ಗದಗ | ಅಧಿಕಾರಿಗಳ ನಿರ್ಲಕ್ಷ್ಯ: ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟ ಇಟಗಿ ಬಸ್ ನಿಲ್ದಾಣ!

Date:

Advertisements

ಸರ್ಕಾರ ಪ್ರಯಾಣಿಕರ ಅನುಕೂಲಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡಿ ಬಸ್ ನಿಲ್ದಾಣಗಳನ್ನು ನಿರ್ಮಿಸುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಣೆ ಮಾಡಲು ನಿರಾಸಕ್ತಿ ತೋರುತ್ತಿರುವುದರಿಂದ ಅನೈತಿಕ ಚಟುವಟಿಕೆಗಳ ತಾಣವಾಗಿಯೂ ಮಾರ್ಪಡುತ್ತಿದೆ. ಸಾರ್ವಜನಿಕರ ಉಪಯೋಗಕ್ಕೆಂದು ಬಸ್ ನಿಲ್ದಾಣ ನಿರ್ಮಿಸಿದರೆ, ಅದು ಉಪಯೋಗಕ್ಕೆ ಬಾರದ ಸ್ಥಿತಿಗೆ ತಲುಪುತ್ತಿದೆ.

ಇದಕ್ಕೆ ಉತ್ತಮ ನಿದರ್ಶನ ಎನ್ನುವಂತೆ ಗದಗ ಜಿಲ್ಲೆಯ ರೋಣ ತಾಲೂಕಿನ ಇಟಗಿ ಗ್ರಾಮದ ಬಸ್ ನಿಲ್ದಾಣ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಈ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದೆಯಾದರೂ, ಉಪಯೋಗಕ್ಕೆ ಬಾರದ ಸ್ಥಿತಿಗೆ ತಲುಪಿದೆ. ಈ ಬಸ್ ನಿಲ್ದಾಣ ಬೆಳಗ್ಗಿನ ಸಮಯದಲ್ಲಿ ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟರೆ, ಸಂಜೆಯ ವೇಳೆಗೆ ಮದ್ಯಪಾನದಂತಹ ಅನೈತಿಕ ಚಟುವಟಿಕೆಗಳಿಗೆ ವೇದಿಕೆಯೊದಗಿಸಿದೆ.

ಪ್ರಸಿದ್ಧಿ ಪಡೆದಿರುವ ಇಟಗಿ ಭೀಮಾಂಬಿಕೆ ದೇವಸ್ಥಾನಕ್ಕೆ ನೂರಾರು ಜನರು ಪ್ರತಿನಿತ್ಯ ಬರುತ್ತಾರೆ. ಹೀಗೆ ಬರುವ ಜನರಿಗೆ ಸರಿಯಾದ ಬಸ್ ನಿಲ್ದಾಣದಲ್ಲಿ ಕೂರಲು ವ್ಯವಸ್ಥೆ ಇರುವುದಿಲ್ಲ. ರಸ್ತೆ ಬದಿಯಲ್ಲಿಯೇ, ಬಿಸಿಲಿನಲ್ಲಿ ನಿಂತು ಬಸ್ಸಿಗೆ ಕಾಯುವಂತಾಗಿದೆ.

Advertisements

ರೋಣ ಬಸ್ಸುಗಳು ಇಟಗಿ ಗ್ರಾಮಕ್ಕೆ ಬಂದು ಸೂಡಿ  ಗ್ರಾಮದ ಮೂಲಕ ಗಜೇಂದ್ರಗಡಕ್ಕೆ ಸಾಕಷ್ಟು ಬಸ್ಸುಗಳು ಓಡಾಡುತ್ತವೆ. ಬಸ್ ನಿಲ್ದಾಣ ಅವ್ಯವಸ್ಥೆ ಆಗಿರುವುದರಿಂದ ಬೇರೆ ಕಡೆ ಬಸ್ಸುಗಳು ನಿಲ್ಲುತ್ತವೆ. ಹಾಗಾಗಿ ಪ್ರಯಾಣಿಕರು ಇಲ್ಲಿಗೆ ಬರುವುದಿಲ್ಲ

ಗ್ರಾಮದ ಬಸ್ ನಿಲ್ದಾಣವು ವಿಶಾಲವಾದ ಆವರಣ ಇದ್ದೂ ಇಲ್ಲದಂತಾಗಿದೆ. ಎಲ್ಲೆಂದರಲ್ಲಿ ಕಸ ಕಡ್ಡಿ ಬೆಳೆದು ನಿಂತಿದೆ. ಬಸ್ ನಿಲ್ದಾಣ ಉಪಯೋಗಕ್ಕೆ ಬಾರದೆ ಇರುವುದರಿಂದ ರೈತರು ಉಳ್ಳಾಗಡ್ಡಿ ಹಾಕಿದ್ದಾರೆ. ದನಕರುಗಳು ಬಿಡು ಬಿಟ್ಟಿರುತ್ತವೆ. ಇದರಿಂದ ದುರ್ವಸನೆ ಬಿರುತ್ತಿದೆ. ಇದರಿಂದ ಬಸ್ ನಿಲ್ದಾಣ ಹಾಳು ಕೊಂಪೆಯಾಗಿದೆ.

WhatsApp Image 2024 12 10 at 3.00.26 PM 1

ಇನ್ನು ಸರಿಯಾದ ನಿರ್ವಹಣೆ ಇಲ್ಲದೇ ಇರುವುದರಿಂದ ಈ ಬಸ್ ನಿಲ್ದಾಣ ಕುಡುಕರ ತಾಣವಾಗಿದೆ. ರಾತ್ರಿಯಾದರೆ ಕುಡುಕರು ಬಸ್ ನಿಲ್ದಾಣದಕ್ಕೆ ಬಂದು ಕುಡಿಯುತ್ತಾರೆ. ಇದರಿಂದ ಎಲ್ಲೆಂದರಲ್ಲಿ ಸಾರಾಯಿ ಪಾಕೇಟುಗಳು, ಬಾಟಲಿಗಳು, ಪೌಚುಗಳು ಕಾಣುತ್ತವೆ.

ಸರಕಾರದ ಅನುದಾನ ವ್ಯರ್ಥವಾದಂತಾಗಿದೆ. ಪ್ರಯಾಣಿಕರಿಗೆ ಬಸ್ ನಿಲ್ದಾಣ ಇದ್ದೂ ಇಲ್ಲದಂತಾಗಿದೆ. ಇಂತಹ ನಿಲ್ದಾಣ ನಿರ್ಮಾಣ­ವಾದರೂ ಯಾಕೆ ಮಾಡಬೇಕಿತ್ತು? ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈ ದಿನ ಡಾಟ್ ಕಾಮ್‌ನೊಂದಿಗೆ ಪ್ರಯಾಣಿಕ ಶಂಕ್ರಪ್ಪ ಎಂಬುವವರು ಮಾತನಾಡಿ, “ಎರಡು ಮೂರು ವರ್ಷಗಳಿಂದ ಈ ಬಸ್ ನಿಲ್ದಾಣ ಹೀಗೆಯೇ ಇದೆ.  ಬಸ್ ನಿಲ್ದಾಣ ಕಟ್ಟಿದರೆ ಸಾಲದು, ಸರಿಯಾಗಿ ನಿರ್ವಹಣೆಯು ಮಾಡಬೇಕು. ಸಾರಿಗೆ ಅಧಿಕಾರಿಗಳು ಇದ್ಯಾವುದನ್ನು ಮಾಡುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಬೆಳಗಾವಿ | 2ಎ ಮೀಸಲಾತಿ ಹೋರಾಟದಲ್ಲಿ ಕಲ್ಲು ತೂರಾಟ, ಐವರು ಮೇಲೆ ಎಫ್‌ಐಆರ್

ರೋಣ ಡಿಪೋ ಮ್ಯಾನೇಜರ್ ಈ ದಿನ ಡಾಟ್ ಕಾಮ್‌ ಜೊತೆಗೆ ಮಾತನಾಡಿ, “ಸಿಬ್ಬಂದಿಗಳ ಕೊರತೆ ಇದೆ. ಹಾಗಾಗಿ ಈ ರೀತಿಯಾಗಿದೆ. ಬೇರೆ ವ್ಯವಸ್ಥೆ ಮಾಡಿ ಸರಿಯಾಗಿ ನಿರ್ವಹಣೆ ಮಾಡಲಾಗುವುದು. ಇನ್ನೆರಡು ದಿನಗಳಲ್ಲಿ ಎಲ್ಲವನ್ನು ಸ್ವಚ್ಛತೆ ಮಾಡಿ, ಪ್ರಯಾಣಿಕರಿಗೆ ಅನುಕೂಲ ಆಗುವ ರೀತಿಯಲ್ಲಿ ಮಾಡಲಾಗುವುದು” ಎಂದು ಭರವಸೆ ನೀಡಿದ್ದಾರೆ.

WhatsApp Image 2024 12 10 at 3.00.26 PM
WhatsApp Image 2024 12 10 at 3.00.25 PM
SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X