ಗದಗ | ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Date:

ಶಿರಹಟ್ಟಿ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದು, ಕೆಲವರು ಪಕ್ಷ ದ್ರೋಹಿ ಕೆಲಸ ಮಾಡಿದ್ದಾರೆ. ಅಂಥವರನ್ನು ನಮ್ಮ ಪಕ್ಷದಿಂದ ಹೊರಗೆ ಇಡುತ್ತೇವೆ ಎಂದು ಕಾರ್ಯಕರ್ತ ಫಕೀರೇಶ ಮ್ಯಾಟನ್ನವರ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹೊಳಲಮ್ಮ ಗುಡ್ಡದಲ್ಲಿ ಮಾಜಿ ಶಾಸಕ ಜಿ.ಎಸ್ ಗಡ್ಡದೇವರಮಠ ಅವರ ಅಧ್ಯಕ್ಷತೆಯಲ್ಲಿ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಜನತೆಗೆ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ‘ಅಭಿನಂದನಾ ಕಾರ್ಯಕ್ರಮ’ದಲ್ಲಿ ಮಾತನಾಡಿದರು.

“ಈ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 35 ಸಾವಿರಕ್ಕೂ ಹೆಚ್ಚು ಮತ ನೀಡಿದ ಮತದಾರರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸ ಹೀಗೆ ಇರಲಿ” ಎಂದು ಮತದಾರರಲ್ಲಿ‌ ಮನವಿ ಮಾಡಿಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ಸಿನ ಕುತಂತ್ರ ರಾಜಕಾರಣದಿಂದ ನಾವು ಸೋತಿದ್ದೇವೆ: ಎಚ್‌ ಡಿ ಕುಮಾರಸ್ವಾಮಿ

ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಸುಜಾತಾ ದೊಡ್ಡಮನಿ ಮಾತನಾಡಿ, “ಚುಣಾವಣೆಯಲ್ಲಿ‌ ಕ್ಷೇತ್ರದ ಜನತೆ ನನಗೆ ಬೆಂಬಲವಾಗಿ‌ ನಿಂತಿದ್ದೀರಿ. ನಿಮ್ಮ ಈ ಬೆಂಬಲವನ್ನು ನಾನೆಂದೂ ಮರೆಯುವುದಿಲ್ಲ. ಕ್ಷೇತ್ರದಲ್ಲಿ ಸೋತಿರಬಹುದು. ಆದರೆ, ರಾಜ್ಯದಲ್ಲಿ ನಮ್ಮದೇ ಆಡಳಿತ ನಡೆಸಲು ರಾಜ್ಯದ ಜನತೆ ಆಶಿರ್ವಾದ ಮಾಡಿದ್ದಾರೆ. ಆ ಮೂಲಕ ನಿಮ್ಮ ಸೇವೆ ಮಾಡುವೆ” ಎಂದು ತಿಳಿಸಿದರು.

ಈ  ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹುಮಾಯಾನ್ ಮಾಗಡಿ, ಡಿ.ಕೆ ಹೊನ್ನಪ್ಪ, ರಾಮಣ್ಣ ಲಮಾಣಿ ಸೇರಿದಂತೆ ಬಹುತೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ವರದಿ : ಮೀಡಿಯಾ ವಾಲಂಟಿಯರ್ ಮಲ್ಲೇಶ ಮಣ್ಣಮ್ಮನವರ ಮಾಹಿತಿ ಆಧರಿಸಿದ ವರದಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...