ಗದಗ | ಗಾಂಧೀಜಿ ಜಗತ್ತು ಕಂಡ ಅಪರೂಪದ ಶ್ರೇಷ್ಠ ವ್ಯಕ್ತಿ: ಎಂಎಲ್‌ಸಿ ಎಸ್‌.ವಿ ಸಂಕನೂರ

Date:

Advertisements

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಜಗತ್ತು ಕಂಡ ಅಪರೂಪದ ಶ್ರೇಷ್ಠ ವ್ಯಕ್ತಿ. ಸತ್ಯ, ಪ್ರೇಮ, ಅಹಿಂಸೆ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ತಿಳಿಸಿದರು.

ಗದಗದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿಯವರ 154ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಸತ್ಯಾಗ್ರಹ ಹಾಗೂ ಅಸಹಕಾರ ಚಳುವಳಿಗಳು ಗಾಂಧಿ ಅವರ ಹೋರಾಟದ ಅಸ್ತ್ರಗಳಾಗಿದ್ದವು. ಸುಧೀರ್ಘ ಹೋರಾಟದ ನಂತರ ನಮ್ಮ ದೇಶಕ್ಕೆ ದೇಶಕ್ಕೆ ಸ್ವಾತಂತ್ರ್ಯ ಲಭಿಸಿತು. ದೇಶದ ಜನರ ಕಲ್ಯಾಣಕ್ಕಾಗಿ ಗಾಂಧಿ ಅವರು ಹಲವಾರು ಹೋರಾಟಗಳನ್ನು ಮಾಡಿದ್ದಾರೆ. ಜಾತೀಯತೆ, ಅಸ್ಪೃಶ್ಯತೆ, ಭ್ರಷ್ಟಾಚಾರ ನಿರ್ಮೂಲನೆ, ಗೋರಕ್ಷಣೆ ಮಾಡಲು ಹಲವಾರು ಹೋರಾಟಗಳನ್ನು ದೇಶದ ಒಳಿತಿಗಾಗಿ ಮಾಡಿದ್ದಾರೆ” ಎಂದು ಅವರು ತಿಳಿಸಿದರು.

“ಸ್ವಾತಂತ್ರ್ಯ ಸಿಕ್ಕ ನಂತರ ಭಾರತವನ್ನು ರಾಮರಾಜ್ಯವನ್ನಾಗಿ ಮಾಡುವ ಕನಸನ್ನು ಗಾಂಧೀಜಿ ಹೊಂದಿದ್ದರು. ಇಂದಿನ ನಾಯಕರು, ಅಧಿಕಾರಿಗಳು ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ. ಸಂಪೂರ್ಣವಾಗಿ ರಾಮರಾಜ್ಯ ಮಾಡಲು ಆಗಿದೆಯೇ ಅಥವಾ ಇಲ್ಲವೋ ಎನ್ನುವ ಬಗ್ಗೆ ಗಂಭೀರ ಚಿಂತನೆ ಮಾಡಬೇಕಾಗಿದೆ” ಎಂದರು.

Advertisements

ಹುಲಕೋಟಿ ಸಹಕಾರಿ ರೇಡಿಯೋ ನಿರ್ದೇಶಕ ಜೆ.ಕೆ.ಜಮಾದಾರ ಮಾತನಾಡಿ, “ಮಹಾತ್ಮಾ ಗಾಂಧೀಜಿಯವರು ಶತಮಾನದ ಶ್ರೇಷ್ಠೋತ್ತಮ ಮಾನವಾರಾಗಿದ್ದಾರೆ. ಗಾಂಧೀಜಿಯವರೆಂದರೆ ಅಂತಾರಾಷ್ಟ್ರೀಯ ಭಾವೈಕ್ಯತೆಯ ಸಂಕೇತ. ಗಾಂಧೀಜಿಯವರನ್ನು ಯುಗ ದೇವ ಎಂದು ಕೆಲವು ತಜ್ಞರು ಕರೆದಿದ್ದಾರೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಉಷಾ ದಾಸರ, ಉಪಾಧ್ಯಕ್ಷೆ ಶ್ರೀಮತಿ ಸುನಂದಾ ಬಾಕಳೆ, ಜಿಲ್ಲಾ  ಪೊಲೀಸ  ವರಿಷ್ಟಾದಿಕಾರಿ ಬಿ.ಎಸ್.ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ  ರವಿ ಗುಂಜೀಕರ್ , ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ , ವಾರ್ತಾಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಬ ಮಡ್ಲೂರ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾಂತೇಶ ಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೆಶಕ ವೀರಯ್ಯ ಸ್ವಾಮಿ ಬಿ, ಸುಮನ್ ಕುಲಕರ್ಣಿ, ಮುಸ್ಕಾನ್ ಕುರಾನ್, ವೆಂಕಟೇಶ ಅಲ್ಕೋಡ, ಉಷಾ ಕಾರಂತ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X