋವು ತೋಡಿಕೊಂಡಿದ್ದಾರೆ.

“ರಂಟೆ–ಕುಂಟೆ, ಬೀಜ, ಗೊಬ್ಬರ, ಕಳೆ, ನೀರು ಹಾಯಿಸುವುದು ಹಾಗೂ ಇತರ ಕೃಷಿ ಚಟುವಟಿಕೆ ಸೇರಿ ಪ್ರತಿ ಎಕರೆಗೆ ₹40 ಸಾವಿರ ಖರ್ಚು ಬರುತ್ತದೆ. ನಾಲ್ಕು ಎಕರೆಗೆ ₹400 ಪ್ಯಾಕೆಟ್ ಈರುಳ್ಳಿ ಆಗುತ್ತಿತ್ತು. ಬೆಳೆಯು ಉತ್ತಮವಾಗಿತ್ತು. ಇಳುವರಿ ಚೆನ್ನಾಗಿ ಬರುತ್ತಿತ್ತು. ಈಗಿನ ಮಾರುಕಟ್ಟೆ ದರ ಕನಿಷ್ಠ ಕ್ವಿಂಟಲ್‌ಗೆ ₹ 3 ಸಾವಿರದಂತೆ ಮಾರಾಟವಾಗಿದ್ದರೂ ₹5ರಿಂದ ₹6 ಲಕ್ಷ ಆದಾಯ ಬರುತ್ತಿತ್ತು” ಎಂದು ರೈತ ಬಸವರಡ್ಡಿ ಬಂಡಿಹಾಳ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

Advertisements
ಈರುಳ್ಳಿ 3

ಮಳೆಯ ಪರಿಣಾಮವಾಗಿ ಗ್ರಾಮದ ಬಹುತೇಕ ರೈತರ ಈರುಳ್ಳಿ ಬೆಳೆಗೆ ಹಾನಿಯಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಅಧಿಕಾರಿಗಳು ಬೆಳೆ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸಂಘದ ಮುಖಂಡರು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಅರಕಲಗೂಡು | ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಬಂಧಿಸಲು ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

ಈ ಬಗ್ಗೆ ಮಾಹಿತಿ ನೀಡಿರುವ ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿ ಮಹ್ಮದ ರಫಿ ಎಂ. ತಾಂಬೋಟಿ, “ನಿರಂತರ ಮಳೆಯ ಪರಿಣಾಮವಾಗಿ ಅತಿಯಾದ ತಂಪಿನಿಂದ ಬೆಳೆಹಾನಿಯಾಗಿದೆ. ತೋಟಗಾರಿಕೆ ಇಲಾಖೆಯಿಂದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಸಮೀಕ್ಷೆ ಮಾಡಲಾಗುತ್ತಿದೆ. ಸರ್ಕಾರದ ನಿಯಮದಂತೆ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X