ಗದಗ | ಇತಿಹಾಸ ಸೃಷ್ಟಿಸಿದ ಬಾಲಕಿಯರ ಖೋಖೊ ತಂಡ

Date:

Advertisements

ಖೋಖೋ ಆಟದಲ್ಲಿ ಪಾಲ್ಗೊಂಡಿದ್ದ ಬಲಿಷ್ಠ ತಂಡಗಳನ್ನು ಹಿಂದಿಕ್ಕಿ ಚಾಂಪಿಯನ್ ಪ್ರಶಸ್ತಿ ಬಾಚುಕೊಳ್ಳುವಲ್ಲಿ ಗದಗ ಬಾಲಕಿಯರ ಖೋಖೋ ತಂಡ ಯಶಸ್ವಿಯಾಗಿದೆ.

ಬೆಂಗಳೂರು ನಗರದಲ್ಲಿ ಕರ್ನಾಟಕ ಒಲಿಪಿಂಕ್ ಸಂಸ್ಥೆ ಸಹಯೋಗಲ್ಲಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸಿಕೊಡುತ್ತಿರುವ ಕರ್ನಾಟಕ ಮಿನಿ ಒಲಿಪಿಂಕ್ ಕ್ರೀಡಾಕೂಟ 2024 ಅದ್ಧೂರಿಯಾಗಿ ಆಯೋಜನೆಗೊಂಡಿತ್ತು.

ಗದಗ ತಂಡ ಈ ಬಾರಿ ತನ್ನ ಸತತ ಪರಿಶ್ರಮ ಮತ್ತು ಮಾರ್ಗದರ್ಶನದ ಮೂಲಕ ಅಖಾಡಕ್ಕೆ ಇಳಿದು. ಬಲಿಷ್ಠ ತಂಡಗಳು ಮತ್ತು ಮಾಜಿ ಚಾಂಪಿಯನ್‌ಗಳಾದ ಹಾವೇರಿ, ಬೆಳಗಾವಿ, ಧಾರವಾಡ, ಮೈಸೂರು, ಕೋಲಾರ ತಂಡಗಳನ್ನು ಸೋಲಿಸಿ ಫೈನಲ್ ನಲ್ಲಿಯೂ ಅಬ್ಬರದ ಪ್ರದರ್ಶನಗೈದು ಜಯಶಾಲಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನ.20ರಂದು ಲಿಂಗತ್ವ ಅಲ್ಪಸಂಖ್ಯಾತರಿಂದ ಸ್ವಾಭಿಮಾನದ ನಡಿಗೆ

ಆ ರೋಚಕ ಕ್ಷಣಗಳನ್ನು ಕಂಡು ನೆರೆದವರ ನಾಲಿಗೆಯಲ್ಲಿ ಗದಗ ಬಾಲಕಿಯರದ್ದೇ ವರ್ಣನೆ ಆವರಿಸಿಕೊಂಡಿತ್ತು. ಗೆದ್ದು ಬೀಗಿದ ಗದಗ ತಂಡದಿಂದ ಮೂರು ಕ್ರೀಡಾಳುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗದಗ ಜಿಲ್ಲಾ ಅಮೆಚೂರ್ ಅಧ್ಯಕ್ಷ ಅಂದಪ್ಪ  ಉಳ್ಳಾಗಡ್ಡಿ ಹಾಗೂ ತರಬೇತುದಾರ ರವಿ ಅಸೂಟಿ, ಮ್ಯಾನೇಜರ್ ಬಿ ಎಸ್ ಜಗ್ಗಾಪುರ ತಂಡದ ಕ್ಯಾಪ್ಟನ್ಸಿ ವಹಿಸಿದ್ದ ಕುಮಾರಿ ಜ್ಯೋತಿ ಸೂಲೇಯವರಿಗೆ ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಸಂಸ್ಥೆ ಹಾಗೂ ಗದಗ ಜಿಲ್ಲಾ ಖೋಖೋ ಕ್ರೀಡಾಭಿಮಾನಿಗಳು ತುಂಬು ಹೃದಯದಿಂದ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X