“ಸಂವಿಧಾನಕ್ಕೆ ದಕ್ಕೆ ತರುತ್ತಿರುವ ಮೂಲಭೂತವಾದಿಗಳಿಂದ ಸಂವಿಧಾನ ರಕ್ಷಣೆ ಮಾಡಬೇಕಿದೆ” ಎಂದು ಅಂಜುಮನ್ ಇಸ್ಲಾಂ ಕಮೀಟಿ ಅಧ್ಯಕ್ಷ ಹಸನಸಾಬ ತಟಗಾರ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಉರ್ದು ಕಾನ್ವೆಂಟ್ ಸ್ಕೂಲ್ ನಲ್ಲಿ 76 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.
“ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರಪಂಚದ ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಭಾರತಕ್ಕೆ ಅದ್ಭುತವಾದ ಸಂವಿಧಾನ ರಚನೆ ಮಾಡಿಕೊಟ್ಟಿದ್ದಾರೆ. ಪ್ರಜಾಪ್ರಭುತ್ವವನ್ನು ಧರ್ಮ ಎಂದುಕೊಂಡು ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದಲ್ಲಿ ಅಡಕವಾಗಿರುವ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಪಾಲನೆ ಮಾಡಬೇಕು, ಮೂಲಭೂತದಿಗಳಿಂದ ಸಂವಿಧಾನ ರಕ್ಷಣೆ ಮಾಡಬೇಕಿದೆ” ಎಂದರು.
ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿಗಳಾದ ದಾವಲಸಾಬ ತಾಳಿಕೋಟಿ, ಮಾಸುಮಲಿ ಮದಗಾರ ಮಾತನಾಡಿ, “ದೇಶದಲ್ಲಿ ಜಾತಿ–ಧರ್ಮದ ಹೆಸರಿನಲ್ಲಿ ತಾರತಮ್ಯ ನೀತಿಯನ್ನು ಅನುಸರಿಸುವ ಮೂಲಕ ಸಂವಿಧಾನ ಮೂಲ ಆಶಯಗಳಿಗೆ ಧಕ್ಕೆ ತರಲಾಗುತ್ತಿದೆ. ಸಂವಿಧಾನದಲ್ಲಿ ಜಾತ್ಯತೀತ ರಾಷ್ಟ್ರ ಎಂಬ ಉಲ್ಲೇಖವಿದೆ. ಆದರೆ, ಇಂದು ದೇಶದಲ್ಲಿ ಇದಕ್ಕೆ ವಿರುದ್ಧವಾಗಿ ಧರ್ಮದ ಆಧಾರದಲ್ಲಿ ಆಡಳಿತ ನಡೆಯುತ್ತಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜಾತಿ–ಧರ್ಮಕ್ಕಿಂತ ಸಂವಿಧಾನವೇ ಮುಖ್ಯ. ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವ ಎಂಬ ಸಂವಿಧಾನದ ಮೂಲ ಆಶಯಗಳನ್ನು ರಕ್ಷಣೆ ಮಾಡಬೇಕಿದೆ. ಸಂವಿಧಾನದ ಮೌಲ್ಯಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದರು.
ಅಂಜುಮನ್ ಇಸ್ಲಾಂ ಕಮೀಟಿ ಕಾರ್ಯದರ್ಶಿ ಫಯಾಜ್ ತೋಟದ, ಭಾಷಾ ಮುದಗಲ್ಲ ಮಾತನಾಡಿದರು. ಜಾಮೀಯ ಮಸೀದಿ ಮೌಲಾನರಾದ ಶಹೀದ್ ರಜಾ ಸಾನಿಧ್ಯವನ್ನು ವಹಿಸಿದ್ದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಶಾಲಾ ವಿಧ್ಯಾರ್ಥಿಗಳಿಂದ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ
ಕಾರ್ಯಕ್ರಮದಲ್ಲಿ ಮುಖಂಡರು ನಾಸೀರ ಸುರಪುರ, ದಾದೇಸಾಬ ಹಣಗಿ, ಇಮ್ರಾನ ಅತ್ತಾರ, ಮುಸ್ತಾಕ ಅಹ್ಮದ ಅಕ್ಕಿ, ಆರೀಫ್ ಮನಿಯಾರ, ದಾವಲಸಾಬ ಡಾಲಾಯತ, ಖಾಸಿಂಸಾಬ ಮುಚ್ಚಾಲಿ, ಶಾಮೀದ ಮಾಲ್ದಾರ, ಅಬ್ಬಾಸಲಿ ನಿಶಾನದಾರ ಮುಖ್ಯ ಶಿಕ್ಷಕಿ ಮಜನಬಿ ಹಣಗಿ, ಫಾತೀಮಾ ಕಡ್ಲಿಮಟ್ಟಿ ಸೇರಿದಂತೆ ಶಾಲಾ ಮಕ್ಕಳು, ಪಾಲಕರು ಭಾಗವಹಿಸಿದ್ದರು.
