ಗದಗ | ಸರ್ಕಾರಿ ಆಸ್ಪತ್ರೆಗೆ ಮೂಲಭೂತ ಸೌಲಭ್ಯ ಒದಗಿಸುವಂತೆ ಜಯ ಕರ್ನಾಟಕ ಆಗ್ರಹ

Date:

Advertisements

ಹೊಳೆಆಲೂರು ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆ ಇದ್ದರೂ ಇಲ್ಲದಂತಾಗಿದೆ. ಆಸ್ಪತ್ರೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ವೈದ್ಯರು, ಶುಶ್ರೂಷಕರು ಮತ್ತು ಹೆರಿಗೆ ವೈದ್ಯರನ್ನು ಕೂಡಲೇ ನೇಮಿಸಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಮುಖಂಡ ಬಸವರಾಜ್ ಕಾಳೆ ಆಗ್ರಹಿಸಿದೆ.

ಗದಗ ಜಿಲ್ಲೆ ರೋಣ ತಾಲೂಕು ಹೊಳೆಅಲೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಯನ್ನು ಸರಿಪಡಿಸಿ, ವೈದ್ಯರ ನೇಮಕಾತಿಗಾಗಿ ಆಗ್ರಹಿಸಿ ರೋಣದಲ್ಲಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ಬಸವರಾಜ್ ಕಾಳೆ, “ಹೊಳೆಅಲೂರು ಹೋಬಳಿ ಕೇಂದ್ರವಾಗಿದ್ದು, ಇಲ್ಲಿನ ಆಸ್ಪತ್ರೆಗೆ ಸುಮಾರು 20 ಹಳ್ಳಿಗಳ ಜನರು ಚಿಕಿತ್ಸೆಗಾಗಿ ಬರುತ್ತಾರೆ. ಆದರೆ, ಆ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ, ಪರದಾಡುವಂತಾಗಿದೆ. ಆಸ್ಪತ್ರೆಗೆ ಹೆರಿಗೆ ವೈದ್ಯರು ಸೇರಿದಂತೆ ಅಗತ್ಯವಿರುವಷ್ಟು ಮಂದಿ ವೈದ್ಯರನ್ನು ನೇಮಕ ಮಾಡಬೇಕು. 24 ಗಂಟೆಗಳೂ ಚಿಕಿತ್ಸೆ ದೊರೆವಂತೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ಸಂಘಟನೆಯ ತಾಲೂಕು ಗೌರವಾಧ್ಯಕ್ಷ ವೀರಣ್ಣ ತೆಗ್ಗಿನಮನಿ ಮಾತನಾಡಿ, “ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ 8 ದಿನಗಳ ಕಾಲಾವಕಾಶ ನೀಡುತ್ತೇವೆ. ಈ ಅವಧಿಯೊಳಗೆ ಆಸ್ಪತ್ರೆಯ ಎಲ್ಲ ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲವಾದಲ್ಲಿ, ಬೃಹತ್ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ಕಾಸಿಂ ಮನ್ನಾಪುರ, ರಿನ್ ತಾಲೂಕು ಉಪಾಧ್ಯಕ್ಷ ರಾಜು ಉಳ್ಳಾಗಡ್ಡಿ, ತಾಲೂಕು ಸಂಚಾಲಕ ಸಂತೋಷ ನರೇಗಲ್, ವಾಸುದೇವ ಪವಾರ, ಶರಣಪ್ಪ ಕಾಶಪ್ಪನವರ, ಸುರೇಶ್ ಉಸಲಕೊಪ್ಪ, ರಾಜು ಅತ್ತಾರ, ಕಾಳಿಂಗಪ್ಪ ಉಪ್ಪಾರ, ಅನಿಲ್ ಬಟ್ಟಡ, ಸಾಗರ್ ಕಲಾಲ್, ಶಿವಾನಂದ ಭಜಂತ್ರಿ, ಕಳಕಪ್ಪ ಪೋತ ಇನ್ನೂ ಅನೇಕರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X